ಶಿರಸಿ: ಕಳೆದ ಎರಡು ದಿನಗಳಿಂದ ಬೆಂಬಿಡದೆ ಸುರಿಯುತ್ತಿರುವ ಮಳೆಯಿಂದ ಹಲವಾರು ಆಸ್ತಿ ಮುಳುಗಡೆಯಾಗಿದೆ. ಇದೀಗ ಸಿದ್ದಾಪುರ ತಾಲೂಕಿನ ಹೆಗ್ಗರಣಿ ಬಳಿ ಕಾರೊಂದು ಹಳ್ಳದಲ್ಲಿ ಕೊಚ್ಚಿಹೋಗಿದ್ದು, 4 ಅಥವಾ 5 ಜನರು ಕಾರಿನೊಳಗೆ ಸಿಲುಕಿರುವ ಶಂಕೆ ಇದೆ.
ಬುಧವಾರ ರಾತ್ರಿ ಕೊಡನಮನೆಯ ಬಳಿಯಲ್ಲಿ ಸೇತುವೆಯಿಂದ ಆಯತಪ್ಪಿ ಕೆಳಗುರುಳಿರುವ ಕಾರು ನೀರಿನಲ್ಲಿ ಅರ್ಧ ಕಿಲೋ ಮೀಟರ್ ದೂರ ಹೋಗಿದೆ ಎನ್ನಲಾಗುತ್ತಿದ್ದು, ಈ ವಿಷಯ ಗುರುವಾರ ಮಧ್ಯಾಹ್ನದ ಸಮಯದಲ್ಲಿ ಬೆಳಕಿಗೆ ಬಂದಿದೆ.
ನಿನ್ನೆ ಶಿರಸಿ, ಸಿದ್ದಾಪುರ ಭಾಗದಲ್ಲಿ ಭಾರಿ ಪ್ರಮಾಣದಲ್ಲಿ ಮಳೆ ಸುರಿದಿದೆ. ಹಾಗಾಗಿ ಕಾರಿನ ಚಾಲಕನಿಗೆ ತಿರುವಿನಲ್ಲಿ ರಸ್ತೆ ಸರಿಯಾಗಿ ಕಾಣದೆ ಹಳ್ಳದಲ್ಲಿ ಹೋಗಿ ಬಿದ್ದಿದೆ ಎಂಬ ಮಾಹಿತಿ ತಿಳಿದು ಬಂದಿದೆ.
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…