ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದೆ. ಮಳೆಗೆ ಇದುವರೆಗೆ ಹಾನಿಯಾಗಿರುವ ಮಾಹಿತಿಯನ್ನು ಜಿಲ್ಲಾಡಳಿತ ನೀಡಿದೆ. ಜನವರಿಯಿಂದ ಜೂನ್ 15 ರವರೆಗೆ ಜಿಲೆಯಲ್ಲಿ ಸರಾಸರಿ 596.9 ಮಿಲಿ ಮೀಟರ್ ಮಳೆಯಾಗುತ್ತಿದ್ದು, ಈ ಬಾರಿ 1414.8 ಮಿಲಿಮೀಟರ್ ಮಳೆಯಾಗಿದೆ. ಮಂಗಳೂರು ನಗರಕ್ಕೆ ನೀರುಣಿಸುವ ಬಂಟ್ವಾಳ ತಾಲೂಕಿನ ತುಂಬೆ ವೆಂಟೆಡ್ ಅಣೆಕಟ್ಟೆಯ ನೀರಿನ ಮಟ್ಟ 4.50 ಮೀಟರ್ಗೆ ಏರಿಕೆಯಾಗಿದೆ. ಜೀವನದಿಗಳಾದ ನೇತ್ರಾವತಿ, ಕುಮಾರಧಾರ ನದಿಗಳು ತುಂಬಿ ಹರಿಯುತ್ತಿವೆ.
ಮುಂಜಾಗೃತಾ ಕ್ರಮವಾಗಿ ಜಿಲ್ಲೆಯಲ್ಲಿ 6 ಸಾಂತ್ವನ ಕೇಂದ್ರಗಳನ್ನು ಗೊತ್ತುಪಡಿಸಲಾಗಿದ್ದು, ಒಂದು ಕೇಂದ್ರ ಕಾರ್ಯನಿರ್ವಹಿಸುತ್ತಿದೆ. ಮಳೆಯ ಪರಿಣಾಮ ಜಿಲ್ಲೆಯಲ್ಲಿ ಸಾಕಷ್ಟು ಹಾನಿಯೂ ಸಂಭವಿಸಿದೆ. ಏಪ್ರಿಲ್ 1 ರಿಂದ ಇದುವರೆಗೆ ಒಟ್ಟು 751 ಮನೆಗಳಿಗೆ ಹಾನಿಯಾಗಿದೆ. ಈ ಪೈಕಿ 72 ಮನೆಗಳು ಸಂಪೂರ್ಣ ನಾಶವಾಗಿವೆ. ಪ್ರಾಕೃತಿಕ ವಿಕೋಪದಿಂದ ಒಟ್ಟು 5 ಮಂದಿ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. 35 ಜಾನುವಾರು ಪ್ರಾಣಹಾನಿ ಸಂಭವಿಸಿದೆ. ಭಾರೀ ಮಳೆಯ ಪರಿಣಾಮ 4.93 ಹೆಕ್ಟೇರ್ ಪ್ರದೇಶದಲ್ಲಿನ ತೋಟಗಾರಿಕಾ ಬೆಳೆಗಳಿಗೆ ಹಾನಿಯಾಗಿದೆ. 4123 ವಿದ್ಯುತ್ ಕಂಬಗಳು ಮುರಿದು ಬಿದ್ದಿದ್ದು, 115 ವಿದ್ಯುತ್ ಪರಿವರ್ತಕಗಳು ಹಾನಿಗೀಡಾಗಿವೆ. 19 ಸೇತುವೆಗಳಿಗೆ ಹಾನಿಯಾಗಿದೆ. 206 ಕಿಲೋಮೀಟರ್ ಉದ್ದದ ರಸ್ತೆಗಳು ಹದಗೆಟ್ಟಿವೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…
ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…