Advertisement
MIRROR FOCUS

ಕಾವೇರಿ, ಕಲ್ಯಾಣ ಕರ್ನಾಟಕದಲ್ಲಿ ಉತ್ತಮ ಮಳೆ | ಜಲಾಶಯಗಳಿಗೆ ಹರಿದುಬರುತ್ತಿರುವ ನೀರು |

Share

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ(Mansoon Rain). ರೈತರು(Farmers) ಮೊಗದಲ್ಲಿ ಮಂದಹಾಸ ಮೂಡಿದೆ. ರಾಜ್ಯದ ಅಣೆಕಟ್ಟುಗಳಿಗೆ(Dam) ನೀರು ಹರಿದು ಬರುತ್ತಿದ್ದು, ಕೃಷಿ ಚಟುವಟೆಕೆಗಳಿಗೆ( ಲಾಭವಾಗುತ್ತಿದೆ. ಕಲ್ಯಾಣ ಕರ್ನಾಟಕದ (Kalyana Karnataka Rains) ಚಿಂಚೊಳ್ಳಿ ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ನಾಗರಾಳ‌ ಬಳಿ ಇರುವ  ಮುಲ್ಲಾಮಾರಿ ಜಲಾಶಯದ ಒಳಹರಿವು ಹೆಚ್ಚಳವಾಗುತ್ತಿದೆ. ಇತ್ತ ಕೆಆರ್‌ಎಸ್ ಜಲಾಶಯಕ್ಕೆ(KRS Dam) 2404 ಕ್ಯೂಸೆಕ್‌ ನೀರು ಹರಿದು ಬರುತ್ತಿದ್ದು, ಜಲಾಶಯದಿಂದ 454 ಕ್ಯೂಸೆಕ್‌ ನೀರನ್ನು ಹೊರ ಬೀಡಲಾಗುತ್ತಿದೆ.

ಮುಲ್ಲಾಮಾರಿ ಕೆಳದಂಡೆ ಜಲಾಶಯದ ಕನಿಷ್ಟ 490 ಮೀಟರ್ ಆಗಿದ್ದು, ಗರಿಷ್ಠ ಮಟ್ಟ491 ಮೀಟರ್ ಆಗಿದ್ದು, 1500 ಕ್ಯೂಸೆಕ್ ಒಳ‌ಹರಿವು ಹೆಚ್ಚಳವಾಗಿದೆ. ಯಾವುದೇ ಕ್ಷಣದಲ್ಲಿ ಮುಲ್ಲಾಮಾರಿ ಕೆಳದಂಡೆ ಜಲಾಶಯದ ನೀರನ್ನು ಬಿಡುಗಡೆ ಮಾಡುವ ಸಾಧ್ಯತೆಯಿದ್ದು, ಮುಲ್ಲಾಮಾರಿ ಕೆಡದಂಡೆ ಗ್ರಾಮಗಳಿಗೆ ಎಚ್ಚರಿಕೆಯಿಂದ ಇರಲು ಸೂಚನೆ ನೀಡಲಾಗಿದೆ.

ಈ ಎಲ್ಲ ಗ್ರಾಮಗಳ ನಾಗರಿಕರಿಗೆ ಎಚ್ಚರಿಕೆಯಿಂದಿರಲು ಸೂಚನೆ : ಈ ಭಾಗದ ಚಿಮ್ಮನಚೋಡ,ತಾಜಲಾಪುರ, ಗಾರಂಪಳ್ಳಿ, ಸೇರಿ ಹಲವು ಗ್ರಾಮಗಳ ನಾಗರಿಕರಿಗೆ ನದಿ‌ ದಡದಲ್ಲಿ ಹೋಗದಂತೆ ಎಚ್ಚರಿಕೆಯಿಂದಿರಲು ಎಇ‌ ಸೂಚನೆ ನೀಡಿದ್ದಾರೆ.

ಇತ್ತ ಮೈಸೂರು ಪ್ರಾಂತ್ಯದಲ್ಲೂ ಉತ್ತಮ ಮಳೆ : ರಾಜ್ಯದ ಹಲವೆಡೆ ಮಳೆ ಮುಂದುವರೆದಿದೆ. ಕರ್ನಾಟಕದ ಕಾಶ್ಮೀರ ಎಂದೇ ಹೆಸರುವಾಸಿಯಾದ ಕೊಡಗು ಜಿಲ್ಲೆಯಲ್ಲಿ (Kodagu Rains) ಕಳೆದ ಕೆಲ ದಿನಗಳಿಂದ ಉತ್ತಮ ಮಳೆಯಾಗುತ್ತಿರುವ ಪರಿಣಾಮ ಕಾವೇರಿ ಕೊಳ್ಳದ ಜಲಾಶಯಗಳ ನೀರಿನ ಮಟ್ಟ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.ಮಂಡ್ಯ ಜಿಲ್ಲೆಯ ಕೆಆರ್‌ಎಸ್ ಜಲಾಶಯಕ್ಕೆ ದಿನದಿಂದ ದಿನಕ್ಕೆ ನೀರಿನ ಮಟ್ಟ ಹಾಗೂ ಒಳ ಹರಿವಿನ ಪ್ರಮಾಣವು ಹೆಚ್ಚಾಗುತ್ತಿದೆ. 124.80 ಅಡಿಗಳ ಸಾಮರ್ಥ್ಯವಿರುವ ಜಲಾಶಯದ ಇಂದಿನ ಮಟ್ಟ 86.20 ಅಡಿಗಳಾಗಿದ್ದು ಒಂದು ದಿನಕ್ಕೆ ಒಂದು ಅಡಿಗೂ ಹೆಚ್ಚು ಜಲಾಶಯದ ನೀರಿನ ಪ್ರಮಾಣ ಹೆಚ್ಚಳವಾಗಿದೆ. ಕೆಆರ್‌ಎಸ್ ಜಲಾಶಯಕ್ಕೆ 2404 ಕ್ಯೂಸೆಕ್‌ ನೀರು ಹರಿದು ಬರುತ್ತಿದ್ದು, ಜಲಾಶಯದಿಂದ 454 ಕ್ಯೂಸೆಕ್‌ ನೀರನ್ನು ಹೊರಬಿಡಲಾಗುತ್ತಿದೆ.

