Advertisement
MIRROR FOCUS

ಕರಾವಳಿ ಜಿಲ್ಲೆಯಲ್ಲಿ ಮುಂದುವರಿದ ಮಳೆ | ಹಲವು ಕಡೆ 100mm+ ಮಳೆ | ಕೆಲವು ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ | ಮಕ್ಕಳಿಗೆ ರಜೆ….ಪೋಷಕರೇ ಇರಲಿ ಎಚ್ಚರ |

Share

ಕರಾವಳಿ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಹಲವು ಕಡೆ 100 ಮಿಮೀಗಿಂತಲೂ ಅಧಿಕ ಮಳೆಯಾಗಿದೆ. ಭಾರೀ ಮಳೆಯ ಕಾರಣದಿಂದ ಕೆಲವು ತಾಲೂಕುಗಳ ಶಾಲೆಗಳಿಗೆ ರಜೆ ನೀಡಲಾಗಿದೆ. ರಜೆ ನೀಡಿದ ಬಳಿಕ ಮಕ್ಕಳ ಜವಾಬ್ದಾರಿ ಪೋಷಕರಿಗೆ. ಪೋಷಕರೇ ಈಗ ಇರಲಿ ಎಚ್ಚರ.…….. ಮುಂದೆ ಓದಿ ……

ಕಳೆದ ಎರಡು ದಿನಗಳಿಂದ ಕರಾವಳಿ ಭಾಗದಲ್ಲಿ ಉತ್ತಮ ಮಳೆಯಾಗುತ್ತಿದೆ. ಅದರಲ್ಲೂ ಗ್ರಾಮೀಣ ಭಾಗದಲ್ಲಿ ಭಾರೀ ಮಳೆಯಿಂದ ಹಲವು ಕಡೆ ಸಣ್ಣಪುಟ್ಟ ಕುಸಿತ, ಗಾಳಿಗೆ ಮರ ಬೀಳುವುದು ಸೇರಿದಂತೆ ಇನ್ನಿತರ ಸಮಸ್ಯೆಗಳು ಎದುರಾಗಿದೆ. ಗುರುವಾರ ಕೂಡಾ ಬೆಳಗ್ಗೆ ಮಳೆಯಾದ ಹಿನ್ನೆಲೆಯಲ್ಲಿ ಕೆಲವು ತಾಲೂಕಿನಲ್ಲಿ ಶಾಲೆಗಳಿಗೆ ಮುಂಜಾಗ್ರತಾಕ್ರಮವಾಗಿ ರಜೆ ನೀಡಲಾಗಿದೆ. ಕಳೆದ 24 ಗಂಟೆಯಲ್ಲಿ ಕರಾವಳಿ ಜಿಲ್ಲೆಯ ಹಲವು ಕಡೆ ಉತ್ತಮ ಮಳೆಯಾಗಿದೆ.

ಕೊಲ್ಲಮೊಗ್ರದಲ್ಲಿ 76 ಮಿಮೀ, ಬಾಳುಗೋಡು 104 ಮಿಮೀ, ಮಡಪ್ಪಾಡಿ 77 ಮಿಮೀ,  ಸುಬ್ರಹ್ಮಣ್ಯ 144 ಮಿಮೀ,  ಕಲ್ಲಾಜೆ 140 ಮಿಮೀ, ಬಳ್ಪ 112 ಮಿಮೀ,  ಬಾಳಿಲ 75 ಮಿಮೀ, ಬೆಳ್ಳಾರೆ 50 ಮಿಮೀ , ಐವರ್ನಾಡು 102 ಮಿಮೀ, ಸುಳ್ಯ 81 ಮಿಮೀ, ಚೆಂಬು 84 ಮಿಮೀ, , ಕೋಡಿಂಬಾಳ 42 ಮಿಮೀ, ನೆಲ್ಯಾಡಿ 82 ಮಿಮೀ, ಪಾಣಾಜೆ 66 ಮಿಮೀ, ಪುತ್ತೂರು 55 ಮಿಮೀ, ಬೆಳ್ತಂಗಡಿ 78 ಮಿಮೀ, ಬಜಗೋಳಿ 160 ಮಿಮೀ,  ಕಾರ್ಕಳ 120 ಮಿಮೀ,  ಮಂಗಳೂರು 43 ಮಿಮೀ,  ಉಡುಪಿ 93 ಮಿಮೀ ಹಾಗೂ ಕುಂಬಳೆಯಲ್ಲಿ 73 ಮಿಮೀ ಮಳೆಯಾಗಿದೆ.

ಭಾರೀ ಮಳೆಯ ಕಾರಣದಿಂದ ಶಾಲೆಗೆ ರಜೆ ನೀಡಿರುವುದರಿಂದ ಪೋಷಕರ ಎಚ್ಚರ ವಹಿಸಬೇಕಿದೆ. ಮಳೆ ಹಾಗೂ ಮಳೆಗಾಲದ ನೀರಿನ ಆಟಗಳು ಮಕ್ಕಳನ್ನು ಸೆಳೆಯುತ್ತದೆ. ಪೋಷಕರು ಕೆಲಸದ ನಿಮಿತ್ತ ತೆರಳುವ ವೇಳೆ ಮಕ್ಕಳ ಕಡೆಗೂ ಗಮನ ನೀಡಬೇಕಿದೆ. ಮಕ್ಕಳು ಮಳೆಗಾಲ ನದಿ, ಕೆರೆ, ಹೊಳೆಯ ಕಡೆಗೆ ತೆರಳದಂತೆ ಎಚ್ಚರಿಕೆ ವಹಿಸಬೇಕು. ಮನೆಯಲ್ಲಿ ಕಾಲ ಕಳೆಯುವ ಹಾಗೆ ಗಮನಿಸಬೇಕಿದೆ. ಗ್ರಾಮೀಣ ಭಾಗದಲ್ಲಿ ಶಾಲೆಗೆ ರಜೆ ನೀಡುವುದು ಪೋಷಕರಿಗೆ ಹೆಚ್ಚು ಜವಾಬ್ದಾರಿಯಿಂದ ಇರಬೇಕಾಗುತ್ತದೆ.

All the taluks in the coastal district are experiencing heavy rainfall. Some areas have received over 100 mm of rain. School holidays have been declared in some taluks due to the downpour. Parents are reminded to take responsibility for their children during this time off. Be cautious, parents.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗ್ರಾಮೀಣ ಮೌಲ್ಯಗಳು ಮತ್ತು ನಗರ ಜೀವನ – ಸಮತೋಲನವೇ ನಿಜವಾದ ಮಾರ್ಗ!

ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…

2 hours ago

ದೇಶಾದ್ಯಂತ ಹವಾಮಾನದಲ್ಲಿ ಬದಲಾವಣೆ..! 13 ರಾಜ್ಯಗಳಲ್ಲಿ ಮಳೆ-ಚಂಡಮಾರುತ ಎಚ್ಚರಿಕೆ, ಉತ್ತರ ಭಾರತದಲ್ಲಿ 40°C ದಾಟಿದ ಉಷ್ಣತೆ

ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…

2 hours ago

ಅಂಜನಾದ್ರಿ ಬೆಟ್ಟ ಏರುವವರಿಗೆ ಸಮಯ ನಿಗದಿ .! ಮಧ್ಯಾಹ್ನ 11ರಿಂದ 4ರವರೆಗೆ ಪ್ರವೇಶ ಬ್ಯಾನ್

ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…

2 hours ago

ಕಲಬುರಗಿಯಲ್ಲಿ 43.2°C ತಾಪಮಾನ ದಾಖಲು..! ರಾಜ್ಯದಲ್ಲಿ ಬಿಸಿ ಏರಿಕೆ – ಮುಂದಿನ 5 ದಿನ ಎಚ್ಚರಿಕೆ

ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…

2 hours ago

ಹವಾಮಾನ ವರದಿ | 17-04-2026 | ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – ಏಪ್ರಿಲ್ 18 ರಿಂದ ಮಳೆ ಹೆಚ್ಚಳ

ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…

19 hours ago

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

2 days ago