ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆಯಿಂದಾಗಿ ಪ್ರವಾಹ ಮತ್ತು ಭೂಕುಸಿತ ಉಂಟಾಗಿದ್ದು, 484 ರಸ್ತೆಗಳು ಸಂಪರ್ಕ ಕಡಿತಗೊಂಡಿದೆ. ರಾಜ್ಯವು ನಿರಂತರ ಭಾರೀ ಮಳೆಯನ್ನು ಎದುರಿಸುತ್ತಿದೆ, 298 ಕ್ಕೂ ಹೆಚ್ಚು ಜನರು ಭಾರೀ ಮಳೆಗೆ ಇದುವರೆಗೆ ಬಲಿಯಾಗಿದ್ದಾರೆ ಎಂದು ವರದಿಯಾಗಿವೆ. ಕಳೆದ ಕೆಲವು ದಿನಗಳಿಂದ ಶಾಲೆಗಳಿಗೂ ರಜೆ ನೀಡಲಾಗಿದೆ. ಆಗಸ್ಟ್ 30 ರವರೆಗೂ ಭಾರೀ ಮಳೆಯಾಗುವ ಮುನ್ಸೂಚನೆ ಇದೆ.
ಕುಲ್ಲುವಿನ ಸೈನ್ಜ್ ಕಣಿವೆಯಲ್ಲಿ, ಗರ್ಶಾಲಾ ನಾಲಾ ಉಕ್ಕಿ ಹರಿದು ಸ್ಥಳೀಯ ಮನೆಗಳಿಗೆ ಹೂಳು ಮತ್ತು ಮಣ್ಣುಗಳಿಂದ ಆವೃತವಾಗಿದೆ. ಹೀಗಾಗಿ ಸಾರ್ವಜನಿಕರಿಗೆ ಸಮಸ್ಯೆಯಾಗಿದೆ. ಕಾಂಗ್ರಾದ ಇಂಡೋರಾದಲ್ಲಿ, ಪಂಜಾಬ್ನ ಪಠಾಣ್ಕೋಟ್ ಬಳಿ ಬಿಯಾಸ್ ನದಿ ಉಕ್ಕಿ ಹರಿಯುತ್ತಿದ್ದು, ರಸ್ತೆಗಳು ಮತ್ತು ಮನೆಗಳಿಗೆ ನೀರು ನುಗ್ಗಿದೆ.
ಶಿಮ್ಲಾದ ಹವಾಮಾನ ಇಲಾಖೆಯು 10 ಜಿಲ್ಲೆಗಳಲ್ಲಿ ಭಾರೀ ಮಳೆ ಎಚ್ಚರಿಕೆಯ ಜೊತೆಗೆ ಆರೆಂಜ್ ಎಲರ್ಟ್ ನೀಡಿದೆ. ಇದುವರೆಗೆ 298 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ ಬಗ್ಗೆ ವರದಿಯಾಗಿವೆ, 500 ಮಾರ್ಗಗಳನ್ನು ನಿರ್ಬಂಧಿಸಲಾಗಿದೆ ಮತ್ತು ವಿದ್ಯುತ್ ಕಡಿತ ಮುಂದುವರೆದಿದೆ. ಆಗಸ್ಟ್ 26 ರಂದು ಹೆಚ್ಚಿದ ಮಳೆಯ ಕಾರಣದಿಂದ ಮತ್ತಷ್ಟು ಸಮಸ್ಯೆಯಾಗುವ ಸಾಧ್ಯತೆ ಇದೆ.
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…