ಶಿರಸಿ: ಕಳೆದ ಎರಡು ದಿನಗಳಿಂದ ಬೆಂಬಿಡದೆ ಸುರಿಯುತ್ತಿರುವ ಮಳೆಯಿಂದ ಹಲವಾರು ಆಸ್ತಿ ಮುಳುಗಡೆಯಾಗಿದೆ. ಇದೀಗ ಸಿದ್ದಾಪುರ ತಾಲೂಕಿನ ಹೆಗ್ಗರಣಿ ಬಳಿ ಕಾರೊಂದು ಹಳ್ಳದಲ್ಲಿ ಕೊಚ್ಚಿಹೋಗಿದ್ದು, 4 ಅಥವಾ 5 ಜನರು ಕಾರಿನೊಳಗೆ ಸಿಲುಕಿರುವ ಶಂಕೆ ಇದೆ.
ಬುಧವಾರ ರಾತ್ರಿ ಕೊಡನಮನೆಯ ಬಳಿಯಲ್ಲಿ ಸೇತುವೆಯಿಂದ ಆಯತಪ್ಪಿ ಕೆಳಗುರುಳಿರುವ ಕಾರು ನೀರಿನಲ್ಲಿ ಅರ್ಧ ಕಿಲೋ ಮೀಟರ್ ದೂರ ಹೋಗಿದೆ ಎನ್ನಲಾಗುತ್ತಿದ್ದು, ಈ ವಿಷಯ ಗುರುವಾರ ಮಧ್ಯಾಹ್ನದ ಸಮಯದಲ್ಲಿ ಬೆಳಕಿಗೆ ಬಂದಿದೆ.
ನಿನ್ನೆ ಶಿರಸಿ, ಸಿದ್ದಾಪುರ ಭಾಗದಲ್ಲಿ ಭಾರಿ ಪ್ರಮಾಣದಲ್ಲಿ ಮಳೆ ಸುರಿದಿದೆ. ಹಾಗಾಗಿ ಕಾರಿನ ಚಾಲಕನಿಗೆ ತಿರುವಿನಲ್ಲಿ ರಸ್ತೆ ಸರಿಯಾಗಿ ಕಾಣದೆ ಹಳ್ಳದಲ್ಲಿ ಹೋಗಿ ಬಿದ್ದಿದೆ ಎಂಬ ಮಾಹಿತಿ ತಿಳಿದು ಬಂದಿದೆ.
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…