ಜೂನ್‌ ಮೊದಲ ವಾರದಲ್ಲೇ ರಾಜ್ಯಾದ್ಯಂತ ಭರ್ಜರಿ ಮಳೆ | ಭಾರೀ ಮಳೆಯಿಂದ ಆಲಮಟ್ಟಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು | ಜನರಲ್ಲಿ ಮಂದಹಾಸ

June 8, 2024
12:17 PM

ಮುಂಗಾರು(Mansoon) ಪ್ರವೇಶ ಕೇರಳಕ್ಕೆ(Kerala) ಒಂದು ವಾರಗಳ ಹಿಂದೇಯೇ ಆಗಿದ್ದರೂ  ರಾಜ್ಯಕ್ಕೆ ಇಂದಿನಿಂದ ಪ್ರವೇಶ ಪಡೆಯಲಿದೆ ಎಂದು ಹವಾಮಾನ ಇಲಾಖೆ ತಜ್ಞರು(IMD) ಉಲ್ಲೇಖಿಸಿದ್ದಾರೆ.  ಆದರೆ, ಒಂದು ವಾರದಿಂದ ಮುಂಗಾರು ಪೂರ್ವ ಮಳೆಯೇ(Pre MAsoon rain) ಭರ್ಜರಿಯಾಗಿ ಸುರಿಯುತ್ತಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಹಾಗೆ ನೆರೆ ರಾಜ್ಯ ಮಹಾರಾಷ್ಟ್ರದಲ್ಲಿ (Maharashtra) ಭಾರೀ ಮಳೆಯಾಗುತ್ತಿದೆ. ಅದರಂತೆ ಕೃಷ್ಣಾನದಿ(Krishna River) ಉಗಮಸ್ಥಾನ ಮಹಾಬಲೇಶ್ವರದಲ್ಲೂ ಭಾರೀ ಮಳೆಯಾಗಿದ್ದು, ಆಲಮಟ್ಟಿ ಜಲಾಶಯಕ್ಕೆ (Almatti Dam) ಒಳಹರಿವು ಹೆಚ್ಚಾಗಿದೆ.

ಶುಕ್ರವಾರದಿಂದ (ಜೂ.7) ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಆರಂಭವಾಗಿದೆ. ವಿಜಯಪುರ ಜಿಲ್ಲೆಯ ಆಲಮಟ್ಟಿ ಜಲಾಶಯದಲ್ಲಿ 2,578 ಕ್ಯೂಸೇಕ್ ಒಳಹರಿವು ದಾಖಲಾಗಿದೆ. ಇದರಿಂದ ಕೃಷ್ಣಾ ನದಿ ಪಾತ್ರದ ಜನರಲ್ಲಿ ಸಂತಸ ಮನೆ ಮಾಡಿದೆ. ಕಳೆದ ವರ್ಷ ಜೂನ್ ಕಳೆದರೂ ಒಳಹರಿವು ಇರಲಿಲ್ಲ. ಈ ವರ್ಷ ಜೂನ್ ಮೊದಲ ವಾರದಲ್ಲೇ ಒಳಹರಿವು ಆರಂಭವಾದ ಕಾರಣ ಕೃಷ್ಣಾ ನದಿ ಪಾತ್ರದ ಜನರಲ್ಲಿ ಸಂತಸ ಮೂಡಿದೆ.

ಜಿಲ್ಲೆಯಾದ್ಯಂತ ತಡರಾತ್ರಿ ಧಾರಾಕಾರ ಮಳೆ: ವಿಜಯಪುರ ಜಿಲ್ಲೆಯ ಹಲವೆಡೆ ಶುಕ್ರವಾರ ತಡರಾತ್ರಿ ಧಾರಾಕಾರ ಮಳೆ ಸುರಿದಿದೆ. ಇದರಿಂದ ಹಲವೆಡೆ ಮನೆಗಳಿಗೆ ನೀರು ನುಗ್ಗಿದೆ. ಸಿಂದಗಿ ತಾಲೂಕಿನ ಗೋಲಗೇರಿ ಗ್ರಾಮದಲ್ಲಿ ಮನೆಗಳಿಗೆ ನೀರು ನುಗ್ಗಿದೆ. 15ಕ್ಕೂ ಅಧಿಕ ಮನೆಗಳಿಗೆ ಮಳೆ ನೀರು ನುಗ್ಗಿದ್ದು, ಮಳೆಯ ಆರ್ಭಟಕ್ಕೆ ಜನರು ಕಂಗಾಲಾಗಿದ್ದಾರೆ. ಮನೆಯಿಂದ ನೀರು ಹೊರಹಾಕಲು ಜನರ ಹರಸಾಹಸ ಪಡುವಂತಾಗಿದೆ. ನಿನ್ನೆ ತಡರಾತ್ರಿ 1 ಗಂಟೆಗಳ ಕಾಲ ಸತತವಾಗಿ ಸುರಿದ ಮಳೆಯಿಂದ ಈ ಆವಾಂತರ ಸೃಷ್ಟಿಯಾಗಿದೆ.

ಕರಾವಳಿಯಲ್ಲಿ ಮುಂದಿನ 15 ದಿನ ಮಳೆ: ಇನ್ನೂ ರಾಜ್ಯದಲ್ಲಿ ದಾವಣಗೆರೆ, ಬೆಳಗಾವಿ, ಚಿತ್ರದುರ್ಗ, ಧಾರವಾಡ, ದಕ್ಷಿಣ ಕನ್ನಡ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮುಂಗಾರು ಮಳೆಯ ಅರ್ಭಟ ಮುಂದುವರಿದಿದೆ. ಉಡುಪಿ , ಉತ್ತರಕನ್ನಡ ಜಿಲ್ಲೆಗಳಿಗೆ ಭಾರೀ ಮಳೆ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. 30-40 ಕಿಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಮುಂದಿನ 15 ದಿನ ಕರಾವಳಿ ಭಾಗದಲ್ಲಿ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!
July 15, 2026
9:49 PM
by: ಅರುಣ್‌ ಕುಮಾರ್ ಕಾಂಚೋಡು
ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?
July 15, 2026
2:10 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?
July 15, 2026
7:02 AM
by: ದ ರೂರಲ್ ಮಿರರ್.ಕಾಂ
ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ
July 14, 2026
7:12 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror