ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆಯಿಂದಾಗಿ ಪ್ರವಾಹ ಮತ್ತು ಭೂಕುಸಿತ ಉಂಟಾಗಿದ್ದು, 484 ರಸ್ತೆಗಳು ಸಂಪರ್ಕ ಕಡಿತಗೊಂಡಿದೆ. ರಾಜ್ಯವು ನಿರಂತರ ಭಾರೀ ಮಳೆಯನ್ನು ಎದುರಿಸುತ್ತಿದೆ, 298 ಕ್ಕೂ ಹೆಚ್ಚು ಜನರು ಭಾರೀ ಮಳೆಗೆ ಇದುವರೆಗೆ ಬಲಿಯಾಗಿದ್ದಾರೆ ಎಂದು ವರದಿಯಾಗಿವೆ. ಕಳೆದ ಕೆಲವು ದಿನಗಳಿಂದ ಶಾಲೆಗಳಿಗೂ ರಜೆ ನೀಡಲಾಗಿದೆ. ಆಗಸ್ಟ್ 30 ರವರೆಗೂ ಭಾರೀ ಮಳೆಯಾಗುವ ಮುನ್ಸೂಚನೆ ಇದೆ.
ಕುಲ್ಲುವಿನ ಸೈನ್ಜ್ ಕಣಿವೆಯಲ್ಲಿ, ಗರ್ಶಾಲಾ ನಾಲಾ ಉಕ್ಕಿ ಹರಿದು ಸ್ಥಳೀಯ ಮನೆಗಳಿಗೆ ಹೂಳು ಮತ್ತು ಮಣ್ಣುಗಳಿಂದ ಆವೃತವಾಗಿದೆ. ಹೀಗಾಗಿ ಸಾರ್ವಜನಿಕರಿಗೆ ಸಮಸ್ಯೆಯಾಗಿದೆ. ಕಾಂಗ್ರಾದ ಇಂಡೋರಾದಲ್ಲಿ, ಪಂಜಾಬ್ನ ಪಠಾಣ್ಕೋಟ್ ಬಳಿ ಬಿಯಾಸ್ ನದಿ ಉಕ್ಕಿ ಹರಿಯುತ್ತಿದ್ದು, ರಸ್ತೆಗಳು ಮತ್ತು ಮನೆಗಳಿಗೆ ನೀರು ನುಗ್ಗಿದೆ.
ಶಿಮ್ಲಾದ ಹವಾಮಾನ ಇಲಾಖೆಯು 10 ಜಿಲ್ಲೆಗಳಲ್ಲಿ ಭಾರೀ ಮಳೆ ಎಚ್ಚರಿಕೆಯ ಜೊತೆಗೆ ಆರೆಂಜ್ ಎಲರ್ಟ್ ನೀಡಿದೆ. ಇದುವರೆಗೆ 298 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ ಬಗ್ಗೆ ವರದಿಯಾಗಿವೆ, 500 ಮಾರ್ಗಗಳನ್ನು ನಿರ್ಬಂಧಿಸಲಾಗಿದೆ ಮತ್ತು ವಿದ್ಯುತ್ ಕಡಿತ ಮುಂದುವರೆದಿದೆ. ಆಗಸ್ಟ್ 26 ರಂದು ಹೆಚ್ಚಿದ ಮಳೆಯ ಕಾರಣದಿಂದ ಮತ್ತಷ್ಟು ಸಮಸ್ಯೆಯಾಗುವ ಸಾಧ್ಯತೆ ಇದೆ.
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…