MIRROR FOCUS

ಕರಾವಳಿ ಜಿಲ್ಲೆಯಲ್ಲಿ ಮುಂದುವರಿದ ಮಳೆ | ಹಲವು ಕಡೆ 100mm+ ಮಳೆ | ಕೆಲವು ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ | ಮಕ್ಕಳಿಗೆ ರಜೆ….ಪೋಷಕರೇ ಇರಲಿ ಎಚ್ಚರ |

Share

ಕರಾವಳಿ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಹಲವು ಕಡೆ 100 ಮಿಮೀಗಿಂತಲೂ ಅಧಿಕ ಮಳೆಯಾಗಿದೆ. ಭಾರೀ ಮಳೆಯ ಕಾರಣದಿಂದ ಕೆಲವು ತಾಲೂಕುಗಳ ಶಾಲೆಗಳಿಗೆ ರಜೆ ನೀಡಲಾಗಿದೆ. ರಜೆ ನೀಡಿದ ಬಳಿಕ ಮಕ್ಕಳ ಜವಾಬ್ದಾರಿ ಪೋಷಕರಿಗೆ. ಪೋಷಕರೇ ಈಗ ಇರಲಿ ಎಚ್ಚರ.…….. ಮುಂದೆ ಓದಿ ……

Advertisement

ಕಳೆದ ಎರಡು ದಿನಗಳಿಂದ ಕರಾವಳಿ ಭಾಗದಲ್ಲಿ ಉತ್ತಮ ಮಳೆಯಾಗುತ್ತಿದೆ. ಅದರಲ್ಲೂ ಗ್ರಾಮೀಣ ಭಾಗದಲ್ಲಿ ಭಾರೀ ಮಳೆಯಿಂದ ಹಲವು ಕಡೆ ಸಣ್ಣಪುಟ್ಟ ಕುಸಿತ, ಗಾಳಿಗೆ ಮರ ಬೀಳುವುದು ಸೇರಿದಂತೆ ಇನ್ನಿತರ ಸಮಸ್ಯೆಗಳು ಎದುರಾಗಿದೆ. ಗುರುವಾರ ಕೂಡಾ ಬೆಳಗ್ಗೆ ಮಳೆಯಾದ ಹಿನ್ನೆಲೆಯಲ್ಲಿ ಕೆಲವು ತಾಲೂಕಿನಲ್ಲಿ ಶಾಲೆಗಳಿಗೆ ಮುಂಜಾಗ್ರತಾಕ್ರಮವಾಗಿ ರಜೆ ನೀಡಲಾಗಿದೆ. ಕಳೆದ 24 ಗಂಟೆಯಲ್ಲಿ ಕರಾವಳಿ ಜಿಲ್ಲೆಯ ಹಲವು ಕಡೆ ಉತ್ತಮ ಮಳೆಯಾಗಿದೆ.

ಕೊಲ್ಲಮೊಗ್ರದಲ್ಲಿ 76 ಮಿಮೀ, ಬಾಳುಗೋಡು 104 ಮಿಮೀ, ಮಡಪ್ಪಾಡಿ 77 ಮಿಮೀ,  ಸುಬ್ರಹ್ಮಣ್ಯ 144 ಮಿಮೀ,  ಕಲ್ಲಾಜೆ 140 ಮಿಮೀ, ಬಳ್ಪ 112 ಮಿಮೀ,  ಬಾಳಿಲ 75 ಮಿಮೀ, ಬೆಳ್ಳಾರೆ 50 ಮಿಮೀ , ಐವರ್ನಾಡು 102 ಮಿಮೀ, ಸುಳ್ಯ 81 ಮಿಮೀ, ಚೆಂಬು 84 ಮಿಮೀ, , ಕೋಡಿಂಬಾಳ 42 ಮಿಮೀ, ನೆಲ್ಯಾಡಿ 82 ಮಿಮೀ, ಪಾಣಾಜೆ 66 ಮಿಮೀ, ಪುತ್ತೂರು 55 ಮಿಮೀ, ಬೆಳ್ತಂಗಡಿ 78 ಮಿಮೀ, ಬಜಗೋಳಿ 160 ಮಿಮೀ,  ಕಾರ್ಕಳ 120 ಮಿಮೀ,  ಮಂಗಳೂರು 43 ಮಿಮೀ,  ಉಡುಪಿ 93 ಮಿಮೀ ಹಾಗೂ ಕುಂಬಳೆಯಲ್ಲಿ 73 ಮಿಮೀ ಮಳೆಯಾಗಿದೆ.

