Advertisement
ಮಾಹಿತಿ

ಕಾವೇರಿ ಜಲಾನಯನ ಪ್ರದೇಶದಲ್ಲಿ ಭರ್ಜರಿ ಮಳೆ : ತುಂಬುತ್ತಿರುವ KRS ಡ್ಯಾಂ : ನಾಳೆಯಿಂದ ನಾಲೆಗಳಿಗೆ ನೀರು ಬಿಡುವ ಸಾಧ್ಯತೆ

Share

ರಾಜ್ಯದ ಬಹುತೇಕ ಕಡೆ ಮುಂಗಾರು(Mansoon) ಚುರುಕುಗೊಂಡು ನದಿ(River), ಹಳ್ಳ-ಕೊಳ್ಳಗಳು ಮೈದುಂಬಿ ಹರಿಯುತ್ತಿವೆ. ಕಾವೇರಿ ಜಲಾನಯನ(Cauvery Basin) ಪ್ರದೇಶದಲ್ಲಿ ಕಳೆದ ವಾರದಿಂದ ಒಳ್ಳೆ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೆಆರ್‌ಎಸ್‌ ಅಣೆಕಟ್ಟಿಗೆ ಅಧಿಕ ಪ್ರಮಾಣದ ನೀರು ಹರಿದು ಬರುತ್ತಿದೆ. ಆದರೆ ಕೆಆರ್‌ಎಸ್‌ (KRS Dam) ಜಲಾಶಯದಿಂದ ನಾಲೆಗಳಿಗೆ(Canals) ನೀರು ಬಿಡುಗಡೆಯನ್ನು ಮುಂದೂಡಲಾಗಿದೆ. ನಾಲಾ ಆಧುನೀಕರಣ ಕಾಮಗಾರಿಯಿಂದಾಗಿ ನೀರು ಬಿಡುಗಡೆ ವಿಳಂಬವಾಗಿದೆ.

ಬುಧವಾರದಿಂದ ಅಂದರೆ ಜುಲೈ 10ರ ಮೇಲೆ ನಾಲೆಗೆ ನೀರು ಹರಿಸುವ ಸಾಧ್ಯತೆ ಇದೆ. ನಿನ್ನೆ ಸಂಜೆಯಿಂದಲೇ ನೀರು ಬಿಡುಗಡೆ ಮಾಡವುದಾಗಿ ಜಿಲ್ಲಾಡಳಿತ ತಿಳಿಸಿತ್ತು. ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಸಭೆ ನಡೆಸಿ ನೀರು ಬಿಡುಗಡೆಗೆ ತೀರ್ಮಾನಿಸಲಾಗಿತ್ತು. ಜು.8ರಿಂದ 15 ದಿನ ನೀರು ಬಿಡುಗಡೆ ಮಾಡುವುದಾಗಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದರು. ಆದರೆ ವಿಶ್ವೇಶ್ವರಯ್ಯ ನಾಲೆ ಆಧುನೀಕರಣ ಕಾಮಗಾರಿಗೆಯಿಂದ ನೀರು ಬಿಡುಗಡೆ ತಡವಾಗಿದೆ. ಕಾಮಗಾರಿ ನಡೆಯುತ್ತಿರುವ ಸ್ಥಳಗಳಲ್ಲಿ ನಾಲೆಯಲ್ಲೇ ಯಂತ್ರೋಪಕರಣಗಳು ಇವೆ. ನಾಲೆಯಿಂದ ಯಂತ್ರೋಪಕರಣ ತೆರವುಗೊಳಿಸಿ ನೀರು ಬಿಡುಗಡೆ ಮಾಡುವ ಸಾಧ್ಯತೆ ಇದೆ.

 

ಇಂದಿನ ಕೆಆರ್‌ಎಸ್ ನೀರಿನ ಮಟ್ಟ
ಗರಿಷ್ಠ ಮಟ್ಟ – 124.80 ಅಡಿ.
ಇಂದಿನ ಮಟ್ಟ – 103.40 ಅಡಿ.
ಗರಿಷ್ಠ ಸಾಂದ್ರತೆ – 49.452 ಟಿಎಂಸಿ
ಇಂದಿನ ಸಾಂದ್ರತೆ – 25.594 ಟಿಎಂಸಿ
ಒಳ ಹರಿವು – 6,600 ಕ್ಯೂಸೆಕ್
ಹೊರ ಹರಿವು – 575 ಕ್ಯೂಸೆಕ್

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಉದ್ಯೋಗಾಕಾಂಕ್ಷಿಗಳಿಗೆ ಅವಕಾಶ | ಜುಲೈ 21ರಂದು ಕ್ರೆಡಿಟ್ ಕಾರ್ಡ್ ಸೇಲ್ಸ್ ಟೀಮ್ ಲೀಡರ್ ಹುದ್ದೆಗೆ ನೇರ ಸಂದರ್ಶನ

ಕ್ಯಾಲಿಬರ್ ಕಂಪೆನಿ ವತಿಯಿಂದ ಕ್ರೆಡಿಟ್ ಕಾರ್ಡ್ ಸೇಲ್ಸ್ ಟೀಮ್ ಲೀಡರ್ ಹುದ್ದೆಗಳಿಗೆ ಜುಲೈ…

3 hours ago

ಜುಲೈ 31 ರೊಳಗೆ ಬೆಳೆವಿಮೆ ನೋಂದಣಿ ಮಾಡಿಸಿಕೊಳ್ಳಿ – ಅಡಿಕೆ, ಕಾಳುಮೆಣಸು ಬೆಳೆಗಾರರಿಗೆ ಅವಕಾಶ

ದಕ್ಷಿಣ ಕನ್ನಡ ಜಿಲ್ಲೆಯ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಾರರಿಗೆ ಹವಾಮಾನ ಆಧಾರಿತ ಬೆಳೆವಿಮೆ…

4 hours ago

ಕರಾವಳಿ–ಹವಾಮಾನ ವರದಿ | 18-07-2026 | ಮಲೆನಾಡಿನಲ್ಲಿ ಇನ್ನೂ 10 ದಿನ ಮಳೆ ಮುಂದುವರಿಕೆ…! ಉತ್ತರ ಒಳನಾಡಿನಲ್ಲಿ ಜುಲೈ 19 ರಿಂದ ಮಳೆ ಇಳಿಮುಖ

ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಮಳೆ ಮುಂದುವರಿಯುವ…

11 hours ago

ಮಳೆ ಎಚ್ಚರಿಕೆ – ಉಡುಪಿ, ದಕ್ಷಿಣ ಕನ್ನಡ ಸೇರಿ ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ, ಗಂಟೆಗೆ 50 ಕಿ.ಮೀ. ವೇಗದ ಗಾಳಿ ಸಾಧ್ಯತೆ

ಮುಂದಿನ 3 ಗಂಟೆಗಳ ಕಾಲ ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ…

15 hours ago

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

3 days ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

3 days ago