MIRROR FOCUS

ತಮಿಳುನಾಡಿನಲ್ಲಿ ಮುಂದುವರೆದ ಭಾರಿ ಮಳೆ | ಭರದಿಂದ ಸಾಗಿದ ರಕ್ಷಣಾ ಕಾರ್ಯಾಚರಣೆ | ಸಹಾಯಕ್ಕೆ ನಿಂತ ನೌಕಾಪಡೆ

Share

ತಮಿಳುನಾಡಿನಲ್ಲಿ(Tamil Nadu) ವರುಣ(Rain) ತಾಂಡವವಾಡುತ್ತಿದ್ದಾನೆ. ಭಾರಿ ಮಳೆಗೆ ಅಲ್ಲಿನ ಜನರ ಜೀವನ ಅಸ್ತವ್ಯಸ್ತಗೊಂಡಿದೆ. ಕನ್ಯಾಕುಮಾರಿ ಸಮುದ್ರ(Kanyakumari) ಮತ್ತು ಅಕ್ಕಪಕ್ಕದ ಪ್ರದೇಶಗಳಲ್ಲಿ ಕಳೆದ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿದೆ. ‘ವಿಶೇಷವಾಗಿ ತಿರುನಲ್ವೇಲಿ, ತೂತುಕುಡಿ, ತೆಂಕಶಿ ಮತ್ತು ಕನ್ಯಾಕುಮಾರಿ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಭಾರಿ ಮಳೆಯಿಂದಾಗಿ ಹಲವು ಪ್ರದೇಶಗಳು ಜಲಾವೃತಗೊಂಡಿವೆ. ಹೀಗೆ ತೊಂದರೆಗೆ “ಸಿಲುಕಿರುವ ಸಾರ್ವಜನಿಕರಿಗೆ ಸಹಾಯ ಮಾಡಲು ರಾಷ್ಟ್ರೀಯ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ(The National and State Disaster Management Force) ತೀವ್ರ ರಕ್ಷಣಾ ಕಾರ್ಯಾಚರಣೆ(rescue operations) ಕೈಗೊಂಡಿದೆ. ಭಾರತೀಯ ನೌಕಾಪಡೆಯು ಟುಟಿಕೋರಿನ್ ಜಿಲ್ಲೆಯಲ್ಲಿ ಸಂತ್ರಸ್ತರಿಗೆ ಸಹಾಯ ಮಾಡಲು ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತವಾಗಿದೆ.

Advertisement

ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ತಮಿಳುನಾಡಿದ ದಕ್ಷಿಣ ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿದೆ. ಪರಿಸ್ಥಿತಿ ನಿಭಾಯಿಸಲು ತಮಿಳುನಾಡು ಸರ್ಕಾರ ಭಾರತೀಯ ನೌಕಾಪಡೆಯ ಸಹಾಯ ಕೋರಿದೆ. ಹೀಗಾಗಿ, ರಾಮನಾಥಪುರಂನ ಐಎನ್‌ಎಸ್‌ ಪರುಂಡು ನಿಲ್ದಾಣದಿಂದ ಎಎಲ್‌ಎಚ್ ಹೆಲಿಕಾಪ್ಟರ್ ಮೂಲಕ ಶ್ರೀವೈಕುಂಟಂ ರೈಲು ನಿಲ್ದಾಣದಲ್ಲಿ ಸಿಲುಕಿರುವ ಪ್ರಯಾಣಿಕರನ್ನು ರಕ್ಷಣೆ ಮಾಡಲಾಗಿದೆ. ಭಾರತೀಯ ನೌಕಾಪಡೆಯ ಎರಡು ಟೋರ್ನಿಯರ್ ವಿಮಾನಗಳು ಟುಟಿಕೋರಿನ್ ವಿಮಾನ ನಿಲ್ದಾಣಕ್ಕೆ ಪರಿಹಾರ ಸಾಮಗ್ರಿಗಳನ್ನು ಸಾಗಿಸಲು ಮಧುರೈ ವಿಮಾನ ನಿಲ್ದಾಣದಲ್ಲಿ ಸನ್ನದ್ದವಾಗಿರಿಸಲಾಗಿದೆ. ವಿಮಾನ ನಿಲ್ದಾಣದಲ್ಲಿ ಸಿಲುಕಿದವರ ರಕ್ಷಣೆಗೆ ಧಾವಿಸಲಾಗಿದೆ. ಇಲ್ಲಿಗೆ ಸುಮಾರು 410 ಕೆಜಿ ತೂಕದ ಪರಿಹಾರ ಸಾಮಗ್ರಿಗಳನ್ನು ನೌಕಾಪಡೆಯ ವಿಮಾನಗಳ ಮೂಲಕ ಪೂರೈಕೆ ಮಾಡಲಾಗಿದೆ. ಇಂದು ಸುಮಾರು 3.5 ಟನ್ ತೂಕದ ಪರಿಹಾರ ಸಾಮಗ್ರಿಗಳನ್ನು ಟುಟಿಕೋರಿನ್‌ಗೆ ಕೊಂಡೊಯ್ಯಬೇಕಿದೆ.

ಪ್ರವಾಹ ಪೀಡಿತ ಪ್ರದೇಶಗಳಲ್ಲಿ 10 ಸದಸ್ಯರನ್ನೊಳಗೊಂಡ ತಂಡಗಳನ್ನು ನಿಯೋಜಿಸಲಾಗಿದೆ. ಇದುವರೆಗೆ 150ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದ್ದು, 250 ಕುಟುಂಬಗಳಿಗೆ ಪರಿಹಾರ ಸಾಮಗ್ರಿ ಒದಗಿಸಲಾಗಿದೆ. ಅಲ್ಲದೇ, ಭಾರತೀಯ ನೌಕಾಪಡೆಯ ಡೋರ್ನಿಯ‌ರ್ ಏರ್‌ಕ್ರಾಫ್ಟ್, ಎಎಲ್‌ಎಚ್ ಹೆಲಿಕಾಪ್ಟರ್‌ಗಳನ್ನು ನಿರಂತರವಾಗಿ ಪೀಡಿತ ಜನರಿಗೆ ಸಹಾಯ ಮಾಡಲು ನಿಯೋಜಿಸಲಾಗಿದೆ. ನೌಕಾಪಡೆ ಮಾತ್ರ ಭಾರತೀಯ ಸೇನೆ ಕೂಡಾ ರಕ್ಷಣಾ ಪರಿಹಾರ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದೆ. ತಮಿಳುನಾಡು ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ತಿರುನಲ್ವೇಲಿ ಜಿಲ್ಲೆಯಲ್ಲಿ ಪ್ರವಾಹದ ಸಂದರ್ಭದಲ್ಲಿ ಪ್ರವಾಹ ಪರಿಹಾರ ಕಾರ್ಯಾಚರಣೆಯಲ್ಲಿ ತೊಡಗಿದೆ.

ದಕ್ಷಿಣದ ಜಿಲ್ಲೆಗಳಲ್ಲಿ ಪ್ರವಾಹಕ್ಕೆ ಸಿಲುಕಿರುವ ಪ್ರದೇಶಗಳಲ್ಲಿ ಭಾರತೀಯ ಕರಾವಳಿ ರಕ್ಷಣಾ ಪಡೆ ತನ್ನ ಹಡಗುಗಳು ವೆ ವಿಮಾನಗಳೊಂದಿಗೆ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ಐಸಿಜಿ ತಂಡ ಇಂದು ತೂತುಕುಡಿ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಸಿಲುಕಿದ್ದ 200 ಜನರನ್ನು ರಕ್ಷಿಸಿದೆ. ಭಾರತೀಯ ಹವಾಮಾನ ಕೇಂದ್ರದ ಭಾರಿ ಮಳೆಯ ಎಚ್ಚರಿಕೆ ನೀಡಿ ಹೀಗಾಗಿ ಭಾರತೀಯ ಕೋಸ್ಟ್ ಗಾರ್ಡ್ ನೌಕೆ ಸುಜಯ್, ಮಳೆ ಪೀಡಿತ ಪ್ರದೇಶಗಳಲ್ಲಿ ಬೀಡುಬಿಟ್ಟಿದೆ.

Kanyakumari sea in Tamil Nadu and neighboring areas have been receiving heavy rains for the past two days. The districts of Tirunelveli, Thoothukudi, Tenkashi and Kanyakumari have received the highest rainfall. Many areas have been flooded due to heavy rains. The National and State Disaster Management Force has launched intensive rescue operations to help the distressed public. The Indian Navy is engaged in rescue operations to help the victims in Tuticorin district.

– ಅಂತರ್ಜಾಲ ಮಾಹಿತಿ

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅನುಭವದ ಕೃಷಿಯಿಂದ ಡಾಟಾ ಆಧಾರಿತ “ಸ್ಮಾರ್ಟ್ ಫಾರ್ಮಿಂಗ್ “‌ ಕಡೆಗೆ ಆಧುನಿಕ ಕೃಷಿ

ಸ್ಮಾರ್ಟ್ ಕೃಷಿಯು ಕೃಷಿ ವಲಯದಲ್ಲಿ ಕ್ರಾಂತಿಕಾರಕ ಬದಲಾವಣೆ ತರುತ್ತಿದೆ. ತಂತ್ರಜ್ಞಾನ, ಯಾಂತ್ರೀಕರಣ ಮತ್ತು…

5 minutes ago

ಜೂ.30 ರಿಂದ ಮಂಡ್ಯ ಮೈಶುಗರ್ ಕಾರ್ಖಾನೆಯಲ್ಲಿ  ಕಬ್ಬು ಅರೆಯುವ ಪ್ರಕ್ರಿಯೆ ಆರಂಭ

ಮಂಡ್ಯ ಮೈಷುಗರ್ ಕಾರ್ಖಾನೆಯಲ್ಲಿ ಪ್ರಸಕ್ತ ಸಾಲಿನ ಕಬ್ಬು ಅರೆಯುವ ಪ್ರಕ್ರಿಯೆ ಜೂನ್ 30ರಿಂದ…

1 hour ago

ಸಹಕಾರ ಕ್ಷೇತ್ರದಲ್ಲಿ ಬಹುದೊಡ್ಡ ಕ್ರಾಂತಿ | ಸಚಿವ ಅಮಿತ್‌ ಶಾ ಹೇಳಿಕೆ

ಇಂದು ಸಹಕಾರ ಕ್ಷೇತ್ರದಲ್ಲಿ ಬಹುದೊಡ್ಡ ಕ್ರಾಂತಿಯಾಗುತ್ತಿದೆ. 8 ಲಕ್ಷಕ್ಕೂ ಅಧಿಕ ಸಹಕಾರಿ ಸಂಘಗಳು…

1 hour ago

ಈ 5 ವಸ್ತು ಮನೆಯ ದಕ್ಷಿಣ ದಿಕ್ಕಿನಲ್ಲಿ ಇಟ್ಟರೆ ಶ್ರೀಮಂತರಾಗುವುದು ಗ್ಯಾರಂಟಿ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

1 hour ago

ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ ಸಂಭವ | ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು, ಶಿವಮೊಗ್ಗ, ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ…

8 hours ago

ಮಣಿಪುರದಲ್ಲಿ 68 ಟನ್ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಅಡಿಕೆ ವಶ

ಅಕ್ರಮವಾಗಿ ಸುಮಾರು 68 ಟನ್‌ ಅಡಿಕೆ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಅಸ್ಸಾಂ ಪೊಲೀಸರು…

24 hours ago