ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ತಮಿಳುನಾಡಿನಲ್ಲಿ ಭಾರೀ ಮಳೆ ಸಾಧ್ಯತೆ | ರಾಜ್ಯದಲ್ಲಿ ನ.30 ರಿಂದ ಮಳೆ ನಿರೀಕ್ಷೆ |

November 27, 2024
11:39 PM
ಉತ್ತರ ಶ್ರೀಲಂಕಾ ಕರಾವಳಿಯ ಬಳಿ ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವು ಕೇಂದ್ರೀಕೃತವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಇಂದು ತಿಳಿಸಿದೆ.

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಬಲಗೊಂಡು ನವೆಂಬರ್ 29 ರ ರಾತ್ರಿ ತಮಿಳುನಾಡಿನ ಚೆನೈ ಮೂಲಕ ಭೂ ಪ್ರವೇಶಿಸುವ ಸಾಧ್ಯತೆ ಹೆಚ್ಚಿದೆ. ನವೆಂಬರ್ 30ರಂದು ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಮೂಲಕ ರಾಜ್ಯಕ್ಕೆ ಆಗಮಿಸುವ ನಿರೀಕ್ಷೆ ಇದೆ. ಪರಿಣಾಮವಾಗಿ ನವೆಂಬರ್ 30ರಿಂದ ರಾಜ್ಯದ ದಕ್ಷಿಣ ಒಳನಾಡು ಭಾಗಗಳಲ್ಲಿ ಭಾರಿ ಮಳೆಯ ಆತಂಕವಿದೆ. ಮುಂದಿನ 1 ವಾರದ ಕಾಲ ರಾಜ್ಯದಲ್ಲಿ ಮಳೆಯ ಮುನ್ಸೂಚನೆ ಇದೆ.…..ಮುಂದೆ ಓದಿ….

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವು ತಮಿಳುನಾಡು ಕರಾವಳಿಯ ಸಮೀಪ  ಚಂಡಮಾರುತವಾಗಿ ತೀವ್ರಗೊಂಡಿದ್ದು, ಭಾರಿ ಮಳೆಯ ಮುನ್ಸೂಚನೆ ಇದೆ.  ಉತ್ತರ ಶ್ರೀಲಂಕಾ ಕರಾವಳಿಯ ಬಳಿ ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವು ಕೇಂದ್ರೀಕೃತವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಇಂದು ತಿಳಿಸಿದೆ. ತಮಿಳುನಾಡು, ಪುದುಚೇರಿ ಮತ್ತು ಆಂಧ್ರಪ್ರದೇಶದ ಕರಾವಳಿ ಪ್ರದೇಶಗಳಲ್ಲಿ ಶನಿವಾರದವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಸಿದೆ.

ಮಳೆಯ ಬಗ್ಗೆ ಮಾಹಿತಿ ನೀಡಿದ ಐಎಂಡಿ ಮಹಾನಿರ್ದೇಶಕ ಮೃತ್ಯುಂಜಯ್ ಮಹೋಪಾತ್ರ, ವಾಯುವ್ಯ ವಾಯುಭಾರ ಕುಸಿತವು ಚಂಡಮಾರುತವಾಗಿ ತೀವ್ರಗೊಳ್ಳುವ ನಿರೀಕ್ಷೆಯಿದೆ ಎಂದು  ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಜಾಗತಿಕ ಮಾರುಕಟ್ಟೆಯಲ್ಲಿ ರಬ್ಬರ್‌ಗೆ ಐತಿಹಾಸಿಕ ದರ – ಕೆಜಿಗೆ ₹300 ಗಡಿ ದಾಟಿದ ಬೆಲೆ, ಭಾರತದಲ್ಲಿ RSS-4 ರಬ್ಬರ್‌ ಗೆ ಏರಿಕೆ
June 13, 2026
7:41 AM
by: ಮಿರರ್‌ ಡೆಸ್ಕ್
ಹಣ್ಣುಗಳಲ್ಲಿ ಕೀಟನಾಶಕ ಅವಶೇಷಗಳ ಭಯವೇ? ನೈಸರ್ಗಿಕವಾಗಿ ಸ್ವಚ್ಛಗೊಳಿಸುವ ಸರಳ ವಿಧಾನಗಳು
June 13, 2026
7:23 AM
by: ದ ರೂರಲ್ ಮಿರರ್.ಕಾಂ
Facebook, Instagram ಏಕಾಏಕಿ ಸ್ಥಗಿತ – ಜಾಗತಿಕವಾಗಿ ಲಕ್ಷಾಂತರ ಬಳಕೆದಾರರಿಗೆ ತೊಂದರೆ
June 12, 2026
8:37 PM
by: ದ ರೂರಲ್ ಮಿರರ್.ಕಾಂ
ಉತ್ತರ ಪ್ರದೇಶದಲ್ಲಿ ಅಡಿಕೆ ಮೇಲಿನ ಮಂಡಿ ತೆರಿಗೆ ರದ್ದುಪಡಿಸಿ – ಯೋಗಿ ಆದಿತ್ಯನಾಥ್‌ಗೆ ಕ್ಯಾಂಪ್ಕೊ ಮನವಿ
June 12, 2026
7:52 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror