#HeavyRain | ದ.ಕ ಜಿಲ್ಲೆಯಲ್ಲಿ ಭಾರೀ ಮಳೆ | ಮಹಿಳೆ ಬಲಿ | ಸಾವಿನ ಸಂಖ್ಯೆ 5ಕ್ಕೆ ಏರಿಕೆ |

July 7, 2023
12:14 PM
ಕರಾವಳಿಯಲ್ಲಿ ಭಾರಿ ಮಳೆಯಾಗುತ್ತಿದೆ. ಹೊಳೆ, ನದಿಗಳು ತುಂಬಿ ಹರಿಯುತ್ತಿದೆ. ಈ ನಡುವೆ ಗುಡ್ಡ ಕುಸಿತದಂತಹ ಘಟನೆಗಳು ಸಂಭವಿಸುತ್ತಿದೆ. ಇದೀಗ - ದಕ್ಷಿಣ ಕನ್ನಡದಲ್ಲಿ ಮಳೆ ಅನಾಹುತದಿಂದ ಇದುವರೆಗೆ ಒಟ್ಟು 5 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಕರಾವಳಿಯಾದ್ಯಂತ ವರುಣನ #Rain ಆರ್ಭಟ ಜೋರಾಗುತ್ತಿದೆ. ಕಳೆದ ಮೂರು ದಿನಗಳಿಂದ ಎಡೆಬಿಡದೆ ನಿರಂತರ ಮಳೆ ಸುರಿಯುತ್ತಿದೆ.  ಜೊತೆಗೆ ಅಲ್ಲಿಲ್ಲಿ ಅಪಾರ ಹಾನಿ ಉಂಟಾಗಿದ್ದು ಅಲ್ಲದೆ, ಐವರು ಪ್ರಾಣವನ್ನು ಕಳೆದುಕೊಂಡಿದ್ದಾರೆ. ದಕ್ಷಿಣ ಕನ್ನಡ #DakshinaKannada ಜಿಲ್ಲೆಯಲ್ಲಿ ಈ ಬಾರಿಯ ಭೀಕರ ಮಳೆಗೆ 5ನೇ ಸಾವಾಗಿದೆ. ಗುಡ್ಡ ಕುಸಿದು ಮನೆಯೊಳಗೆ ಸಿಲುಕಿದ್ದ ಇಬ್ಬರು ಮಹಿಳೆಯರಲ್ಲಿ ಒಬ್ಬರು ಮೃತಪಟ್ಟಿದ್ದಾರೆ.  

ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜೀಪಮುನ್ನೂರು ಗ್ರಾಮದ ನಂದಾವರದಲ್ಲಿ ನಡೆದಿದೆ. ಮನೆಯ ಮೇಲೆ ಗುಡ್ಡ ಕುಸಿದ ಪರಿಣಾಮ ಇಬ್ಬರು ಮಹಿಳೆಯರು ಮನೆಯೊಳಗೆ ಸಿಲುಕಿಕೊಂಡಿದ್ದರು.

Advertisement

ಘಟನೆ ಬಳಿಕ ಸ್ಥಳಕ್ಕಾಗಮಿಸಿದ ಬಂಟ್ವಾಳ ಅಗ್ನಿಶಾಮಕ ಅಧಿಕಾರಿಗಳು, ಪೊಲೀಸರು ಹಾಗೂ ಸ್ಥಳೀಯರು ಕಾರ್ಯಾಚರಣೆ ನಡೆಸಿ ಓರ್ವ ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ. ಆದರೆ ಮನೆಯೊಳಗೆ ಸಿಲುಕಿದ್ದ ಝರೀನಾ (46) ಸಾವನ್ನಪ್ಪಿದ್ದು, ಅವರ ಮೃತದೇಹವನ್ನು ಹೊರತೆಗೆಯಲಾಗಿದೆ. ಝರೀನಾ ಪುತ್ರಿ ಶಫಾ (20) ಅವರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಈ ಬಾರಿಯ ಮಳೆಗೆ ದ.ಕ ಜಿಲ್ಲೆಗೆ ಇದು 5ನೇ ಬಲಿಯಾಗಿದೆ. ಸ್ಥಳಕ್ಕೆ ಬಂಟ್ವಾಳ ತಹಶೀಲ್ದಾರ್ ಎಸ್‌ಬಿ ಕೂಡಲಗಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ
June 23, 2026
10:13 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ
June 23, 2026
8:11 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ
June 23, 2026
1:51 PM
by: ದ ರೂರಲ್ ಮಿರರ್.ಕಾಂ
ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು
June 23, 2026
7:37 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror