Advertisement
MIRROR FOCUS

ಕರಾವಳಿ ಜಿಲ್ಲೆಯಲ್ಲಿ ಮುಂದುವರಿದ ಮಳೆ | ಹಲವು ಕಡೆ 100mm+ ಮಳೆ | ಕೆಲವು ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ | ಮಕ್ಕಳಿಗೆ ರಜೆ….ಪೋಷಕರೇ ಇರಲಿ ಎಚ್ಚರ |

Share

ಕರಾವಳಿ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಹಲವು ಕಡೆ 100 ಮಿಮೀಗಿಂತಲೂ ಅಧಿಕ ಮಳೆಯಾಗಿದೆ. ಭಾರೀ ಮಳೆಯ ಕಾರಣದಿಂದ ಕೆಲವು ತಾಲೂಕುಗಳ ಶಾಲೆಗಳಿಗೆ ರಜೆ ನೀಡಲಾಗಿದೆ. ರಜೆ ನೀಡಿದ ಬಳಿಕ ಮಕ್ಕಳ ಜವಾಬ್ದಾರಿ ಪೋಷಕರಿಗೆ. ಪೋಷಕರೇ ಈಗ ಇರಲಿ ಎಚ್ಚರ.…….. ಮುಂದೆ ಓದಿ ……

ಕಳೆದ ಎರಡು ದಿನಗಳಿಂದ ಕರಾವಳಿ ಭಾಗದಲ್ಲಿ ಉತ್ತಮ ಮಳೆಯಾಗುತ್ತಿದೆ. ಅದರಲ್ಲೂ ಗ್ರಾಮೀಣ ಭಾಗದಲ್ಲಿ ಭಾರೀ ಮಳೆಯಿಂದ ಹಲವು ಕಡೆ ಸಣ್ಣಪುಟ್ಟ ಕುಸಿತ, ಗಾಳಿಗೆ ಮರ ಬೀಳುವುದು ಸೇರಿದಂತೆ ಇನ್ನಿತರ ಸಮಸ್ಯೆಗಳು ಎದುರಾಗಿದೆ. ಗುರುವಾರ ಕೂಡಾ ಬೆಳಗ್ಗೆ ಮಳೆಯಾದ ಹಿನ್ನೆಲೆಯಲ್ಲಿ ಕೆಲವು ತಾಲೂಕಿನಲ್ಲಿ ಶಾಲೆಗಳಿಗೆ ಮುಂಜಾಗ್ರತಾಕ್ರಮವಾಗಿ ರಜೆ ನೀಡಲಾಗಿದೆ. ಕಳೆದ 24 ಗಂಟೆಯಲ್ಲಿ ಕರಾವಳಿ ಜಿಲ್ಲೆಯ ಹಲವು ಕಡೆ ಉತ್ತಮ ಮಳೆಯಾಗಿದೆ.

ಕೊಲ್ಲಮೊಗ್ರದಲ್ಲಿ 76 ಮಿಮೀ, ಬಾಳುಗೋಡು 104 ಮಿಮೀ, ಮಡಪ್ಪಾಡಿ 77 ಮಿಮೀ,  ಸುಬ್ರಹ್ಮಣ್ಯ 144 ಮಿಮೀ,  ಕಲ್ಲಾಜೆ 140 ಮಿಮೀ, ಬಳ್ಪ 112 ಮಿಮೀ,  ಬಾಳಿಲ 75 ಮಿಮೀ, ಬೆಳ್ಳಾರೆ 50 ಮಿಮೀ , ಐವರ್ನಾಡು 102 ಮಿಮೀ, ಸುಳ್ಯ 81 ಮಿಮೀ, ಚೆಂಬು 84 ಮಿಮೀ, , ಕೋಡಿಂಬಾಳ 42 ಮಿಮೀ, ನೆಲ್ಯಾಡಿ 82 ಮಿಮೀ, ಪಾಣಾಜೆ 66 ಮಿಮೀ, ಪುತ್ತೂರು 55 ಮಿಮೀ, ಬೆಳ್ತಂಗಡಿ 78 ಮಿಮೀ, ಬಜಗೋಳಿ 160 ಮಿಮೀ,  ಕಾರ್ಕಳ 120 ಮಿಮೀ,  ಮಂಗಳೂರು 43 ಮಿಮೀ,  ಉಡುಪಿ 93 ಮಿಮೀ ಹಾಗೂ ಕುಂಬಳೆಯಲ್ಲಿ 73 ಮಿಮೀ ಮಳೆಯಾಗಿದೆ.

ಭಾರೀ ಮಳೆಯ ಕಾರಣದಿಂದ ಶಾಲೆಗೆ ರಜೆ ನೀಡಿರುವುದರಿಂದ ಪೋಷಕರ ಎಚ್ಚರ ವಹಿಸಬೇಕಿದೆ. ಮಳೆ ಹಾಗೂ ಮಳೆಗಾಲದ ನೀರಿನ ಆಟಗಳು ಮಕ್ಕಳನ್ನು ಸೆಳೆಯುತ್ತದೆ. ಪೋಷಕರು ಕೆಲಸದ ನಿಮಿತ್ತ ತೆರಳುವ ವೇಳೆ ಮಕ್ಕಳ ಕಡೆಗೂ ಗಮನ ನೀಡಬೇಕಿದೆ. ಮಕ್ಕಳು ಮಳೆಗಾಲ ನದಿ, ಕೆರೆ, ಹೊಳೆಯ ಕಡೆಗೆ ತೆರಳದಂತೆ ಎಚ್ಚರಿಕೆ ವಹಿಸಬೇಕು. ಮನೆಯಲ್ಲಿ ಕಾಲ ಕಳೆಯುವ ಹಾಗೆ ಗಮನಿಸಬೇಕಿದೆ. ಗ್ರಾಮೀಣ ಭಾಗದಲ್ಲಿ ಶಾಲೆಗೆ ರಜೆ ನೀಡುವುದು ಪೋಷಕರಿಗೆ ಹೆಚ್ಚು ಜವಾಬ್ದಾರಿಯಿಂದ ಇರಬೇಕಾಗುತ್ತದೆ.

All the taluks in the coastal district are experiencing heavy rainfall. Some areas have received over 100 mm of rain. School holidays have been declared in some taluks due to the downpour. Parents are reminded to take responsibility for their children during this time off. Be cautious, parents.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರೀ ಮಳೆಯ ಎಚ್ಚರಿಕೆ : 24 ಗಂಟೆ ಸನ್ನದ್ಧವಾಗಿರಲು ಡಿಸಿ ಸೂಚನೆ, ಭೂಕುಸಿತ ಪ್ರದೇಶಗಳ ಮೇಲೆ ಕಟ್ಟೆಚ್ಚರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…

5 hours ago

ಹುಬ್ಬಳ್ಳಿಯಲ್ಲಿ ಹಲಸು ಮೇಳಕ್ಕೆ ಚಾಲನೆ – 50ಕ್ಕೂ ಹೆಚ್ಚು ಮಳಿಗೆಗಳು, ಹಲಸಿನ ಬಿರಿಯಾನಿಯಿಂದ ಕಬಾಬ್‌ವರೆಗೆ ಸವಿಯುವ ಅವಕಾಶ

ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…

5 hours ago

ರಾಜ್ಯಾದ್ಯಂತ ಆರ್ಭಟಿಸುತ್ತಿರುವ ವರುಣ – ಭದ್ರಾ-ನೇತ್ರಾವತಿ ಅಪಾಯದ ಮಟ್ಟ ಮೀರಿ ಪ್ರವಾಹ

ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರಿ ಮಳೆ ಮುಂದುವರಿದಿದ್ದು, ಭದ್ರಾ ಹಾಗೂ ನೇತ್ರಾವತಿ, ಕುಮಾರಧಾರಾ…

5 hours ago

ಶಿರಾಡಿ ಘಾಟ್‌ನಲ್ಲಿ ಭೂಕುಸಿತ – ರೈಲು ಸಂಚಾರಕ್ಕೆ ತಾತ್ಕಾಲಿಕ ಅಡ್ಡಿ

ಶಿರಾಡಿ ಘಾಟ್‌ನ ಎಡಕುಮರಿ–ಶಿರಿಬಾಗಿಲು ನಡುವೆ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಪರಿಹಾರ…

5 hours ago

ಮೊಬೈಲ್ ನೋಡುತ್ತಾ ಊಟ ಮಾಡಬೇಡಿ, ಶಿಸ್ತಿನ ಜೀವನವೇ ಆರೋಗ್ಯದ ರಹಸ್ಯ – ರಾಘವೇಶ್ವರ ಶ್ರೀ

ಆಹಾರ, ನಿದ್ರೆ ಮತ್ತು ಬ್ರಹ್ಮಚರ್ಯ ಸಮತೋಲನದಲ್ಲಿದ್ದಾಗ ಮಾತ್ರ ಆರೋಗ್ಯ ಹಾಗೂ ಆಧ್ಯಾತ್ಮಿಕ ಪ್ರಗತಿ…

16 hours ago

ಭಾರೀ ಮಳೆಯ ಎಚ್ಚರಿಕೆ | ಕರಾವಳಿ ಕರ್ನಾಟಕದಲ್ಲಿ ಅತಿ ಭಾರೀ ಮಳೆ – ಪ್ರವಾಹ- ಭೂಕುಸಿತದ ಎಚ್ಚರಿಕೆ

ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡು ಕರ್ನಾಟಕ ಹಾಗೂ ಕೇರಳದಲ್ಲಿ ಇಂದು ಭಾರೀ ಮಳೆಯ…

20 hours ago