ಶಿರಸಿ: ಕಳೆದ ಎರಡು ದಿನಗಳಿಂದ ಬೆಂಬಿಡದೆ ಸುರಿಯುತ್ತಿರುವ ಮಳೆಯಿಂದ ಹಲವಾರು ಆಸ್ತಿ ಮುಳುಗಡೆಯಾಗಿದೆ. ಇದೀಗ ಸಿದ್ದಾಪುರ ತಾಲೂಕಿನ ಹೆಗ್ಗರಣಿ ಬಳಿ ಕಾರೊಂದು ಹಳ್ಳದಲ್ಲಿ ಕೊಚ್ಚಿಹೋಗಿದ್ದು, 4 ಅಥವಾ 5 ಜನರು ಕಾರಿನೊಳಗೆ ಸಿಲುಕಿರುವ ಶಂಕೆ ಇದೆ.
ಬುಧವಾರ ರಾತ್ರಿ ಕೊಡನಮನೆಯ ಬಳಿಯಲ್ಲಿ ಸೇತುವೆಯಿಂದ ಆಯತಪ್ಪಿ ಕೆಳಗುರುಳಿರುವ ಕಾರು ನೀರಿನಲ್ಲಿ ಅರ್ಧ ಕಿಲೋ ಮೀಟರ್ ದೂರ ಹೋಗಿದೆ ಎನ್ನಲಾಗುತ್ತಿದ್ದು, ಈ ವಿಷಯ ಗುರುವಾರ ಮಧ್ಯಾಹ್ನದ ಸಮಯದಲ್ಲಿ ಬೆಳಕಿಗೆ ಬಂದಿದೆ.
ನಿನ್ನೆ ಶಿರಸಿ, ಸಿದ್ದಾಪುರ ಭಾಗದಲ್ಲಿ ಭಾರಿ ಪ್ರಮಾಣದಲ್ಲಿ ಮಳೆ ಸುರಿದಿದೆ. ಹಾಗಾಗಿ ಕಾರಿನ ಚಾಲಕನಿಗೆ ತಿರುವಿನಲ್ಲಿ ರಸ್ತೆ ಸರಿಯಾಗಿ ಕಾಣದೆ ಹಳ್ಳದಲ್ಲಿ ಹೋಗಿ ಬಿದ್ದಿದೆ ಎಂಬ ಮಾಹಿತಿ ತಿಳಿದು ಬಂದಿದೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…