Advertisement
MIRROR FOCUS

ಮಹಾ ಮಳೆಗೆ ಹೈರಾಣಾದ ಮುಂಬೈ ಜನತೆ : ಶಾಲೆಗಳು ಬಂದ್, ರೈಲು, ವಾಹನ ಸಂಚಾರಕ್ಕೆ ಅಡಚಣೆ : ಜನಜೀವನ ಅಸ್ಥವ್ಯಸ್ಥ

Share

ವಾಣಿಜ್ಯ ನಗರಿ(commercial city) ಮುಂಬೈನಲ್ಲಿ(Mumbai) ಕಳೆದ 24 ಗಂಟೆಗಳ ಅವಧಿಯಲ್ಲಿ ದಾಖಲೆಯ ಮಳೆಯಾಗಿದೆ(Record rainfall) . 2019ರ ನಂತರ ಒಂದೇ ದಿನ 300 ಮಿ.ಮೀ ಮಳೆ ಸುರಿದಿದೆ. ಈ ಪರಿಸ್ಥಿತಿ ಇನ್ನೂ ಮುಂದುವರೆಯುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ(IMD) ರೆಡ್​ ಅಲರ್ಟ್​​(Red Alert) ನೀಡಿದೆ. ವಾಣಿಜ್ಯ ನಗರಿಯಲ್ಲಿ ಮುಂಬೈನಲ್ಲಿ ಕಳೆದ ರಾತ್ರಿ ಸುರಿದ ಭಾರೀ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ರಸ್ತೆಗಳು(Roads), ಹೆದ್ದಾರಿಗಳು(Highway) ಜಲಾವೃತವಾಗಿವೆ. ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಿದೆ.

Advertisement
Advertisement

ಶಾಲಾ ಕಾಲೇಜುಗಳು ಬೆಳಗಿನ ತರಗತಿಗಳನ್ನು ರದ್ದು ಮಾಡಲಾಗಿದೆ. ಪರಿಸ್ಥಿತಿ ಅವಲೋಕಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಬೃಹನ್​ ಮುಂಬೈ ಮುನ್ಸಿಪಲ್​ ಕಾರ್ಪೊರೇಷನ್​ (ಬಿಎಂಸಿ) ತಿಳಿಸಿದೆ. ಮಧ್ಯರಾತ್ರಿ 1ರಿಂದ ಬೆಳಗ್ಗೆ 7 ಗಂಟೆಯವರೆಗೆ ಅಂದರೆ ಆರು ತಾಸಿನಲ್ಲಿ ದಾಖಲೆಯ 300 ಎಂಎಂ ಮಳೆ ಸುರಿದಿದೆ. ಮುಂದಿನ ಎರಡು ದಿನಗಳ ಕಾಲವೂ ಭಾರೀ ಮಳೆಯಾಗುವ ಮುನ್ಸೂಚನೆ ಇದೆ ಎಂದು ಬಿಎಂಸಿ ತಿಳಿಸಿದೆ.

ಮುಂಬೈ-ಗುಜರಾತ್​, ಮುಂಬೈ- ಪುಣೆ, ಮುಂಬೈ-ಕೊಲ್ಹಾಪುರ ಸೆಕ್ಟರ್​​ ರೈಲುಗಳು ರದ್ದು ಅಥವಾ ವಿಳಂಬವಾಗಿ ಪ್ರಯಾಣ ಬೆಳೆಸಿವೆ. ಸಾಂತಾಕ್ರೂಜ್, ಅಂಧೇರಿ, ಜೋಗೇಶ್ವರಿ, ಮಲಾಡ್, ಕಾಂದಿವಾಲ್ ಮತ್ತು ದಹಿಸರ್ ಸೇರಿದಂತೆ ಹಲವು ಸಬ್​​ವೇಗಳಲ್ಲಿ 3ರಿಂದ 5 ಅಡಿಗಳಷ್ಟು ನೀರು ನಿಂತಿದ್ದು, ಪೂರ್ವ ಪಶ್ಚಿಮ ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.

ದಹಿಸರ್, ಬೊರಿವಲಿ, ಕಾಂದಿವಲಿ, ಮಲಾಡ್, ಜೋಗೇಶ್ವರಿ, ಅಂಧೇರಿ, ಸಾಂತಾಕ್ರೂಜ್, ಸಿಯಾನ್, ವಡಾಲಾ, ಕುರ್ಲಾ, ಘಾಟ್‌ಕೋಪರ್, ಭಾಂಡೂಪ್ ಮತ್ತು ಥಾಣೆಯಲ್ಲಿ ಜೋರು ಮಳೆಯಿಂದಾಗಿ ಅನೇಕ ಮನೆಗಳು ಜಲಾವೃತಗೊಂಡಿವೆ. ಸೇತುವೆಯಲ್ಲಿ ಕೊಚ್ಚಿ ಹೋಗುತ್ತಿದ್ದ 54 ಜನರನ್ನು ರಕ್ಷಿಸಲಾಗಿದೆ. ವಿವಿಧ ಪ್ರದೇಶಗಳಲ್ಲಿ ಕನಿಷ್ಠ 275 ಮನೆಗಳು ಹಾನಿಗೊಳಗಾಗಿದ್ದು, ಸುಮಾರು 20 ವಾಹನಗಳು ಜಲಾವೃತವಾಗಿವೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

5 hours ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

6 hours ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

6 hours ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

6 hours ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

6 hours ago

ಜಾಗತಿಕ ಒತ್ತಡ – ಗ್ರಾಮೀಣ ಜೀವನೋಪಾಯ | ಅಡಿಕೆ ಕುರಿತ ನಿಜವಾದ ಚರ್ಚೆ ಈಗ ಆರಂಭವಾಗಬೇಕು

ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…

6 hours ago