MIRROR FOCUS

ಕರಾವಳಿ ಜಿಲ್ಲೆಯಲ್ಲಿ ಮುಂದುವರಿದ ಮಳೆ | ಹಲವು ಕಡೆ 100mm+ ಮಳೆ | ಕೆಲವು ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ | ಮಕ್ಕಳಿಗೆ ರಜೆ….ಪೋಷಕರೇ ಇರಲಿ ಎಚ್ಚರ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕರಾವಳಿ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಹಲವು ಕಡೆ 100 ಮಿಮೀಗಿಂತಲೂ ಅಧಿಕ ಮಳೆಯಾಗಿದೆ. ಭಾರೀ ಮಳೆಯ ಕಾರಣದಿಂದ ಕೆಲವು ತಾಲೂಕುಗಳ ಶಾಲೆಗಳಿಗೆ ರಜೆ ನೀಡಲಾಗಿದೆ. ರಜೆ ನೀಡಿದ ಬಳಿಕ ಮಕ್ಕಳ ಜವಾಬ್ದಾರಿ ಪೋಷಕರಿಗೆ. ಪೋಷಕರೇ ಈಗ ಇರಲಿ ಎಚ್ಚರ.…….. ಮುಂದೆ ಓದಿ ……

Advertisement
Advertisement

ಕಳೆದ ಎರಡು ದಿನಗಳಿಂದ ಕರಾವಳಿ ಭಾಗದಲ್ಲಿ ಉತ್ತಮ ಮಳೆಯಾಗುತ್ತಿದೆ. ಅದರಲ್ಲೂ ಗ್ರಾಮೀಣ ಭಾಗದಲ್ಲಿ ಭಾರೀ ಮಳೆಯಿಂದ ಹಲವು ಕಡೆ ಸಣ್ಣಪುಟ್ಟ ಕುಸಿತ, ಗಾಳಿಗೆ ಮರ ಬೀಳುವುದು ಸೇರಿದಂತೆ ಇನ್ನಿತರ ಸಮಸ್ಯೆಗಳು ಎದುರಾಗಿದೆ. ಗುರುವಾರ ಕೂಡಾ ಬೆಳಗ್ಗೆ ಮಳೆಯಾದ ಹಿನ್ನೆಲೆಯಲ್ಲಿ ಕೆಲವು ತಾಲೂಕಿನಲ್ಲಿ ಶಾಲೆಗಳಿಗೆ ಮುಂಜಾಗ್ರತಾಕ್ರಮವಾಗಿ ರಜೆ ನೀಡಲಾಗಿದೆ. ಕಳೆದ 24 ಗಂಟೆಯಲ್ಲಿ ಕರಾವಳಿ ಜಿಲ್ಲೆಯ ಹಲವು ಕಡೆ ಉತ್ತಮ ಮಳೆಯಾಗಿದೆ.

ಕೊಲ್ಲಮೊಗ್ರದಲ್ಲಿ 76 ಮಿಮೀ, ಬಾಳುಗೋಡು 104 ಮಿಮೀ, ಮಡಪ್ಪಾಡಿ 77 ಮಿಮೀ,  ಸುಬ್ರಹ್ಮಣ್ಯ 144 ಮಿಮೀ,  ಕಲ್ಲಾಜೆ 140 ಮಿಮೀ, ಬಳ್ಪ 112 ಮಿಮೀ,  ಬಾಳಿಲ 75 ಮಿಮೀ, ಬೆಳ್ಳಾರೆ 50 ಮಿಮೀ , ಐವರ್ನಾಡು 102 ಮಿಮೀ, ಸುಳ್ಯ 81 ಮಿಮೀ, ಚೆಂಬು 84 ಮಿಮೀ, , ಕೋಡಿಂಬಾಳ 42 ಮಿಮೀ, ನೆಲ್ಯಾಡಿ 82 ಮಿಮೀ, ಪಾಣಾಜೆ 66 ಮಿಮೀ, ಪುತ್ತೂರು 55 ಮಿಮೀ, ಬೆಳ್ತಂಗಡಿ 78 ಮಿಮೀ, ಬಜಗೋಳಿ 160 ಮಿಮೀ,  ಕಾರ್ಕಳ 120 ಮಿಮೀ,  ಮಂಗಳೂರು 43 ಮಿಮೀ,  ಉಡುಪಿ 93 ಮಿಮೀ ಹಾಗೂ ಕುಂಬಳೆಯಲ್ಲಿ 73 ಮಿಮೀ ಮಳೆಯಾಗಿದೆ.

