ಶಿರಸಿ: ಕಳೆದ ಎರಡು ದಿನಗಳಿಂದ ಬೆಂಬಿಡದೆ ಸುರಿಯುತ್ತಿರುವ ಮಳೆಯಿಂದ ಹಲವಾರು ಆಸ್ತಿ ಮುಳುಗಡೆಯಾಗಿದೆ. ಇದೀಗ ಸಿದ್ದಾಪುರ ತಾಲೂಕಿನ ಹೆಗ್ಗರಣಿ ಬಳಿ ಕಾರೊಂದು ಹಳ್ಳದಲ್ಲಿ ಕೊಚ್ಚಿಹೋಗಿದ್ದು, 4 ಅಥವಾ 5 ಜನರು ಕಾರಿನೊಳಗೆ ಸಿಲುಕಿರುವ ಶಂಕೆ ಇದೆ.
ಬುಧವಾರ ರಾತ್ರಿ ಕೊಡನಮನೆಯ ಬಳಿಯಲ್ಲಿ ಸೇತುವೆಯಿಂದ ಆಯತಪ್ಪಿ ಕೆಳಗುರುಳಿರುವ ಕಾರು ನೀರಿನಲ್ಲಿ ಅರ್ಧ ಕಿಲೋ ಮೀಟರ್ ದೂರ ಹೋಗಿದೆ ಎನ್ನಲಾಗುತ್ತಿದ್ದು, ಈ ವಿಷಯ ಗುರುವಾರ ಮಧ್ಯಾಹ್ನದ ಸಮಯದಲ್ಲಿ ಬೆಳಕಿಗೆ ಬಂದಿದೆ.
ನಿನ್ನೆ ಶಿರಸಿ, ಸಿದ್ದಾಪುರ ಭಾಗದಲ್ಲಿ ಭಾರಿ ಪ್ರಮಾಣದಲ್ಲಿ ಮಳೆ ಸುರಿದಿದೆ. ಹಾಗಾಗಿ ಕಾರಿನ ಚಾಲಕನಿಗೆ ತಿರುವಿನಲ್ಲಿ ರಸ್ತೆ ಸರಿಯಾಗಿ ಕಾಣದೆ ಹಳ್ಳದಲ್ಲಿ ಹೋಗಿ ಬಿದ್ದಿದೆ ಎಂಬ ಮಾಹಿತಿ ತಿಳಿದು ಬಂದಿದೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೇಘಾಲಯಕ್ಕೆ ಭೇಟಿ ನೀಡಿದ ಸಂದರ್ಭ ಹಲಸಿನ…
ವ್ಯಾಪಾರದ ಯಶಸ್ಸು ಒಂದು ಕಾಲದಿಂದ ಇನ್ನೊಂದು ಕಾಲಕ್ಕೆ ಬದಲಾಗುತ್ತದೆ, ಮತ್ತು ಜ್ಯೋತಿಷ್ಯ ಶಾಸ್ತ್ರದ…
ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಮತ್ತು ಇತರ ಮೂವರು ಸಿಬ್ಬಂದಿಯನ್ನು…
ಸಾಮಾಜಿಕ ವ್ಯವಸ್ಥೆಯಲ್ಲಿ ‘ಸೇವೆ’ಗೆ ಮೌಲ್ಯ ನಿರ್ಧರಿಸಲು ಕಷ್ಟಸಾಧ್ಯ. ಆತ್ಮಾರ್ಥ ಸೇವೆಗಳು ಸದ್ದಾಗುವುದಿಲ್ಲ. ಫಕ್ಕನೆ…
15.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಧಾತ್ರಿ ಕೆ ರಾವ್ , 7ನೇ ತರಗತಿ ಶ್ರೀ ಅನ್ನಪೂರ್ಣೇಶ್ವರಿ ವಿದ್ಯಾಮಂದಿರ, ನಿಲುವಾಗಿಲು,…