MIRROR FOCUS

ಜೂನ್‌ ಮೊದಲ ವಾರದಲ್ಲೇ ರಾಜ್ಯಾದ್ಯಂತ ಭರ್ಜರಿ ಮಳೆ | ಭಾರೀ ಮಳೆಯಿಂದ ಆಲಮಟ್ಟಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು | ಜನರಲ್ಲಿ ಮಂದಹಾಸ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮುಂಗಾರು(Mansoon) ಪ್ರವೇಶ ಕೇರಳಕ್ಕೆ(Kerala) ಒಂದು ವಾರಗಳ ಹಿಂದೇಯೇ ಆಗಿದ್ದರೂ  ರಾಜ್ಯಕ್ಕೆ ಇಂದಿನಿಂದ ಪ್ರವೇಶ ಪಡೆಯಲಿದೆ ಎಂದು ಹವಾಮಾನ ಇಲಾಖೆ ತಜ್ಞರು(IMD) ಉಲ್ಲೇಖಿಸಿದ್ದಾರೆ.  ಆದರೆ, ಒಂದು ವಾರದಿಂದ ಮುಂಗಾರು ಪೂರ್ವ ಮಳೆಯೇ(Pre MAsoon rain) ಭರ್ಜರಿಯಾಗಿ ಸುರಿಯುತ್ತಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಹಾಗೆ ನೆರೆ ರಾಜ್ಯ ಮಹಾರಾಷ್ಟ್ರದಲ್ಲಿ (Maharashtra) ಭಾರೀ ಮಳೆಯಾಗುತ್ತಿದೆ. ಅದರಂತೆ ಕೃಷ್ಣಾನದಿ(Krishna River) ಉಗಮಸ್ಥಾನ ಮಹಾಬಲೇಶ್ವರದಲ್ಲೂ ಭಾರೀ ಮಳೆಯಾಗಿದ್ದು, ಆಲಮಟ್ಟಿ ಜಲಾಶಯಕ್ಕೆ (Almatti Dam) ಒಳಹರಿವು ಹೆಚ್ಚಾಗಿದೆ.

Advertisement
ಶುಕ್ರವಾರದಿಂದ (ಜೂ.7) ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಆರಂಭವಾಗಿದೆ. ವಿಜಯಪುರ ಜಿಲ್ಲೆಯ ಆಲಮಟ್ಟಿ ಜಲಾಶಯದಲ್ಲಿ 2,578 ಕ್ಯೂಸೇಕ್ ಒಳಹರಿವು ದಾಖಲಾಗಿದೆ. ಇದರಿಂದ ಕೃಷ್ಣಾ ನದಿ ಪಾತ್ರದ ಜನರಲ್ಲಿ ಸಂತಸ ಮನೆ ಮಾಡಿದೆ. ಕಳೆದ ವರ್ಷ ಜೂನ್ ಕಳೆದರೂ ಒಳಹರಿವು ಇರಲಿಲ್ಲ. ಈ ವರ್ಷ ಜೂನ್ ಮೊದಲ ವಾರದಲ್ಲೇ ಒಳಹರಿವು ಆರಂಭವಾದ ಕಾರಣ ಕೃಷ್ಣಾ ನದಿ ಪಾತ್ರದ ಜನರಲ್ಲಿ ಸಂತಸ ಮೂಡಿದೆ.

ಜಿಲ್ಲೆಯಾದ್ಯಂತ ತಡರಾತ್ರಿ ಧಾರಾಕಾರ ಮಳೆ: ವಿಜಯಪುರ ಜಿಲ್ಲೆಯ ಹಲವೆಡೆ ಶುಕ್ರವಾರ ತಡರಾತ್ರಿ ಧಾರಾಕಾರ ಮಳೆ ಸುರಿದಿದೆ. ಇದರಿಂದ ಹಲವೆಡೆ ಮನೆಗಳಿಗೆ ನೀರು ನುಗ್ಗಿದೆ. ಸಿಂದಗಿ ತಾಲೂಕಿನ ಗೋಲಗೇರಿ ಗ್ರಾಮದಲ್ಲಿ ಮನೆಗಳಿಗೆ ನೀರು ನುಗ್ಗಿದೆ. 15ಕ್ಕೂ ಅಧಿಕ ಮನೆಗಳಿಗೆ ಮಳೆ ನೀರು ನುಗ್ಗಿದ್ದು, ಮಳೆಯ ಆರ್ಭಟಕ್ಕೆ ಜನರು ಕಂಗಾಲಾಗಿದ್ದಾರೆ. ಮನೆಯಿಂದ ನೀರು ಹೊರಹಾಕಲು ಜನರ ಹರಸಾಹಸ ಪಡುವಂತಾಗಿದೆ. ನಿನ್ನೆ ತಡರಾತ್ರಿ 1 ಗಂಟೆಗಳ ಕಾಲ ಸತತವಾಗಿ ಸುರಿದ ಮಳೆಯಿಂದ ಈ ಆವಾಂತರ ಸೃಷ್ಟಿಯಾಗಿದೆ.

