Advertisement
MIRROR FOCUS

ಮಹಾ ಮಳೆಗೆ ಹೈರಾಣಾದ ಮುಂಬೈ ಜನತೆ : ಶಾಲೆಗಳು ಬಂದ್, ರೈಲು, ವಾಹನ ಸಂಚಾರಕ್ಕೆ ಅಡಚಣೆ : ಜನಜೀವನ ಅಸ್ಥವ್ಯಸ್ಥ

Share

ವಾಣಿಜ್ಯ ನಗರಿ(commercial city) ಮುಂಬೈನಲ್ಲಿ(Mumbai) ಕಳೆದ 24 ಗಂಟೆಗಳ ಅವಧಿಯಲ್ಲಿ ದಾಖಲೆಯ ಮಳೆಯಾಗಿದೆ(Record rainfall) . 2019ರ ನಂತರ ಒಂದೇ ದಿನ 300 ಮಿ.ಮೀ ಮಳೆ ಸುರಿದಿದೆ. ಈ ಪರಿಸ್ಥಿತಿ ಇನ್ನೂ ಮುಂದುವರೆಯುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ(IMD) ರೆಡ್​ ಅಲರ್ಟ್​​(Red Alert) ನೀಡಿದೆ. ವಾಣಿಜ್ಯ ನಗರಿಯಲ್ಲಿ ಮುಂಬೈನಲ್ಲಿ ಕಳೆದ ರಾತ್ರಿ ಸುರಿದ ಭಾರೀ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ರಸ್ತೆಗಳು(Roads), ಹೆದ್ದಾರಿಗಳು(Highway) ಜಲಾವೃತವಾಗಿವೆ. ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಿದೆ.

ಶಾಲಾ ಕಾಲೇಜುಗಳು ಬೆಳಗಿನ ತರಗತಿಗಳನ್ನು ರದ್ದು ಮಾಡಲಾಗಿದೆ. ಪರಿಸ್ಥಿತಿ ಅವಲೋಕಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಬೃಹನ್​ ಮುಂಬೈ ಮುನ್ಸಿಪಲ್​ ಕಾರ್ಪೊರೇಷನ್​ (ಬಿಎಂಸಿ) ತಿಳಿಸಿದೆ. ಮಧ್ಯರಾತ್ರಿ 1ರಿಂದ ಬೆಳಗ್ಗೆ 7 ಗಂಟೆಯವರೆಗೆ ಅಂದರೆ ಆರು ತಾಸಿನಲ್ಲಿ ದಾಖಲೆಯ 300 ಎಂಎಂ ಮಳೆ ಸುರಿದಿದೆ. ಮುಂದಿನ ಎರಡು ದಿನಗಳ ಕಾಲವೂ ಭಾರೀ ಮಳೆಯಾಗುವ ಮುನ್ಸೂಚನೆ ಇದೆ ಎಂದು ಬಿಎಂಸಿ ತಿಳಿಸಿದೆ.

ಮುಂಬೈ-ಗುಜರಾತ್​, ಮುಂಬೈ- ಪುಣೆ, ಮುಂಬೈ-ಕೊಲ್ಹಾಪುರ ಸೆಕ್ಟರ್​​ ರೈಲುಗಳು ರದ್ದು ಅಥವಾ ವಿಳಂಬವಾಗಿ ಪ್ರಯಾಣ ಬೆಳೆಸಿವೆ. ಸಾಂತಾಕ್ರೂಜ್, ಅಂಧೇರಿ, ಜೋಗೇಶ್ವರಿ, ಮಲಾಡ್, ಕಾಂದಿವಾಲ್ ಮತ್ತು ದಹಿಸರ್ ಸೇರಿದಂತೆ ಹಲವು ಸಬ್​​ವೇಗಳಲ್ಲಿ 3ರಿಂದ 5 ಅಡಿಗಳಷ್ಟು ನೀರು ನಿಂತಿದ್ದು, ಪೂರ್ವ ಪಶ್ಚಿಮ ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.

ದಹಿಸರ್, ಬೊರಿವಲಿ, ಕಾಂದಿವಲಿ, ಮಲಾಡ್, ಜೋಗೇಶ್ವರಿ, ಅಂಧೇರಿ, ಸಾಂತಾಕ್ರೂಜ್, ಸಿಯಾನ್, ವಡಾಲಾ, ಕುರ್ಲಾ, ಘಾಟ್‌ಕೋಪರ್, ಭಾಂಡೂಪ್ ಮತ್ತು ಥಾಣೆಯಲ್ಲಿ ಜೋರು ಮಳೆಯಿಂದಾಗಿ ಅನೇಕ ಮನೆಗಳು ಜಲಾವೃತಗೊಂಡಿವೆ. ಸೇತುವೆಯಲ್ಲಿ ಕೊಚ್ಚಿ ಹೋಗುತ್ತಿದ್ದ 54 ಜನರನ್ನು ರಕ್ಷಿಸಲಾಗಿದೆ. ವಿವಿಧ ಪ್ರದೇಶಗಳಲ್ಲಿ ಕನಿಷ್ಠ 275 ಮನೆಗಳು ಹಾನಿಗೊಳಗಾಗಿದ್ದು, ಸುಮಾರು 20 ವಾಹನಗಳು ಜಲಾವೃತವಾಗಿವೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

15 hours ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

21 hours ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

21 hours ago

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

1 day ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

2 days ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

2 days ago