ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದೆ. ಮಳೆಗೆ ಇದುವರೆಗೆ ಹಾನಿಯಾಗಿರುವ ಮಾಹಿತಿಯನ್ನು ಜಿಲ್ಲಾಡಳಿತ ನೀಡಿದೆ. ಜನವರಿಯಿಂದ ಜೂನ್ 15 ರವರೆಗೆ ಜಿಲೆಯಲ್ಲಿ ಸರಾಸರಿ 596.9 ಮಿಲಿ ಮೀಟರ್ ಮಳೆಯಾಗುತ್ತಿದ್ದು, ಈ ಬಾರಿ 1414.8 ಮಿಲಿಮೀಟರ್ ಮಳೆಯಾಗಿದೆ. ಮಂಗಳೂರು ನಗರಕ್ಕೆ ನೀರುಣಿಸುವ ಬಂಟ್ವಾಳ ತಾಲೂಕಿನ ತುಂಬೆ ವೆಂಟೆಡ್ ಅಣೆಕಟ್ಟೆಯ ನೀರಿನ ಮಟ್ಟ 4.50 ಮೀಟರ್ಗೆ ಏರಿಕೆಯಾಗಿದೆ. ಜೀವನದಿಗಳಾದ ನೇತ್ರಾವತಿ, ಕುಮಾರಧಾರ ನದಿಗಳು ತುಂಬಿ ಹರಿಯುತ್ತಿವೆ.
ಮುಂಜಾಗೃತಾ ಕ್ರಮವಾಗಿ ಜಿಲ್ಲೆಯಲ್ಲಿ 6 ಸಾಂತ್ವನ ಕೇಂದ್ರಗಳನ್ನು ಗೊತ್ತುಪಡಿಸಲಾಗಿದ್ದು, ಒಂದು ಕೇಂದ್ರ ಕಾರ್ಯನಿರ್ವಹಿಸುತ್ತಿದೆ. ಮಳೆಯ ಪರಿಣಾಮ ಜಿಲ್ಲೆಯಲ್ಲಿ ಸಾಕಷ್ಟು ಹಾನಿಯೂ ಸಂಭವಿಸಿದೆ. ಏಪ್ರಿಲ್ 1 ರಿಂದ ಇದುವರೆಗೆ ಒಟ್ಟು 751 ಮನೆಗಳಿಗೆ ಹಾನಿಯಾಗಿದೆ. ಈ ಪೈಕಿ 72 ಮನೆಗಳು ಸಂಪೂರ್ಣ ನಾಶವಾಗಿವೆ. ಪ್ರಾಕೃತಿಕ ವಿಕೋಪದಿಂದ ಒಟ್ಟು 5 ಮಂದಿ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. 35 ಜಾನುವಾರು ಪ್ರಾಣಹಾನಿ ಸಂಭವಿಸಿದೆ. ಭಾರೀ ಮಳೆಯ ಪರಿಣಾಮ 4.93 ಹೆಕ್ಟೇರ್ ಪ್ರದೇಶದಲ್ಲಿನ ತೋಟಗಾರಿಕಾ ಬೆಳೆಗಳಿಗೆ ಹಾನಿಯಾಗಿದೆ. 4123 ವಿದ್ಯುತ್ ಕಂಬಗಳು ಮುರಿದು ಬಿದ್ದಿದ್ದು, 115 ವಿದ್ಯುತ್ ಪರಿವರ್ತಕಗಳು ಹಾನಿಗೀಡಾಗಿವೆ. 19 ಸೇತುವೆಗಳಿಗೆ ಹಾನಿಯಾಗಿದೆ. 206 ಕಿಲೋಮೀಟರ್ ಉದ್ದದ ರಸ್ತೆಗಳು ಹದಗೆಟ್ಟಿವೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.
ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…