Advertisement
MIRROR FOCUS

ಮಹಾ ಮಳೆಗೆ ಹೈರಾಣಾದ ಮುಂಬೈ ಜನತೆ : ಶಾಲೆಗಳು ಬಂದ್, ರೈಲು, ವಾಹನ ಸಂಚಾರಕ್ಕೆ ಅಡಚಣೆ : ಜನಜೀವನ ಅಸ್ಥವ್ಯಸ್ಥ

Share

ವಾಣಿಜ್ಯ ನಗರಿ(commercial city) ಮುಂಬೈನಲ್ಲಿ(Mumbai) ಕಳೆದ 24 ಗಂಟೆಗಳ ಅವಧಿಯಲ್ಲಿ ದಾಖಲೆಯ ಮಳೆಯಾಗಿದೆ(Record rainfall) . 2019ರ ನಂತರ ಒಂದೇ ದಿನ 300 ಮಿ.ಮೀ ಮಳೆ ಸುರಿದಿದೆ. ಈ ಪರಿಸ್ಥಿತಿ ಇನ್ನೂ ಮುಂದುವರೆಯುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ(IMD) ರೆಡ್​ ಅಲರ್ಟ್​​(Red Alert) ನೀಡಿದೆ. ವಾಣಿಜ್ಯ ನಗರಿಯಲ್ಲಿ ಮುಂಬೈನಲ್ಲಿ ಕಳೆದ ರಾತ್ರಿ ಸುರಿದ ಭಾರೀ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ರಸ್ತೆಗಳು(Roads), ಹೆದ್ದಾರಿಗಳು(Highway) ಜಲಾವೃತವಾಗಿವೆ. ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಿದೆ.

ಶಾಲಾ ಕಾಲೇಜುಗಳು ಬೆಳಗಿನ ತರಗತಿಗಳನ್ನು ರದ್ದು ಮಾಡಲಾಗಿದೆ. ಪರಿಸ್ಥಿತಿ ಅವಲೋಕಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಬೃಹನ್​ ಮುಂಬೈ ಮುನ್ಸಿಪಲ್​ ಕಾರ್ಪೊರೇಷನ್​ (ಬಿಎಂಸಿ) ತಿಳಿಸಿದೆ. ಮಧ್ಯರಾತ್ರಿ 1ರಿಂದ ಬೆಳಗ್ಗೆ 7 ಗಂಟೆಯವರೆಗೆ ಅಂದರೆ ಆರು ತಾಸಿನಲ್ಲಿ ದಾಖಲೆಯ 300 ಎಂಎಂ ಮಳೆ ಸುರಿದಿದೆ. ಮುಂದಿನ ಎರಡು ದಿನಗಳ ಕಾಲವೂ ಭಾರೀ ಮಳೆಯಾಗುವ ಮುನ್ಸೂಚನೆ ಇದೆ ಎಂದು ಬಿಎಂಸಿ ತಿಳಿಸಿದೆ.

ಮುಂಬೈ-ಗುಜರಾತ್​, ಮುಂಬೈ- ಪುಣೆ, ಮುಂಬೈ-ಕೊಲ್ಹಾಪುರ ಸೆಕ್ಟರ್​​ ರೈಲುಗಳು ರದ್ದು ಅಥವಾ ವಿಳಂಬವಾಗಿ ಪ್ರಯಾಣ ಬೆಳೆಸಿವೆ. ಸಾಂತಾಕ್ರೂಜ್, ಅಂಧೇರಿ, ಜೋಗೇಶ್ವರಿ, ಮಲಾಡ್, ಕಾಂದಿವಾಲ್ ಮತ್ತು ದಹಿಸರ್ ಸೇರಿದಂತೆ ಹಲವು ಸಬ್​​ವೇಗಳಲ್ಲಿ 3ರಿಂದ 5 ಅಡಿಗಳಷ್ಟು ನೀರು ನಿಂತಿದ್ದು, ಪೂರ್ವ ಪಶ್ಚಿಮ ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.

ದಹಿಸರ್, ಬೊರಿವಲಿ, ಕಾಂದಿವಲಿ, ಮಲಾಡ್, ಜೋಗೇಶ್ವರಿ, ಅಂಧೇರಿ, ಸಾಂತಾಕ್ರೂಜ್, ಸಿಯಾನ್, ವಡಾಲಾ, ಕುರ್ಲಾ, ಘಾಟ್‌ಕೋಪರ್, ಭಾಂಡೂಪ್ ಮತ್ತು ಥಾಣೆಯಲ್ಲಿ ಜೋರು ಮಳೆಯಿಂದಾಗಿ ಅನೇಕ ಮನೆಗಳು ಜಲಾವೃತಗೊಂಡಿವೆ. ಸೇತುವೆಯಲ್ಲಿ ಕೊಚ್ಚಿ ಹೋಗುತ್ತಿದ್ದ 54 ಜನರನ್ನು ರಕ್ಷಿಸಲಾಗಿದೆ. ವಿವಿಧ ಪ್ರದೇಶಗಳಲ್ಲಿ ಕನಿಷ್ಠ 275 ಮನೆಗಳು ಹಾನಿಗೊಳಗಾಗಿದ್ದು, ಸುಮಾರು 20 ವಾಹನಗಳು ಜಲಾವೃತವಾಗಿವೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

7 hours ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

14 hours ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

15 hours ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

1 day ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

2 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

2 days ago