ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆ | KRS ಸಂಪೂರ್ಣ ಭರ್ತಿ ಸಾಧ್ಯತೆ

July 20, 2024
11:30 AM

ರಾಜ್ಯದಾದ್ಯಂತ ವರುಣ ಅಬ್ಬರಿಸಿದ್ದಾನೆ. ಕಳೆದ ವರ್ಷ ಮುಂಗಾರು ಕೀಣಿಸಿತ್ತು. ಆದರೆ ಈ ವರ್ಷ ಉತ್ತಮ ಮಳೆಯಾಗಿದೆ. ಕೊಡಗು ಜಿಲ್ಲೆಯಾದ್ಯಂತ ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ ಹಿನ್ನೆಲೆ ಕೆಆರ್‌ಎಸ್ ಜಲಾಶಯ ಬಹುತೇಕ ಭರ್ತಿಯಾಗುವ ಹಂತ ತಲುಪಿದ್ದು, ಜಲಾಶಯದ ಮಟ್ಟ 120 ಅಡಿಗೆ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಸಂದರ್ಭದಲ್ಲಿ ನದಿಗೆ ಹೆಚ್ಚಿನ ಪ್ರಮಾಣದ ನೀರು ಹರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಸದ್ಯ ಡ್ಯಾಂಗೆ 51,374 ಕ್ಯುಸೆಕ್ ಒಳಹರಿವು ಬರುತ್ತಿದೆ.

Advertisement
Advertisement

ಕೆಆರ್‌ಎಸ್ ಡ್ಯಾಂ ಭರ್ತಿಯ ಅಂಚಿನಲ್ಲಿರುವ ಹಿನ್ನೆಲೆ ಡ್ಯಾಂನಿಂದ ಕಾವೇರಿ ನದಿಗೆ (Cauvery River) 10,000 ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ ಮಾಡಲಾಗಿದೆ. ಕೆಆರ್‌ಎಸ್ ಡ್ಯಾಂನ 10 ಗೇಟ್‌ಗಳ ಮೂಲಕ 10,000 ಕ್ಯುಸೆಕ್‌ಗೂ ಅಧಿಕ ನೀರು ಹರಿಸಲಾಗಿದೆ. ಡ್ಯಾಂನಿಂದ ನೀರು ಹಾಲ್ನೊರೆಯಂತೆ ರಭಸವಾಗಿ ಬಂಡೆಗಳಿಗೆ ಅಪ್ಪಳಿಸಿ ಭೋರ್ಗರೆದು ಕಾವೇರಿ ನದಿಗೆ ಹರಿಯುತ್ತಿದೆ. ಈ ಹೊರಹರಿವಿನ ಪ್ರಮಾಣ ಯಾವ ಕ್ಷಣದಲ್ಲಾದರೂ ಹೆಚ್ಚಬಹುದು. ಹೀಗಾಗಿ ನದಿ ಪಾತ್ರದ ಜನರಿಗೆ ಮಂಡ್ಯ ಜಿಲ್ಲಾಡಳಿತ ಅಲರ್ಟ್ ಘೋಷಣೆ ಮಾಡಿದೆ. ಇನ್ನೂ ಕೆಆರ್‌ಎಸ್ ಡ್ಯಾಂ ಭರ್ತಿಯ ಅಂಚಿನಲ್ಲಿರುವ ಹಿನ್ನೆಲೆ ರೈತರಲ್ಲಿ ಸಂತಸ ಮನೆ ಮಾಡಿದೆ. 

  • ಅಂತರ್ಜಾಲ ಮಾಹಿತಿ

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಸರ್ಕಾರಿ ಶಾಲೆ ಮಕ್ಕಳಿಗೆ ಚೆಸ್ ಪಾಠ | ದ.ಕ ದಲ್ಲಿ “ಚೆಸ್ ಇನ್ ಸ್ಕೂಲ್” ಆರಂಭ | ಗ್ರಾಮೀಣ ಮಕ್ಕಳಿಗೆ ಬೌದ್ಧಿಕ ಅವಕಾಶ
January 29, 2026
2:18 PM
by: ದ ರೂರಲ್ ಮಿರರ್.ಕಾಂ
ಕೊಳೆ ರೋಗ ನಿಯಂತ್ರಣಕ್ಕೂ ತೆರಿಗೆ…? ಮೈಲುತುತ್ತಿಗೆ ಸುಂಕ – ಅಡಿಕೆ ರೈತನಿಗೆ ಮತ್ತೊಂದು ಹೊರೆ..!
January 29, 2026
7:39 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ದೇಶದಲ್ಲಿ ರಬಿ ಋತು ಬಿತ್ತನೆ ದಾಖಲೆ ಹೆಚ್ಚಳ | 660.48 ಲಕ್ಷ ಹೆಕ್ಟೇರ್‌ಗೆ ಏರಿದ ಒಟ್ಟು ವಿಸ್ತೀರ್ಣ
January 29, 2026
7:18 AM
by: ದ ರೂರಲ್ ಮಿರರ್.ಕಾಂ
ಯೂರಿಯಾ ಮಾರಾಟ 3.8% ಏರಿಕೆ | ದೇಶೀಯ ಉತ್ಪಾದನೆ ಕುಸಿತ, ಆಮದು 85% ಹೆಚ್ಚಳ
January 29, 2026
7:08 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror