Advertisement
MIRROR FOCUS

ಜಮ್ಮು ಕಾಶ್ಮೀರದ ಕಥುವಾದಲ್ಲಿ ಭಾರೀ ಮಳೆ | ಪ್ರವಾಹಕ್ಕೆ ಏಳು ಮಂದಿ ಬಲಿ

Share

ಜಮ್ಮು ಕಾಶ್ಮೀರದ ಕಥುವಾದಲ್ಲಿ ಭಾರೀ ಮಳೆಯಿಂದ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು ಏಳು ಜನ ಮೃತಪಟ್ಟಿದ್ದಾರೆ.  ರಾಷ್ಟ್ರೀಯ ಹೆದ್ದಾರಿಗಳು, ರೈಲ್ವೆ ಮಾರ್ಗಗಳಲ್ಲಿ ನೀರು ನಿಂತಿದ್ದು ಭಾರೀ ಹಾನಿಯಾಗಿದೆ. ಕೆಲವೆಡೆ ಭೂ ಕುಸಿತದಿಂದ ಜನಜೀವನ ಅಸ್ತವ್ಯಸ್ತವಾಗಿದೆ. ತ್ವರಿತವಾಗಿ ರಕ್ಷಣಾ ಪಡೆಗಳು ಸ್ಥಳಕ್ಕಾಗಮಿಸಿದ್ದು ಕಾರ್ಯಾಚರಣೆಯಲ್ಲಿ ತೊಡಗಿವೆ. ಆದರೆ ಭಾರೀ ಮಳೆಗೆ ರಸ್ತೆಗಳು ಕುಸಿದು, ಕೊಚ್ಚಿಹೋಗಿದ್ದು ರಕ್ಷಣಾ ಪಡೆಗಳ ಕಾರ್ಯಾಚರಣೆಗೂ ಅಡ್ಡಿಯಾಗಿದೆ. ಕಿಶ್ತವಾರ್ ನಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರೆದಿದ್ದು, ಮೃತ ಪಟ್ಟವರ ಸಂಖ್ಯೆ 58ಕ್ಕೇರಿದೆ.

ಅತ್ಯಾಧುನಿಕ ಯಂತ್ರೋಪಕರಣಗಳನ್ನು ಉಪಯೋಗಿಸಿ ಯುದ್ಧೋಪಾದಿಯಲ್ಲಿ ರಕ್ಷಣಾ ಕಾರ್ಯ  ಸಾಗುತ್ತಿದೆ. ಚಸೋತಿ ಗ್ರಾಮದಲ್ಲಿ ಉಕ್ಕಿ ಹರಿಯುತ್ತಿರುವ ನದಿಯ ಮೇಲೆ ತಾತ್ಕಾಲಿಕ ಸೇತುವೆ ನಿರ್ಮಿಸಿ ರಕ್ಷಣಾ ಪಡೆಗಳು ಮತ್ತು ಸ್ವಯಂಸೇವಕರು ಜನರನ್ನು ರಕ್ಷಿಸುತ್ತಿದ್ದಾರೆ.  75ಕ್ಕೂ ಅಧಿಕ ಮಂದಿ ನಾಪತ್ತೆಯಾಗಿರುವ ವರದಿಯಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ. ಹಿಮಾಚಲ ಪ್ರದೇಶ ಕುಲು ಜಿಲ್ಲೆಯಲ್ಲೂ ಭಾರೀ ಮಳೆಯಾಗುತ್ತಿದೆ. ಭಾರೀ ಮಳೆ ಮತ್ತು ಭೂಕುಸಿತದಿಂದ ಮಂಡೀ- ಮನಾಲಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಲಾಗಿದೆ. ತಗ್ಗು ಪ್ರದೇಶಗಳಲ್ಲಿ ನೀರು ನಿಂತಿದ್ದು ರಸ್ತೆಗಳೆಲ್ಲಾ ಕೆಸರುಮಯವಾಗಿವೆ. ಮಹಾರಾಷ್ಟ್ರದಲ್ಲೂ ಮಳೆ ಮುಂದುವರೆಯುತ್ತಿದ್ದು, ಮುಂದಿನ 7 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು ಸಂಬಂಧಿತ ಇಲಾಖೆಗಳಿಗೆ ಅಲರ್ಟ್ ಆಗಿರುವಂತೆ ಸೂಚಿಸಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

4 hours ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

5 hours ago

ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…

7 hours ago

ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಕೃಷಿಕರಿಗೆ ನಿರ್ಬಂಧ ಬೇಡ – ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಆಗ್ರಹ

ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…

7 hours ago

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?

ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…

21 hours ago

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ

ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…

1 day ago