ಭಾರೀ ಮಳೆಯ ಕಾರಣದಿಂದ ಶಾಲೆಗೆ ರಜೆ ನೀಡಿರುವುದರಿಂದ ಪೋಷಕರ ಎಚ್ಚರ ವಹಿಸಬೇಕಿದೆ. ಮಳೆ ಹಾಗೂ ಮಳೆಗಾಲದ ನೀರಿನ ಆಟಗಳು ಮಕ್ಕಳನ್ನು ಸೆಳೆಯುತ್ತದೆ. ಪೋಷಕರು ಕೆಲಸದ ನಿಮಿತ್ತ ತೆರಳುವ ವೇಳೆ ಮಕ್ಕಳ ಕಡೆಗೂ ಗಮನ ನೀಡಬೇಕಿದೆ. ಮಕ್ಕಳು ಮಳೆಗಾಲ ನದಿ, ಕೆರೆ, ಹೊಳೆಯ ಕಡೆಗೆ ತೆರಳದಂತೆ ಎಚ್ಚರಿಕೆ ವಹಿಸಬೇಕು. ಮನೆಯಲ್ಲಿ ಕಾಲ ಕಳೆಯುವ ಹಾಗೆ ಗಮನಿಸಬೇಕಿದೆ. ಗ್ರಾಮೀಣ ಭಾಗದಲ್ಲಿ ಶಾಲೆಗೆ ರಜೆ ನೀಡುವುದು ಪೋಷಕರಿಗೆ ಹೆಚ್ಚು ಜವಾಬ್ದಾರಿಯಿಂದ ಇರಬೇಕಾಗುತ್ತದೆ.

Advertisement

All the taluks in the coastal district are experiencing heavy rainfall. Some areas have received over 100 mm of rain. School holidays have been declared in some taluks due to the downpour. Parents are reminded to take responsibility for their children during this time off. Be cautious, parents.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರೆಂಟ್ ಹೊದ ಕೂಡ್ಲೆ ಬೊಬ್ಬೆ ಹೊಡೆಯೋದು ಯಾಕೆ..!?

ಎಂತ ಮಾರ್ರೇ.... ಈ ಮನುಷ್ಯರಿಗೆ ಒಂದು ಸೊಲ್ಪ ಹೊತ್ತು ಕರೆಂಟ್ ಹೊದ್ರೆ ಕೂಡ್ಲೆ…

16 hours ago

ಮಳೆ Update | ಕರಾವಳಿ ಜಿಲ್ಲೆಯಲ್ಲಿ ವ್ಯಾಪಕ ಮಳೆ | ಹಲವು ಕಡೆ 100 ಮಿಮೀಗಿಂತಲೂ ಅಧಿಕ ಮಳೆ | ಉಡುಪಿಯಲ್ಲಿ 164 ಮಿಮೀ ಮಳೆ |

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಸುಳ್ಯ, ಪುತ್ತೂರು,ಚೆಂಬು ಪ್ರದೇಶದ ಕೆಲವು ಕಡೆ 100…

16 hours ago

ಬಿತ್ತನೆ ಬೀಜ ರಸಗೊಬ್ಬರ ಕಾಳಸಂತೆಯಲ್ಲಿ ಮಾರಾಟ ಮಾಡಿದರೆ ಕಠಿಣ ಕ್ರಮದ ಎಚ್ಚರಿಕೆ

ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟಮಾಡುವವರು ಮತ್ತು ಕೃತಕ ಅಭಾವ ಸೃಷ್ಟಿಸುವವರ…

19 hours ago

ರೈತರು ಉತ್ತಮ ಇಳುವರಿ ಪಡೆಯಲು ಸಂಯುಕ್ತ ರಸಗೊಬ್ಬರ ಬಳಸುವಂತೆ ಕೃಷಿ ಇಲಾಖೆ ಸೂಚನೆ

ರೈತರು ಉತ್ತಮ ಇಳುವರಿ ಪಡೆಯಲು ಡಿಎಪಿ ಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಸಲು…

19 hours ago

ಬದುಕು ಪುರಾಣ | ಎಲ್ಲರೊಳಗೂ ಏಕಲವ್ಯನಿದ್ದಾನೆ!

 ‘ಏಕಲವ್ಯ’ – ಈ ಪದವು ಸಾಧನೆಯ ಐಕಾನ್. ಪರ್ಯಾಯ ಪದ. ಸಾಧನೆಗೆ ಜಾತಿ,…

19 hours ago

ಮನೆಯಲ್ಲಿ ಸಂಪತ್ತು, ಸಂತೋಷ ಹೆಚ್ಚಾಗಲು ಮುಖ್ಯ ದ್ವಾರ ಹೀಗಿರಲಿ…

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

19 hours ago