Advertisement
ಪ್ರಮುಖ

#HeavyRain | ದ.ಕ ಜಿಲ್ಲೆಯಲ್ಲಿ ಭಾರೀ ಮಳೆ | ಮಹಿಳೆ ಬಲಿ | ಸಾವಿನ ಸಂಖ್ಯೆ 5ಕ್ಕೆ ಏರಿಕೆ |

Share

ಕರಾವಳಿಯಾದ್ಯಂತ ವರುಣನ #Rain ಆರ್ಭಟ ಜೋರಾಗುತ್ತಿದೆ. ಕಳೆದ ಮೂರು ದಿನಗಳಿಂದ ಎಡೆಬಿಡದೆ ನಿರಂತರ ಮಳೆ ಸುರಿಯುತ್ತಿದೆ.  ಜೊತೆಗೆ ಅಲ್ಲಿಲ್ಲಿ ಅಪಾರ ಹಾನಿ ಉಂಟಾಗಿದ್ದು ಅಲ್ಲದೆ, ಐವರು ಪ್ರಾಣವನ್ನು ಕಳೆದುಕೊಂಡಿದ್ದಾರೆ. ದಕ್ಷಿಣ ಕನ್ನಡ #DakshinaKannada ಜಿಲ್ಲೆಯಲ್ಲಿ ಈ ಬಾರಿಯ ಭೀಕರ ಮಳೆಗೆ 5ನೇ ಸಾವಾಗಿದೆ. ಗುಡ್ಡ ಕುಸಿದು ಮನೆಯೊಳಗೆ ಸಿಲುಕಿದ್ದ ಇಬ್ಬರು ಮಹಿಳೆಯರಲ್ಲಿ ಒಬ್ಬರು ಮೃತಪಟ್ಟಿದ್ದಾರೆ.  

ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜೀಪಮುನ್ನೂರು ಗ್ರಾಮದ ನಂದಾವರದಲ್ಲಿ ನಡೆದಿದೆ. ಮನೆಯ ಮೇಲೆ ಗುಡ್ಡ ಕುಸಿದ ಪರಿಣಾಮ ಇಬ್ಬರು ಮಹಿಳೆಯರು ಮನೆಯೊಳಗೆ ಸಿಲುಕಿಕೊಂಡಿದ್ದರು.

ಘಟನೆ ಬಳಿಕ ಸ್ಥಳಕ್ಕಾಗಮಿಸಿದ ಬಂಟ್ವಾಳ ಅಗ್ನಿಶಾಮಕ ಅಧಿಕಾರಿಗಳು, ಪೊಲೀಸರು ಹಾಗೂ ಸ್ಥಳೀಯರು ಕಾರ್ಯಾಚರಣೆ ನಡೆಸಿ ಓರ್ವ ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ. ಆದರೆ ಮನೆಯೊಳಗೆ ಸಿಲುಕಿದ್ದ ಝರೀನಾ (46) ಸಾವನ್ನಪ್ಪಿದ್ದು, ಅವರ ಮೃತದೇಹವನ್ನು ಹೊರತೆಗೆಯಲಾಗಿದೆ. ಝರೀನಾ ಪುತ್ರಿ ಶಫಾ (20) ಅವರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಈ ಬಾರಿಯ ಮಳೆಗೆ ದ.ಕ ಜಿಲ್ಲೆಗೆ ಇದು 5ನೇ ಬಲಿಯಾಗಿದೆ. ಸ್ಥಳಕ್ಕೆ ಬಂಟ್ವಾಳ ತಹಶೀಲ್ದಾರ್ ಎಸ್‌ಬಿ ಕೂಡಲಗಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

6 hours ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

15 hours ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

15 hours ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

17 hours ago

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

20 hours ago