Advertisement
MIRROR FOCUS

ಸೂಪಾ ಜಲಾಶಯದ ಜಲಾನಯನ ಪ್ರದೇಶಗಳಲ್ಲಿ ಭಾರಿ ಮಳೆ | ಪ್ರವಾಹದ ಮುನ್ಸೂಚನೆ | ಸುರಕ್ಷಿತ ಪ್ರದೇಶಕ್ಕೆ ತೆರಳುವಂತೆ ಜನರಿಗೆ ಕೆಪಿಸಿಎಲ್ ಮನವಿ

Share

ಸೋನೆ ಮಳೆಯ ಅಬ್ಬರ ಜೋರಾಗಿದ್ದು, ಕಾಳಿ ನದಿಗೆ(Kali River) ನಿರ್ಮಿಸಿರುವ ಸೂಪಾ ಜಲಾಶಯ(Supa Dam) ಗರಿಷ್ಠ ಮಟ್ಟ ತಲುಪುತ್ತಿದೆ. ಈ ಹಿನ್ನೆಲೆಯಲ್ಲಿ ಜಲಾಶಯದಿಂದ ಹೆಚ್ಚುವರಿ ನೀರು ಹೊರಬಿಡುವ ಸಾಧ್ಯತೆ ಇರುವ ಕಾರಣ, ಸುರಕ್ಷಿತ ಸ್ಥಳಕ್ಕೆ ಹೋಗುವಂತೆ ಅಣೆಕಟ್ಟೆಯ(Dam) ಕೆಳದಂಡೆಯಲ್ಲಿರುವ ಜನರಿಗೆ ಕೆಪಿಸಿಎಲ್(KPCL) ಮನವಿ ಮಾಡಿದೆ.

ಸೂಪಾ ಜಲಾಶಯದ ಜಲಾನಯನ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿದೆ(Heavy Rain). ನೀರಿನ ಒಳಹರಿವು ಹೆಚ್ಚಾದ ಹಿನ್ನೆಲೆ, ಜಲಾಶಯದ ನೀರಿನ ಮಟ್ಟ ಸತತವಾಗಿ ಏರುತ್ತಲೇ ಇದೆ. ಜಲಾಶಯದ ಗರಿಷ್ಠ ಮಟ್ಟ 564 ಮೀಟರ್ ಆಗಿದ್ದು, ನೀರಿನ ಸಂಗ್ರಹಣಾ ಸಾಮರ್ಥ್ಯ 147.55 ಟಿಎಂಸಿ ಆಗಿದೆ. ಪ್ರಸ್ತುತ (ಆ. 25ರಂದು) 558.95 ಅಡಿಗೂ ಹೆಚ್ಚು ನೀರು ನಿಂತಿದ್ದು, 126.662 ಟಿಎಂಸಿ ನೀರು ಸಂಗ್ರಹವಾಗಿದೆ. ಅಲ್ಲದೆ, ಜಲಾಶಯದ ಒಳಹರಿವು 25,954 ಕ್ಯುಸೆಕ್ ಇದೆ.

ಇದೇ ರೀತಿ ಒಳಹರಿವು ಹೆಚ್ಚಾದರೆ ಜಲಾಶಯದ ನೀರಿನ ಮಟ್ವ ಗರಿಷ್ಠ ಮಟ್ಟ ತಲುಪುವ ಸಾಧ್ಯತೆ ಇದೆ. ಹಾಗಾಗಿ ಸುರಕ್ಷತೆ ದೃಷ್ಟಿಯಿಂದ ಹೆಚ್ಚುವರಿ ನೀರನ್ನು ಯಾವುದೇ ಸಮಯದಲ್ಲಿ ಅಣೆಕಟ್ಟಿನಿಂದ ಹೊರಬಿಡಬೇಕಾಗುವ  ಸಂದರ್ಭ ಎದುರಾಗಬಹುದು. ಆದ್ದರಿಂದ ಅಣೆಕಟ್ಟೆಯ ದಂಡೆಯಲ್ಲಿರುವ ಮತ್ತು ನದಿಯ ಪಾತ್ರದುದ್ದಕ್ಕೂ ಇರುವ ಸಾರ್ವಜನಿಕರು ತಮ್ಮ ಜನ, ಜಾನುವಾರು ಇತ್ಯಾದಿಗಳೊಂದಿಗೆ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಗೊಳ್ಳಬೇಕು ಎಂದು ಕೆಪಿಸಿಎಲ್ ಮನವಿ ಮಾಡಿದೆ. ಅಲ್ಲದೆ, ಸೂಪಾ ಅಣೆಕಟ್ಟೆಯ ಕೆಳಭಾಗದ ನದಿ ಪಾತ್ರದಲ್ಲಿ ದೋಣಿ ಸಂಚಾರ, ಮೀನುಗಾರಿಕೆ, ಜಲ ಸಾಹಸ ಕ್ರೀಡೆಗಳು ಸೇರಿದಂತೆ ಇತರೆ ಚಟುವಟಿಕೆಗಳನ್ನು ಮಳೆಗಾಲ ಮುಗಿಯುವವರೆಗೂ ನಡೆಸಬಾರದು ಎಂದು ಇದೇ ವೇಳೆ ಕೋರಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

22 hours ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ

ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…

23 hours ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ

ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…

23 hours ago

ವಿಘ್ನಗಳ ಆಚೆ ಕಾಣುವ ಗಣೇಶತತ್ತ್ವ

ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…

1 day ago

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

2 days ago