ಕರಾವಳಿಯಲ್ಲಿ ಮುಂದಿನ 15 ದಿನ ಮಳೆ: ಇನ್ನೂ ರಾಜ್ಯದಲ್ಲಿ ದಾವಣಗೆರೆ, ಬೆಳಗಾವಿ, ಚಿತ್ರದುರ್ಗ, ಧಾರವಾಡ, ದಕ್ಷಿಣ ಕನ್ನಡ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮುಂಗಾರು ಮಳೆಯ ಅರ್ಭಟ ಮುಂದುವರಿದಿದೆ. ಉಡುಪಿ , ಉತ್ತರಕನ್ನಡ ಜಿಲ್ಲೆಗಳಿಗೆ ಭಾರೀ ಮಳೆ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. 30-40 ಕಿಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಮುಂದಿನ 15 ದಿನ ಕರಾವಳಿ ಭಾಗದಲ್ಲಿ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಈ ರಾಶಿಯವರಿಗೆ ಒಂಟಿಯಾಗಿರುವುದೇ ಇಷ್ಟ, ಫ್ರೆಂಡ್ಸೂ ಬೇಡ, ಫ್ಯಾಮಿಲಿಯವ್ರೂ ಬೇಡ…!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

9 hours ago

ಬದುಕು ಪುರಾಣ | ಮೂಡದಿರಲಿ, ಮಂಥರೆ ಮನಸ್ಸು

ಸಂಸ್ಕಾರದಿಂದ ಮೀಯದ ಮನಸ್ಸು, ತನ್ನ ಬಗ್ಗೆ ಯೋಚಿಸುವುದಿಲ್ಲ. ತನ್ನ ಭವಿಷ್ಯದತ್ತ ನೋಟ ಹರಿಸುವುದಿಲ್ಲ.…

9 hours ago

ಕದನ ವಿರಾಮ ಘೋಷಣೆ | ಭಾರತ ಮತ್ತು ಪಾಕಿಸ್ತಾನ ಗಡಿಯಾಚೆಗಿನ ದಾಳಿಯನ್ನು ಕೊನೆಗೊಳಿಸಲು ಒಪ್ಪಿಕೊಂಡಿವೆ

ಶನಿವಾರ ಸಂಜೆ 5 ಗಂಟೆಗೆ ಆರಂಭವಾದ ತೀವ್ರ ಘರ್ಷಣೆಗಳ ನಂತರ ಭಾರತ ಮತ್ತು…

21 hours ago

ಕೃಷಿಕರ ಸಂಸ್ಥೆ ಕ್ಯಾಂಪ್ಕೊ ವತಿಯಿಂದ ರಾಷ್ಟ್ರೀಯ ರಕ್ಷಣಾ ನಿಧಿಗೆ 5 ಕೋಟಿ ರೂಪಾಯಿ ದೇಣಿಗೆ

ಪೆಹಲ್ಗಾಮ್ ಭಯೋತ್ಪಾದಕರ ವಿರುದ್ಧ ಪ್ರಧಾನಿ ನರೇಂದ್ರಮೋದಿಯವರು ತೆಗೆದುಕೊಂಡಿರುವ ಕಠಿಣ ಕ್ರಮವನ್ನು ಸಂಪೂರ್ಣ ಬೆಂಬಲಿಸುವುದಾಗಿ…

21 hours ago

ಹವಾಮಾನ ವರದಿ | 09-05-2025 | ಮೇ14 ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ

ಒಂದೆರಡು ಕಡೆ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. ಮೇ14ರಿಂದ…

1 day ago

ಜೂನ್‌ನಿಂದ ಈ 6 ರಾಶಿಯವರ ಅದೃಷ್ಟ ಖುಲಾಯಿಸಲಿದೆ… ಕೋಟ್ಯಾಧಿಪತಿಗಳಾಗುವ ಯೋಗ!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

1 day ago