Advertisement
MIRROR FOCUS

ಕಾವೇರಿ, ಕಲ್ಯಾಣ ಕರ್ನಾಟಕದಲ್ಲಿ ಉತ್ತಮ ಮಳೆ | ಜಲಾಶಯಗಳಿಗೆ ಹರಿದುಬರುತ್ತಿರುವ ನೀರು |

Share

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ(Mansoon Rain). ರೈತರು(Farmers) ಮೊಗದಲ್ಲಿ ಮಂದಹಾಸ ಮೂಡಿದೆ. ರಾಜ್ಯದ ಅಣೆಕಟ್ಟುಗಳಿಗೆ(Dam) ನೀರು ಹರಿದು ಬರುತ್ತಿದ್ದು, ಕೃಷಿ ಚಟುವಟೆಕೆಗಳಿಗೆ( ಲಾಭವಾಗುತ್ತಿದೆ. ಕಲ್ಯಾಣ ಕರ್ನಾಟಕದ (Kalyana Karnataka Rains) ಚಿಂಚೊಳ್ಳಿ ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ನಾಗರಾಳ‌ ಬಳಿ ಇರುವ  ಮುಲ್ಲಾಮಾರಿ ಜಲಾಶಯದ ಒಳಹರಿವು ಹೆಚ್ಚಳವಾಗುತ್ತಿದೆ. ಇತ್ತ ಕೆಆರ್‌ಎಸ್ ಜಲಾಶಯಕ್ಕೆ(KRS Dam) 2404 ಕ್ಯೂಸೆಕ್‌ ನೀರು ಹರಿದು ಬರುತ್ತಿದ್ದು, ಜಲಾಶಯದಿಂದ 454 ಕ್ಯೂಸೆಕ್‌ ನೀರನ್ನು ಹೊರ ಬೀಡಲಾಗುತ್ತಿದೆ.

Advertisement
Advertisement

ಮುಲ್ಲಾಮಾರಿ ಕೆಳದಂಡೆ ಜಲಾಶಯದ ಕನಿಷ್ಟ 490 ಮೀಟರ್ ಆಗಿದ್ದು, ಗರಿಷ್ಠ ಮಟ್ಟ491 ಮೀಟರ್ ಆಗಿದ್ದು, 1500 ಕ್ಯೂಸೆಕ್ ಒಳ‌ಹರಿವು ಹೆಚ್ಚಳವಾಗಿದೆ. ಯಾವುದೇ ಕ್ಷಣದಲ್ಲಿ ಮುಲ್ಲಾಮಾರಿ ಕೆಳದಂಡೆ ಜಲಾಶಯದ ನೀರನ್ನು ಬಿಡುಗಡೆ ಮಾಡುವ ಸಾಧ್ಯತೆಯಿದ್ದು, ಮುಲ್ಲಾಮಾರಿ ಕೆಡದಂಡೆ ಗ್ರಾಮಗಳಿಗೆ ಎಚ್ಚರಿಕೆಯಿಂದ ಇರಲು ಸೂಚನೆ ನೀಡಲಾಗಿದೆ.

Advertisement

ಈ ಎಲ್ಲ ಗ್ರಾಮಗಳ ನಾಗರಿಕರಿಗೆ ಎಚ್ಚರಿಕೆಯಿಂದಿರಲು ಸೂಚನೆ : ಈ ಭಾಗದ ಚಿಮ್ಮನಚೋಡ,ತಾಜಲಾಪುರ, ಗಾರಂಪಳ್ಳಿ, ಸೇರಿ ಹಲವು ಗ್ರಾಮಗಳ ನಾಗರಿಕರಿಗೆ ನದಿ‌ ದಡದಲ್ಲಿ ಹೋಗದಂತೆ ಎಚ್ಚರಿಕೆಯಿಂದಿರಲು ಎಇ‌ ಸೂಚನೆ ನೀಡಿದ್ದಾರೆ.

ಇತ್ತ ಮೈಸೂರು ಪ್ರಾಂತ್ಯದಲ್ಲೂ ಉತ್ತಮ ಮಳೆ : ರಾಜ್ಯದ ಹಲವೆಡೆ ಮಳೆ ಮುಂದುವರೆದಿದೆ. ಕರ್ನಾಟಕದ ಕಾಶ್ಮೀರ ಎಂದೇ ಹೆಸರುವಾಸಿಯಾದ ಕೊಡಗು ಜಿಲ್ಲೆಯಲ್ಲಿ (Kodagu Rains) ಕಳೆದ ಕೆಲ ದಿನಗಳಿಂದ ಉತ್ತಮ ಮಳೆಯಾಗುತ್ತಿರುವ ಪರಿಣಾಮ ಕಾವೇರಿ ಕೊಳ್ಳದ ಜಲಾಶಯಗಳ ನೀರಿನ ಮಟ್ಟ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.ಮಂಡ್ಯ ಜಿಲ್ಲೆಯ ಕೆಆರ್‌ಎಸ್ ಜಲಾಶಯಕ್ಕೆ ದಿನದಿಂದ ದಿನಕ್ಕೆ ನೀರಿನ ಮಟ್ಟ ಹಾಗೂ ಒಳ ಹರಿವಿನ ಪ್ರಮಾಣವು ಹೆಚ್ಚಾಗುತ್ತಿದೆ. 124.80 ಅಡಿಗಳ ಸಾಮರ್ಥ್ಯವಿರುವ ಜಲಾಶಯದ ಇಂದಿನ ಮಟ್ಟ 86.20 ಅಡಿಗಳಾಗಿದ್ದು ಒಂದು ದಿನಕ್ಕೆ ಒಂದು ಅಡಿಗೂ ಹೆಚ್ಚು ಜಲಾಶಯದ ನೀರಿನ ಪ್ರಮಾಣ ಹೆಚ್ಚಳವಾಗಿದೆ. ಕೆಆರ್‌ಎಸ್ ಜಲಾಶಯಕ್ಕೆ 2404 ಕ್ಯೂಸೆಕ್‌ ನೀರು ಹರಿದು ಬರುತ್ತಿದ್ದು, ಜಲಾಶಯದಿಂದ 454 ಕ್ಯೂಸೆಕ್‌ ನೀರನ್ನು ಹೊರಬಿಡಲಾಗುತ್ತಿದೆ.