ಕಬಿನಿ ಜಲಾಶಯದ ಇಂದಿನ ಸ್ಥಿತಿಗತಿ : ಎಚ್‌ಡಿ ಕೋಟೆಯ ಕಬಿನಿ ಜಲಾಶಯಕ್ಕೆ ನೀರಿನ ಒಳಹರಿವು ಕಳೆದ ಎರಡು ದಿನಗಳಿಗೆ ಹೋಲಿಸಿದರೆ ಇಂದು ಕಡಿಮೆಯಾಗಿದೆ. 2284 ಅಡಿಗಳ ಸಾಮರ್ಥ್ಯವಿರುವ ಜಲಾಶಯದ ಇಂದಿನ ಮಟ್ಟ 2263.38 ಅಡಿಗಳಾಗಿದ್ದು, ಜಲಾಶಯಕ್ಕೆ 1825 ಕ್ಯೂಸೆಕ್‌ ನೀರು ಒಳ ಹರಿವಿದ್ದರೆ ಜಲಾಶಯದಿಂದ 300 ಕ್ಯೂಸೆಕ್‌ ನೀರನ್ನು ಹೊರ ಬಿಡಲಾಗುತ್ತಿದೆ. ಮೊನ್ನೆ (ಜೂನ್ 12) ಜಲಾಶಯಕ್ಕೆ ಭರ್ಜರಿ ಒಳಹರಿವು ಇತ್ತು. ಆದರೆ ಕಳೆದ ಎರಡು ದಿನಗಳಿಂದ ಒಳ ಹರಿವಿನ ಪ್ರಮಾಣದಲ್ಲಿ ಕಡಿಮೆಯಾಗುತ್ತಿದೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿ ಹೊಂಡಗಳಿಗೆ ಕಡ್ಡಾಯ ತಂತಿ ಬೇಲಿ ಅಳವಡಿಸಿ – ರೈತರಿಗೆ ಕೃಷಿ ಇಲಾಖೆ ಮನವಿ

ಕೃಷಿ ಭಾಗ್ಯ ಯೋಜನೆಯಡಿ ನಿರ್ಮಿಸಿರುವ ಕೃಷಿ ಹೊಂಡಗಳಿಗೆ ಕಡ್ಡಾಯವಾಗಿ ತಂತಿ ಬೇಲಿ ಮತ್ತು…

1 hour ago

ಕೇರಳಕ್ಕೆ ಮುಂಗಾರು ಅಧಿಕೃತ ಪ್ರವೇಶ | ಕರ್ನಾಟಕದಲ್ಲಿ ಭಾರೀ ಮಳೆಯ ಎಚ್ಚರಿಕೆ, ಮುಂದಿನ ವಾರವೂ ಮಳೆ ಚುರುಕು

ಕೇರಳಕ್ಕೆ ನೈಋತ್ಯ ಮುಂಗಾರು ಅಧಿಕೃತವಾಗಿ ಪ್ರವೇಶಿಸಿದ್ದು, ಕರಾವಳಿ ಕರ್ನಾಟಕ ಸೇರಿದಂತೆ ರಾಜ್ಯದ ಹಲವೆಡೆ…

2 hours ago

ಸಲ್ಫ್ಯೂರಿಕ್ ಆಸಿಡ್ ಕೊರತೆ – ಕಾಪರ್‌ಸಲ್ಪೇಟ್‌ ಮೇಲೂ ಹೊಡೆತ – ಕೃಷಿಕರು ಗಮನಿಸಬೇಕಾದ ವಿಷಯ…

ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…

10 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಜಾಲದ ಮೇಲೆ ಇಡಿ ಭಾರೀ ದಾಳಿ – ₹337 ಕೋಟಿ ನಕಲಿ ಇ-ವೇ ಬಿಲ್ ಜಾಲದ ತನಿಖೆ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಅಡಿಕೆ ಸಾಗಣೆ ಮಾಡುತ್ತಿದ್ದ ಜಾಲದ ವಿರುದ್ಧ ಮಿಜೋರಾಂನ ಚಾಂಫೈ ಜಿಲ್ಲೆಯಲ್ಲಿ…

11 hours ago

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

2 days ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

2 days ago