ಭಾರೀ ಮಳೆಯ ಕಾರಣದಿಂದ ಶಾಲೆಗೆ ರಜೆ ನೀಡಿರುವುದರಿಂದ ಪೋಷಕರ ಎಚ್ಚರ ವಹಿಸಬೇಕಿದೆ. ಮಳೆ ಹಾಗೂ ಮಳೆಗಾಲದ ನೀರಿನ ಆಟಗಳು ಮಕ್ಕಳನ್ನು ಸೆಳೆಯುತ್ತದೆ. ಪೋಷಕರು ಕೆಲಸದ ನಿಮಿತ್ತ ತೆರಳುವ ವೇಳೆ ಮಕ್ಕಳ ಕಡೆಗೂ ಗಮನ ನೀಡಬೇಕಿದೆ. ಮಕ್ಕಳು ಮಳೆಗಾಲ ನದಿ, ಕೆರೆ, ಹೊಳೆಯ ಕಡೆಗೆ ತೆರಳದಂತೆ ಎಚ್ಚರಿಕೆ ವಹಿಸಬೇಕು. ಮನೆಯಲ್ಲಿ ಕಾಲ ಕಳೆಯುವ ಹಾಗೆ ಗಮನಿಸಬೇಕಿದೆ. ಗ್ರಾಮೀಣ ಭಾಗದಲ್ಲಿ ಶಾಲೆಗೆ ರಜೆ ನೀಡುವುದು ಪೋಷಕರಿಗೆ ಹೆಚ್ಚು ಜವಾಬ್ದಾರಿಯಿಂದ ಇರಬೇಕಾಗುತ್ತದೆ.

All the taluks in the coastal district are experiencing heavy rainfall. Some areas have received over 100 mm of rain. School holidays have been declared in some taluks due to the downpour. Parents are reminded to take responsibility for their children during this time off. Be cautious, parents.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಆಮದು | ಮಿಜೋರಾಂ ಅಡಿಕೆ ಬೆಳೆಗಾರರಿಗೆ ಸವಾಲು

ಆಮದು ಕಾರಣದಿಂದ ಮಿಜೋರಾಂ ಅಡಿಕೆ ಬೆಳೆಗಾರರು ಸ್ಪರ್ಧಾತ್ಮಕ ಬೆಲೆಯಲ್ಲಿ ತಮ್ಮ ಉತ್ಪನ್ನಗಳನ್ನು ಮಾರಾಟ…

15 hours ago

ಈಗ ಮನಸುಗಳಿಗೇ ಒಂದು ಬ್ರಹ್ಮಕಲಶ ಯಾಕಾಗಬೇಕು…?

ಇಂದು ಯಾವುದೇ ಪ್ರಮುಖ ಕ್ಷೇತ್ರಗಳನ್ನು ಗಮನಿಸಿ, ಅಲ್ಲೊಂದು ವಿವಾದ ಇಲ್ಲದೇ ಇರುವುದೇ ಇಲ್ಲ.…

17 hours ago

ಉತ್ತರ ಭಾರತದಲ್ಲಿ ಆವರಿಸಿದ ಬಿಸಿಗಾಳಿ | 27 ಹವಾಮಾನ ಕೇಂದ್ರಗಳಲ್ಲಿ 43 ಡಿಗ್ರಿಗಿಂತ ಹೆಚ್ಚಿನ ತಾಪಮಾನ |

ಈ ವಾರ ದೆಹಲಿ, ರಾಜಸ್ಥಾನ , ಗುಜರಾತ್, ಮಧ್ಯಪ್ರದೇಶ , ಮಹಾರಾಷ್ಟ್ರ ಮತ್ತು…

17 hours ago

ಹೊಸರುಚಿ | ಗುಜ್ಜೆ ಕಡಲೆ ಗಸಿ

ಗುಜ್ಜೆ ಕಡಲೆ ಗಸಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ: ಗುಜ್ಜೆ 1…

17 hours ago

ಸ್ಥಳೀಯ ಉತ್ಪನ್ನ ಉತ್ತೇಜನ, ಪರಿಸರ ಸಂರಕ್ಷಣೆಗೆ ಪ್ರಧಾನಿ ಕರೆ

ಸ್ಥಳೀಯ ಉತ್ಪನ್ನ ಉತ್ತೇಜನ, ಪರಿಸರ ಸಂರಕ್ಷಣೆ ಸೇರಿದಂತೆ ಉತ್ತಮ ಯೋಗಕ್ಷೇಮಕ್ಕೆ 9 ಸಂಕಲ್ಪಗಳನ್ನು …

18 hours ago

ರೆಪೋ ದರದಲ್ಲಿ ಶೇಕಡ  0.25ರಷ್ಟು  ಕಡಿತ | ಶೇಕಡ 6.25ರಿಂದ ಶೇಕಡ 6ಕ್ಕೆ  ಇಳಿಕೆ

ಭಾರತೀಯ ರಿಸರ್ವ್ ಬ್ಯಾಂಕ್ ನ  ಹಣಕಾಸು ನೀತಿ ಸಮಿತಿ ಹಲವು  ಮಹತ್ವದ ನಿರ್ಧಾರಗಳನ್ನು…

18 hours ago