Advertisement
MIRROR FOCUS

ಜೂನ್‌ ಮೊದಲ ವಾರದಲ್ಲೇ ರಾಜ್ಯಾದ್ಯಂತ ಭರ್ಜರಿ ಮಳೆ | ಭಾರೀ ಮಳೆಯಿಂದ ಆಲಮಟ್ಟಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು | ಜನರಲ್ಲಿ ಮಂದಹಾಸ

Share

ಮುಂಗಾರು(Mansoon) ಪ್ರವೇಶ ಕೇರಳಕ್ಕೆ(Kerala) ಒಂದು ವಾರಗಳ ಹಿಂದೇಯೇ ಆಗಿದ್ದರೂ  ರಾಜ್ಯಕ್ಕೆ ಇಂದಿನಿಂದ ಪ್ರವೇಶ ಪಡೆಯಲಿದೆ ಎಂದು ಹವಾಮಾನ ಇಲಾಖೆ ತಜ್ಞರು(IMD) ಉಲ್ಲೇಖಿಸಿದ್ದಾರೆ.  ಆದರೆ, ಒಂದು ವಾರದಿಂದ ಮುಂಗಾರು ಪೂರ್ವ ಮಳೆಯೇ(Pre MAsoon rain) ಭರ್ಜರಿಯಾಗಿ ಸುರಿಯುತ್ತಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಹಾಗೆ ನೆರೆ ರಾಜ್ಯ ಮಹಾರಾಷ್ಟ್ರದಲ್ಲಿ (Maharashtra) ಭಾರೀ ಮಳೆಯಾಗುತ್ತಿದೆ. ಅದರಂತೆ ಕೃಷ್ಣಾನದಿ(Krishna River) ಉಗಮಸ್ಥಾನ ಮಹಾಬಲೇಶ್ವರದಲ್ಲೂ ಭಾರೀ ಮಳೆಯಾಗಿದ್ದು, ಆಲಮಟ್ಟಿ ಜಲಾಶಯಕ್ಕೆ (Almatti Dam) ಒಳಹರಿವು ಹೆಚ್ಚಾಗಿದೆ.

ಶುಕ್ರವಾರದಿಂದ (ಜೂ.7) ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಆರಂಭವಾಗಿದೆ. ವಿಜಯಪುರ ಜಿಲ್ಲೆಯ ಆಲಮಟ್ಟಿ ಜಲಾಶಯದಲ್ಲಿ 2,578 ಕ್ಯೂಸೇಕ್ ಒಳಹರಿವು ದಾಖಲಾಗಿದೆ. ಇದರಿಂದ ಕೃಷ್ಣಾ ನದಿ ಪಾತ್ರದ ಜನರಲ್ಲಿ ಸಂತಸ ಮನೆ ಮಾಡಿದೆ. ಕಳೆದ ವರ್ಷ ಜೂನ್ ಕಳೆದರೂ ಒಳಹರಿವು ಇರಲಿಲ್ಲ. ಈ ವರ್ಷ ಜೂನ್ ಮೊದಲ ವಾರದಲ್ಲೇ ಒಳಹರಿವು ಆರಂಭವಾದ ಕಾರಣ ಕೃಷ್ಣಾ ನದಿ ಪಾತ್ರದ ಜನರಲ್ಲಿ ಸಂತಸ ಮೂಡಿದೆ.

ಜಿಲ್ಲೆಯಾದ್ಯಂತ ತಡರಾತ್ರಿ ಧಾರಾಕಾರ ಮಳೆ: ವಿಜಯಪುರ ಜಿಲ್ಲೆಯ ಹಲವೆಡೆ ಶುಕ್ರವಾರ ತಡರಾತ್ರಿ ಧಾರಾಕಾರ ಮಳೆ ಸುರಿದಿದೆ. ಇದರಿಂದ ಹಲವೆಡೆ ಮನೆಗಳಿಗೆ ನೀರು ನುಗ್ಗಿದೆ. ಸಿಂದಗಿ ತಾಲೂಕಿನ ಗೋಲಗೇರಿ ಗ್ರಾಮದಲ್ಲಿ ಮನೆಗಳಿಗೆ ನೀರು ನುಗ್ಗಿದೆ. 15ಕ್ಕೂ ಅಧಿಕ ಮನೆಗಳಿಗೆ ಮಳೆ ನೀರು ನುಗ್ಗಿದ್ದು, ಮಳೆಯ ಆರ್ಭಟಕ್ಕೆ ಜನರು ಕಂಗಾಲಾಗಿದ್ದಾರೆ. ಮನೆಯಿಂದ ನೀರು ಹೊರಹಾಕಲು ಜನರ ಹರಸಾಹಸ ಪಡುವಂತಾಗಿದೆ. ನಿನ್ನೆ ತಡರಾತ್ರಿ 1 ಗಂಟೆಗಳ ಕಾಲ ಸತತವಾಗಿ ಸುರಿದ ಮಳೆಯಿಂದ ಈ ಆವಾಂತರ ಸೃಷ್ಟಿಯಾಗಿದೆ.