Advertisement

ಕಬಿನಿ ಜಲಾಶಯದ ಇಂದಿನ ಸ್ಥಿತಿಗತಿ : ಎಚ್‌ಡಿ ಕೋಟೆಯ ಕಬಿನಿ ಜಲಾಶಯಕ್ಕೆ ನೀರಿನ ಒಳಹರಿವು ಕಳೆದ ಎರಡು ದಿನಗಳಿಗೆ ಹೋಲಿಸಿದರೆ ಇಂದು ಕಡಿಮೆಯಾಗಿದೆ. 2284 ಅಡಿಗಳ ಸಾಮರ್ಥ್ಯವಿರುವ ಜಲಾಶಯದ ಇಂದಿನ ಮಟ್ಟ 2263.38 ಅಡಿಗಳಾಗಿದ್ದು, ಜಲಾಶಯಕ್ಕೆ 1825 ಕ್ಯೂಸೆಕ್‌ ನೀರು ಒಳ ಹರಿವಿದ್ದರೆ ಜಲಾಶಯದಿಂದ 300 ಕ್ಯೂಸೆಕ್‌ ನೀರನ್ನು ಹೊರ ಬಿಡಲಾಗುತ್ತಿದೆ. ಮೊನ್ನೆ (ಜೂನ್ 12) ಜಲಾಶಯಕ್ಕೆ ಭರ್ಜರಿ ಒಳಹರಿವು ಇತ್ತು. ಆದರೆ ಕಳೆದ ಎರಡು ದಿನಗಳಿಂದ ಒಳ ಹರಿವಿನ ಪ್ರಮಾಣದಲ್ಲಿ ಕಡಿಮೆಯಾಗುತ್ತಿದೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕುತ್ಲೂರು ಗ್ರಾಮಕ್ಕೆ ಅತ್ಯುತ್ತಮ ಪ್ರವಾಸೋದ್ಯಮ ರಾಷ್ಟ್ರೀಯ ಪ್ರಶಸ್ತಿ ಪ್ರದಾನ | ಗ್ರಾಮೀಣ ಭಾಗಕ್ಕೆ ಹೆಮ್ಮೆಯ ಗರಿ |

ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿರುವ ಕುತ್ಲೂರು ಗ್ರಾಮ ಪ್ರಾಕೃತಿಕ ಸೌ೦ದರ್ಯವನ್ನೇ ಹೊದ್ದು ಮಲಗಿದೆ. ಇಂತಹ…

6 hours ago

ಇಂಗುಗುಂಡಿ ನಿರ್ಮಿಸಿದ ಮಹಿಳಾ ತಂಡ | 6 ಮಂದಿ ಮಹಿಳೆಯರಿಂದ 236 ಕ್ಕೂ ಹೆಚ್ಚು ಇಂಗುಗುಂಡಿ |

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲಮುಡ್ನೂರು ಗ್ರಾಮ ಪಂಚಾಯಿತಿಯ ಚಿಗುರು ಸಂಜೀವಿನಿ…

7 hours ago

ಜವಳಿ ಕ್ಷೇತ್ರದಲ್ಲಿ ಉದ್ಯೋಗ ಸೃಷ್ಟಿಗೆ ಆದ್ಯತೆ

ಕೃಷಿ ಕ್ಷೇತ್ರದ ನಂತರ ಜವಳಿ ಕ್ಷೇತ್ರದಲ್ಲಿ ಅತಿ ಹೆಚ್ಚು ಉದ್ಯೋಗ ಸೃಷ್ಟಿಗೆ ಅವಕಾಶವಿದ್ದು,…

8 hours ago

ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಸಲು ನಿರ್ಧಾರ | ನಂದಿನಿ ತುಪ್ಪಕ್ಕೆ ಬೇಡಿಕೆ

ರಾಜ್ಯ ಮತ್ತು ಹೊರರಾಜ್ಯದ ದೇವಾಲಯಗಳಲ್ಲಿ ನಂದಿನ ತುಪ್ಪ ಬಳಸಲು ನಿರ್ಧರಿಸಿರುವ ಹಿನ್ನೆಲೆಯಲ್ಲಿ ನಂದಿನಿ…

8 hours ago

ಹವಾಮಾನ ವರದಿ | 27-09-2024 | ಸೆ. 29 ರಿಂದ ಗುಡುಗು ಸಹಿತ ಮಳೆ ನಿರೀಕ್ಷೆ |

28.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

14 hours ago