Advertisement
ಪ್ರಮುಖ

#Monsoon | ಮುಂದುವರೆಯಲಿದೆ ಮಹಾ ಮಳೆಯ ಆರ್ಭಟ | ಉತ್ತರಭಾರತದ ರಾಜ್ಯಗಳಿಗೆ ಹವಾಮಾನ ಇಲಾಖೆ ಎಚ್ಚರಿಕೆ |

Share

ಭಾರತದ ಉತ್ತರಭಾಗದಲ್ಲಿ ಮಳೆಯ ಪ್ರತಾಪ ಇನ್ನೂ ನಿಂತಿಲ್ಲ. ಈಗಾಗಲೇ ಅಲ್ಲಿನ ಜನರ ಜೀವನ ಮೂರಾಬಟ್ಟೆಯಾಗಿದೆ. ಆದರೆ ಉತ್ತರ ಭಾರತದ ಕೆಲ ರಾಜ್ಯಗಳಲ್ಲಿ ಮಹಾ ಮಳೆಯ ಆರ್ಭಟ ಮತ್ತಷ್ಟು ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕಳೆದ ಒಂದು ವಾರದಿಂದ ನಿರಂತರ ಮಳೆ ಸುರಿಯುತ್ತಿದ್ದು,  ಜುಲೈ 11ರಂದು ಹಿಮಾಚಲಪ್ರದೇಶ, ಪಂಜಾಬ್, ಹರ್ಯಾಣ, ಚಂಡೀಗಢದಲ್ಲಿ ಮಳೆಯು ಭಾರಿ ಅನಾಹುತವನ್ನುಂಟು ಮಾಡಿತ್ತು. ಉತ್ತರಾಖಂಡ ಮತ್ತು ಉತ್ತರ ಪ್ರದೇಶದ ಪಕ್ಕದ ಪ್ರದೇಶಗಳಲ್ಲಿ ಜುಲೈ 12 ರಂದು 115.6 ರಿಂದ 204.4 ಮಿಮೀ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರಾಖಂಡದಲ್ಲಿ ಭಾರೀ ಮಳೆಯ ನಡುವೆ, IMD ಜುಲೈ 12 ಕ್ಕೆ ಆರೆಂಜ್ ಅಲರ್ಟ್ ನೀಡಿದೆ. ಸತತ ಭಾರೀ ಮಳೆಯಿಂದಾಗಿ ಉತ್ತರಾಖಂಡದ ಸೋನ್‌ಪ್ರಯಾಗ ಮತ್ತು ಗೌರಿಕುಂಡ್‌ನಲ್ಲಿ ಕೇದಾರನಾಥ ಯಾತ್ರೆಯನ್ನು ನಿಲ್ಲಿಸಲಾಗಿದೆ.

Advertisement

ಪಂಜಾಬ್ ಪಟಿಯಾಲಾ, ರೂಪನಗರ, ಮೋಗಾ, ಲುಧಿಯಾನದಲ್ಲಿ 9 ಸಾವಿರಕ್ಕೂ ಅಧಿಕ ಮಂದಿಯನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಪಶ್ಚಿಮ ಬಂಗಾಳ, ಸಿಕ್ಕಿಂ, ಅಸ್ಸಾಂ ಹಾಗೂ ಮೇಘಾಲಯ, ಅರುಣಾಚಲಪ್ರದೇಶ, ನಾಗಾಲ್ಯಾಂಡ್​, ಮಣಿಪುರ ಮತ್ತು ಬಿಹಾರದಲ್ಲಿ ಮುಂದಿನ 2 ದಿನಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜುಲೈ 14 ಹಾಗೂ 15ರಂದು ಒಡಿಶಾದಲ್ಲಿ ಭಾರಿ ಮಳೆಯಾಗಲಿದೆ, ಯಮುನಾ ನದಿಯ ನೀರಿನ ಮಟ್ಟವು ಬುಧವಾರ ಮುಂಜಾನೆ 207.18 ಮೀಟರ್‌ಗೆ ಏರಿದೆ ಮತ್ತು ರಾಜಧಾನಿಯಲ್ಲಿ ಪ್ರವಾಹದ ಭೀತಿಯನ್ನು ಉಂಟುಮಾಡುವ ನಿರೀಕ್ಷೆಯಿದೆ. ಅತಿ ಹೆಚ್ಚು ಪ್ರವಾಹ ಮಟ್ಟ ದಾಖಲೆ 207.49 ಮೀಟರ್ ಆಗಿದೆ. ಕೇಂದ್ರ ಜಲ ಆಯೋಗದ (ಸಿಡಬ್ಲ್ಯುಸಿ) ಪ್ರವಾಹ ಮೇಲ್ವಿಚಾರಣಾ ಪೋರ್ಟಲ್ ಪ್ರಕಾರ, ಯಮುನಾ ನದಿಯು ಅತ್ಯಧಿಕ ದಾಖಲೆಗೆ ಉಬ್ಬಿತು ಮತ್ತು ಹಳೆ ರೈಲ್ವೆ ಸೇತುವೆಯಲ್ಲಿ ಮಂಗಳವಾರ ರಾತ್ರಿ 8 ಗಂಟೆಗೆ 206.76 ಮೀಟರ್‌ಗಳಿಂದ ಬುಧವಾರ ಬೆಳಿಗ್ಗೆ 7 ಗಂಟೆಗೆ 207.18 ಮೀಟರ್‌ಗಳಿಗೆ ಏರಿದೆ. ಮಳೆಯಿಂದಾಗಿ ಯಮುನಾ ನದಿಯ ನೀರಿನ ಮಟ್ಟ ಹೆಚ್ಚುತ್ತಿದೆ. ನದಿ ತೀರದ ಎಲ್ಲಾ ಪೊಲೀಸ್ ಠಾಣೆಗಳಿಗೆ ಈ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲು ಸೂಚನೆ ನೀಡಲಾಗಿದೆ.

Advertisement

(ಕೃಪೆ : ಅಂತರ್ಜಾಲ )

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭೂಕುಸಿತ ಎಚ್ಚರಿಕೆ: ಸಾರ್ವಜನಿಕರು ಎಚ್ಚರ ವಹಿಸಲು ಸೂಚನೆ

ರಾಜ್ಯದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಜುಲೈ 5ರಿಂದ 9ರವರೆಗೆ ಒಂದು ಅಥವಾ ಎರಡು…

2 hours ago

ಪೆಟ್ರೋಲ್-ಡೀಸೆಲ್ ದರ ಇಳಿಕೆಯಾಗುತ್ತಾ? ಕೇಂದ್ರ ಸಚಿವರ ಸುಳಿವಿನಿಂದ ವಾಹನ ಸವಾರರಿಗೆ ಹೊಸ ನಿರೀಕ್ಷೆ

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಳೆದ ಕೆಲವು ದಿನಗಳಿಂದ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ…

23 hours ago

ನಿರಂತರ ಮಳೆ ಹಿನ್ನೆಲೆ ಜುಲೈ 3ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ-ಕಾಲೇಜುಗಳಿಗೆ ರಜೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆ ಹಾಗೂ ಭಾರತೀಯ ಹವಾಮಾನ ಇಲಾಖೆಯ…

23 hours ago

ಗ್ರಾಮಸಭೆಗೆ ಜನ ಯಾಕೆ ಬರುತ್ತಿಲ್ಲ? ಗ್ರಾಮಸಭೆಗಳು ಔಪಚಾರಿಕತೆಗೆ ಸೀಮಿತವೇ?

ಜೀವನೋಪಾಯದ ಒತ್ತಡದಿಂದ ಗ್ರಾಮಸಭೆಗೆ 55.5% ಗ್ರಾಮೀಣರು ಹಾಜರಾಗುತ್ತಿಲ್ಲ ಎಂದು ರಾಷ್ಟ್ರೀಯ ಅಧ್ಯಯನ ತಿಳಿಸಿದೆ.…

1 day ago