ಕರಾವಳಿಯಲ್ಲಿ ಮುಂದಿನ 15 ದಿನ ಮಳೆ: ಇನ್ನೂ ರಾಜ್ಯದಲ್ಲಿ ದಾವಣಗೆರೆ, ಬೆಳಗಾವಿ, ಚಿತ್ರದುರ್ಗ, ಧಾರವಾಡ, ದಕ್ಷಿಣ ಕನ್ನಡ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮುಂಗಾರು ಮಳೆಯ ಅರ್ಭಟ ಮುಂದುವರಿದಿದೆ. ಉಡುಪಿ , ಉತ್ತರಕನ್ನಡ ಜಿಲ್ಲೆಗಳಿಗೆ ಭಾರೀ ಮಳೆ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. 30-40 ಕಿಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಮುಂದಿನ 15 ದಿನ ಕರಾವಳಿ ಭಾಗದಲ್ಲಿ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

6 hours ago

ಹವಾಮಾನ ವರದಿ | 21-05-2026 | ಮೇ ಅಂತ್ಯದವರೆಗೂ ಜೋರು ಮಳೆಯ ಲಕ್ಷಣವಿಲ್ಲ..! ಕರ್ನಾಟಕದಲ್ಲಿ ಮುಂಗಾರು ಮತ್ತಷ್ಟು ವಿಳಂಬ ಸಾಧ್ಯತೆ

ರಾಜ್ಯದಲ್ಲಿ ಮಳೆಯ ಚಟುವಟಿಕೆ ಕಡಿಮೆಯಾಗಿದ್ದು, ಮೇ ಅಂತ್ಯದವರೆಗೂ ಜೋರು ಮಳೆಯ ಸಾಧ್ಯತೆ ಕಡಿಮೆ…

6 hours ago

“ಕಾಕ್ರೋಚ್‌ ಜನತಾ ಪಾರ್ಟಿ” ಸದ್ದು | 60 ಲಕ್ಷ ಫಾಲೋವರ್ಸ್‌ ದಾಟಿದ ರಾಜಕೀಯ ಚಳವಳಿ..!

ಕಾಕ್ರೋಚ್‌ ಜನತಾ ಪಾರ್ಟಿ ಎಂಬ ವ್ಯಂಗ್ಯಾತ್ಮಕ ಸಾಮಾಜಿಕ ಜಾಲತಾಣ ಚಳವಳಿ 60 ಲಕ್ಷಕ್ಕೂ…

23 hours ago

ಹವಾಮಾನ ವರದಿ | 20.05.2026 | ಮೇ 26 ಬಳಿಕ ಕರ್ನಾಟಕಕ್ಕೆ ಮುಂಗಾರು ಎಂಟ್ರಿ ಸಾಧ್ಯತೆ| ಕರಾವಳಿಯಲ್ಲಿ ಮಳೆ ಕುಂಠಿತ, ಉತ್ತರ ಭಾರತಕ್ಕೆ ಮಳೆ ಸೂಚನೆ

ಕರ್ನಾಟಕದಲ್ಲಿ ಮುಂಗಾರು ಪೂರ್ವ ಚಟುವಟಿಕೆಗಳು ನಿಧಾನಗೊಂಡಿರುವ ನಡುವೆ, 21.05.2026ರ ಬೆಳಿಗ್ಗೆ 8 ಗಂಟೆವರೆಗಿನ…

1 day ago

ಉತ್ತರ ಭಾರತ ಉರಿಯುತ್ತಿದೆ – ಮೇ 25ರವರೆಗೆ ತೀವ್ರ ಬಿಸಿಗಾಳಿ ಎಚ್ಚರಿಕೆ

ಉತ್ತರ ಭಾರತದಲ್ಲಿ ಮೇ 25ರವರೆಗೆ ತೀವ್ರ ಬಿಸಿಗಾಳಿ ಮುಂದುವರಿಯುವ ಸಾಧ್ಯತೆ ಇದೆ. ಹಗಲು…

2 days ago

ರಾಸಾಯನಿಕ ಗೊಬ್ಬರ ಕೊರತೆ ಭೀತಿ‌ ; ಸಾವಯವ ಕೃಷಿಯತ್ತ ಗಮನಹರಿಸಲು ರೈತರಿಗೆ ಕೇಂದ್ರ ಸಚಿವರ ಕರೆ

ಜಾಗತಿಕ ಅಸ್ಥಿರತೆಯಿಂದ ರಸಗೊಬ್ಬರ ಲಭ್ಯತೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು…

2 days ago