ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆ | KRS ಸಂಪೂರ್ಣ ಭರ್ತಿ ಸಾಧ್ಯತೆ

July 20, 2024
11:30 AM

ರಾಜ್ಯದಾದ್ಯಂತ ವರುಣ ಅಬ್ಬರಿಸಿದ್ದಾನೆ. ಕಳೆದ ವರ್ಷ ಮುಂಗಾರು ಕೀಣಿಸಿತ್ತು. ಆದರೆ ಈ ವರ್ಷ ಉತ್ತಮ ಮಳೆಯಾಗಿದೆ. ಕೊಡಗು ಜಿಲ್ಲೆಯಾದ್ಯಂತ ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ ಹಿನ್ನೆಲೆ ಕೆಆರ್‌ಎಸ್ ಜಲಾಶಯ ಬಹುತೇಕ ಭರ್ತಿಯಾಗುವ ಹಂತ ತಲುಪಿದ್ದು, ಜಲಾಶಯದ ಮಟ್ಟ 120 ಅಡಿಗೆ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಸಂದರ್ಭದಲ್ಲಿ ನದಿಗೆ ಹೆಚ್ಚಿನ ಪ್ರಮಾಣದ ನೀರು ಹರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಸದ್ಯ ಡ್ಯಾಂಗೆ 51,374 ಕ್ಯುಸೆಕ್ ಒಳಹರಿವು ಬರುತ್ತಿದೆ.

ಕೆಆರ್‌ಎಸ್ ಡ್ಯಾಂ ಭರ್ತಿಯ ಅಂಚಿನಲ್ಲಿರುವ ಹಿನ್ನೆಲೆ ಡ್ಯಾಂನಿಂದ ಕಾವೇರಿ ನದಿಗೆ (Cauvery River) 10,000 ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ ಮಾಡಲಾಗಿದೆ. ಕೆಆರ್‌ಎಸ್ ಡ್ಯಾಂನ 10 ಗೇಟ್‌ಗಳ ಮೂಲಕ 10,000 ಕ್ಯುಸೆಕ್‌ಗೂ ಅಧಿಕ ನೀರು ಹರಿಸಲಾಗಿದೆ. ಡ್ಯಾಂನಿಂದ ನೀರು ಹಾಲ್ನೊರೆಯಂತೆ ರಭಸವಾಗಿ ಬಂಡೆಗಳಿಗೆ ಅಪ್ಪಳಿಸಿ ಭೋರ್ಗರೆದು ಕಾವೇರಿ ನದಿಗೆ ಹರಿಯುತ್ತಿದೆ. ಈ ಹೊರಹರಿವಿನ ಪ್ರಮಾಣ ಯಾವ ಕ್ಷಣದಲ್ಲಾದರೂ ಹೆಚ್ಚಬಹುದು. ಹೀಗಾಗಿ ನದಿ ಪಾತ್ರದ ಜನರಿಗೆ ಮಂಡ್ಯ ಜಿಲ್ಲಾಡಳಿತ ಅಲರ್ಟ್ ಘೋಷಣೆ ಮಾಡಿದೆ. ಇನ್ನೂ ಕೆಆರ್‌ಎಸ್ ಡ್ಯಾಂ ಭರ್ತಿಯ ಅಂಚಿನಲ್ಲಿರುವ ಹಿನ್ನೆಲೆ ರೈತರಲ್ಲಿ ಸಂತಸ ಮನೆ ಮಾಡಿದೆ. 

  • ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!
September 1, 2026
10:37 PM
by: ದ ರೂರಲ್ ಮಿರರ್.ಕಾಂ
ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ
September 1, 2026
3:16 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?
September 1, 2026
3:10 PM
by: ದ ರೂರಲ್ ಮಿರರ್.ಕಾಂ
ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ
September 1, 2026
7:42 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror