Advertisement
MIRROR FOCUS

ಮಹಾ ಮಳೆಗೆ ಹೈರಾಣಾದ ಮುಂಬೈ ಜನತೆ : ಶಾಲೆಗಳು ಬಂದ್, ರೈಲು, ವಾಹನ ಸಂಚಾರಕ್ಕೆ ಅಡಚಣೆ : ಜನಜೀವನ ಅಸ್ಥವ್ಯಸ್ಥ

Share

ವಾಣಿಜ್ಯ ನಗರಿ(commercial city) ಮುಂಬೈನಲ್ಲಿ(Mumbai) ಕಳೆದ 24 ಗಂಟೆಗಳ ಅವಧಿಯಲ್ಲಿ ದಾಖಲೆಯ ಮಳೆಯಾಗಿದೆ(Record rainfall) . 2019ರ ನಂತರ ಒಂದೇ ದಿನ 300 ಮಿ.ಮೀ ಮಳೆ ಸುರಿದಿದೆ. ಈ ಪರಿಸ್ಥಿತಿ ಇನ್ನೂ ಮುಂದುವರೆಯುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ(IMD) ರೆಡ್​ ಅಲರ್ಟ್​​(Red Alert) ನೀಡಿದೆ. ವಾಣಿಜ್ಯ ನಗರಿಯಲ್ಲಿ ಮುಂಬೈನಲ್ಲಿ ಕಳೆದ ರಾತ್ರಿ ಸುರಿದ ಭಾರೀ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ರಸ್ತೆಗಳು(Roads), ಹೆದ್ದಾರಿಗಳು(Highway) ಜಲಾವೃತವಾಗಿವೆ. ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಿದೆ.

ಶಾಲಾ ಕಾಲೇಜುಗಳು ಬೆಳಗಿನ ತರಗತಿಗಳನ್ನು ರದ್ದು ಮಾಡಲಾಗಿದೆ. ಪರಿಸ್ಥಿತಿ ಅವಲೋಕಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಬೃಹನ್​ ಮುಂಬೈ ಮುನ್ಸಿಪಲ್​ ಕಾರ್ಪೊರೇಷನ್​ (ಬಿಎಂಸಿ) ತಿಳಿಸಿದೆ. ಮಧ್ಯರಾತ್ರಿ 1ರಿಂದ ಬೆಳಗ್ಗೆ 7 ಗಂಟೆಯವರೆಗೆ ಅಂದರೆ ಆರು ತಾಸಿನಲ್ಲಿ ದಾಖಲೆಯ 300 ಎಂಎಂ ಮಳೆ ಸುರಿದಿದೆ. ಮುಂದಿನ ಎರಡು ದಿನಗಳ ಕಾಲವೂ ಭಾರೀ ಮಳೆಯಾಗುವ ಮುನ್ಸೂಚನೆ ಇದೆ ಎಂದು ಬಿಎಂಸಿ ತಿಳಿಸಿದೆ.

ಮುಂಬೈ-ಗುಜರಾತ್​, ಮುಂಬೈ- ಪುಣೆ, ಮುಂಬೈ-ಕೊಲ್ಹಾಪುರ ಸೆಕ್ಟರ್​​ ರೈಲುಗಳು ರದ್ದು ಅಥವಾ ವಿಳಂಬವಾಗಿ ಪ್ರಯಾಣ ಬೆಳೆಸಿವೆ. ಸಾಂತಾಕ್ರೂಜ್, ಅಂಧೇರಿ, ಜೋಗೇಶ್ವರಿ, ಮಲಾಡ್, ಕಾಂದಿವಾಲ್ ಮತ್ತು ದಹಿಸರ್ ಸೇರಿದಂತೆ ಹಲವು ಸಬ್​​ವೇಗಳಲ್ಲಿ 3ರಿಂದ 5 ಅಡಿಗಳಷ್ಟು ನೀರು ನಿಂತಿದ್ದು, ಪೂರ್ವ ಪಶ್ಚಿಮ ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.

ದಹಿಸರ್, ಬೊರಿವಲಿ, ಕಾಂದಿವಲಿ, ಮಲಾಡ್, ಜೋಗೇಶ್ವರಿ, ಅಂಧೇರಿ, ಸಾಂತಾಕ್ರೂಜ್, ಸಿಯಾನ್, ವಡಾಲಾ, ಕುರ್ಲಾ, ಘಾಟ್‌ಕೋಪರ್, ಭಾಂಡೂಪ್ ಮತ್ತು ಥಾಣೆಯಲ್ಲಿ ಜೋರು ಮಳೆಯಿಂದಾಗಿ ಅನೇಕ ಮನೆಗಳು ಜಲಾವೃತಗೊಂಡಿವೆ. ಸೇತುವೆಯಲ್ಲಿ ಕೊಚ್ಚಿ ಹೋಗುತ್ತಿದ್ದ 54 ಜನರನ್ನು ರಕ್ಷಿಸಲಾಗಿದೆ. ವಿವಿಧ ಪ್ರದೇಶಗಳಲ್ಲಿ ಕನಿಷ್ಠ 275 ಮನೆಗಳು ಹಾನಿಗೊಳಗಾಗಿದ್ದು, ಸುಮಾರು 20 ವಾಹನಗಳು ಜಲಾವೃತವಾಗಿವೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ

ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…

4 hours ago

ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ

PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…

11 hours ago

ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ

ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…

22 hours ago

ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ

ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…

1 day ago

ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್

ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…

1 day ago

ತೆಂಗಿನ ಮರದಿಂದ 3 ಕೋಟಿ ಜನರಿಗೆ ಬದುಕು…!, ಈಗ ₹7,038 ಕೋಟಿ ರಫ್ತು!

ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ…

1 day ago