ರಾಜ್ಯದ ಹಲವೆಡೆ ಮುಂದುವರೆದ ಮಳೆ | ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಧಾರಾಕಾರ ಮಳೆ | ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್

May 30, 2025
8:31 AM

ರಾಜ್ಯಾದ್ಯಂತ ಮಳೆ ಮುಂದುವರೆದಿದೆ. ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಸುರಿಯುತ್ತಿರುವ  ಧಾರಾಕಾರ ಮಳೆಗೆ ಸಾಮಾನ್ಯ ಜನಜೀವನ ಸಂಪೂರ್ಣ ವ್ಯತ್ಯಯಗೊಂಡಿದೆ. ಇಂದೂ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಶಾಲೆಗಳ ಪುನರಾರಂಭವನ್ನು ಶನಿವಾರದವರೆಗೆ ಮುಂದೂಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು ಕೆಲವು ಹಳ್ಳಿಗಳಿಗೆ ಕಳೆದ 1 ವಾರದಿಂದಲೂ ವಿದ್ಯುತ್ ಇಲ್ಲದೆ ಕಗ್ಗತ್ತಲಲ್ಲಿರುವಂತಾಗಿದೆ. ತೀವ್ರ ಗಾಳಿಯಿಂದಾಗಿ ಅನೇಕ ಕಡೆಗಳಲ್ಲಿ ವಿದ್ಯುತ್ ಕಂಬಗಳು ಧರೆಗುರುಳುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ.‌ ಇಂದೂ ಕೂಡಾ  ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡ ಮಲೆನಾಡು ಜಿಲ್ಲೆಗಳಿಗೆ  ವ್ಯಾಪಕವಾಗಿ  ಮಳೆ ಹಾಗೂ ಅಲ್ಲಲ್ಲಿ ಅತಿ ಭಾರಿ ಮಳೆ ಯಾಗಲಿದ್ದು, ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ದುಬಾರೆ ಸಾಕಾನೆ ಶಿಬಿರಕ್ಕೆ ಪ್ರವಾಸಿಗರ ಭೇಟಿಯನ್ನು ನಿರ್ಭಂಧಿಸಲಾಗಿದೆ. ಕಾವೇರಿ ನದಿಯಲ್ಲಿ ನೀರಿನ ಹರಿವು ತೀವ್ರ ಹೆಚ್ಚಳವಾಗಿರುವ ಹಿನ್ನಲೆಯಲ್ಲಿ ಸಾಕಾನೆ ಶಿಬಿರಕ್ಕೆ ಕಾವೇರಿ ನದಿ ದಾಟಿ ತೆರಳಬೇಕಾಗಿರುವ ಹಿನ್ನಲೆಯಲ್ಲಿ ಈ ಪ್ರದೇಶಕ್ಕೆ ಸಾರ್ವಜನಿಕರ ಭೇಟಿಯನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ. ಉತ್ತರಕನ್ನಡ ಜಿಲ್ಲೆಯ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ನಿನ್ನೆ ಸಂಜೆಯಿಂದ ವ್ಯಾಪಕ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಇಂದು ಅಂಗನವಾಡಿ ಹಾಗೂ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ ಕರಾವಳಿ ತಾಲೂಕಾದ ಭಟ್ಕಳದಲ್ಲಿ ಅತೀ ಹೆಚ್ಚು 114 ಮಿಲಿ ಮೀಟರ್ ಮಳೆ ವರದಿಯಾಗಿದೆ. ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕರಾವಳಿಯಲ್ಲಿ ಮಳೆ ಮುಂದುವರಿದಿದ್ದು,‌ ಆರೆಂಜ್  ಅಲರ್ಟ್ ಘೋಷಿಸಲಾಗಿದೆ. ಭಾರೀ ಗಾಳಿ ಮಳೆಯ ಪರಿಣಾಮ ಅಲ್ಲಲ್ಲಿ ಹಾನಿಯೂ ಉಂಟಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.  ಭಾರೀ ಗಾಳಿ ಮಳೆಯ ಪರಿಣಾಮವಾಗಿ ಜಿಲ್ಲೆಯಲ್ಲಿ  ಅಪಾರ ಹಾನಿ ಉಂಟಾಗಿದೆ.  ಎಪ್ರಿಲ್ 1 ರಿಂದ ನಿನ್ನೆಯವರೆಗೆ ಮೇ 28 ಒಟ್ಟು 252  ಮನೆಗಳಿಗೆ  ಹಾನಿಯಾಗಿದೆ. ಈ ಪೈಕಿ 12 ಮನೆಗಳು ಸಂಪೂರ್ಣ ಹಾನಿಗೀಡಾಗಿವೆ.  ಉಡುಪಿ ಜಿಲ್ಲೆಯಲ್ಲಿ ಭಾರೀ ಗಾಳಿ-ಮಳೆ ಮುಂದುವರೆದಿದ್ದು, ಇಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿತ್ತು.

ಮುಂದಿನ ಒಂದು ವಾರಗಳಲ್ಲಿ  ರಾಜ್ಯದಾದ್ಯಂತ ಅಲ್ಲಲ್ಲಿ  ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ
August 22, 2026
2:07 PM
by: ಸಾಯಿಶೇಖರ್ ಕರಿಕಳ
ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ
August 22, 2026
6:47 AM
by: ದ ರೂರಲ್ ಮಿರರ್.ಕಾಂ
ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ
August 21, 2026
7:49 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ
August 21, 2026
4:04 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror