Advertisement
MIRROR FOCUS

ಕರಾವಳಿ ಹಾಗೂ ರಾಜ್ಯದ ಹಲವೆಡೆ ಧಾರಾಕಾರ ಮಳೆ |

Share

ಕರಾವಳಿ ಹಾಗೂ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ.ಉತ್ತರಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ ಹಾಗೂ ಭಟ್ಕಳ ತಾಲೂಕುಗಳಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ನಿರಂತರ ಮಳೆಗೆ ಕಾರವಾರದ ಮುಖ್ಯ ರಸ್ತೆಗಳಲ್ಲಿ ನೀರು ನಿಂತು ಜನ, ವಾಹನ ಸಂಚಾರಕ್ಕೆ ಅಡಚಣೆಯುಂಟಾಗಿದೆ.…… ಮುಂದೆ ಓದಿ……

ಕರಾವಳಿ ಜಿಲ್ಲೆಗಳಾದ ದಕ್ಷಿಣಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಗಾಳಿ ಸಹಿತ ಸುರಿಯುತ್ತಿರುವ ಮಳೆಯಿಂದ ಜಿಲ್ಲೆಯ ಮಲೆನಾಡು ಭಾಗದ ಕೆಲವೆಡೆ ವಿದ್ಯುತ್ ಕಂಬಗಳಿಗೆ ಹಾನಿಯಾಗಿದ್ದು ವಿದ್ಯುತ್ ಸಮಸ್ಯೆ ಉಂಟಾಗಿದೆ.

ದಾವಣಗೆರೆ ಜಿಲ್ಲಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು, ಜನಜೀವನ ಬಾಧಿತಗೊಂಡಿದೆ.  ಗದಗ ಜಿಲ್ಲೆಯ ಬೆಣ್ಣೆಹಳ್ಳದ ನೀರು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಯಾವಗಲ್ ಗ್ರಾಮದ ರೈತರು ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಿದ ಈರುಳ್ಳಿ, ಶೇಂಗಾ, ಹೆಸರು ಮತ್ತು ಮೆಣಸಿನಕಾಯಿ ಬೆಳೆಗಳು ಜಲಾವೃತಗೊಂಡಿವೆ.

ಧಾರವಾಡ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿರುವ ಕಾರಣ ಗ್ರಾಮೀಣ ಭಾಗದಲ್ಲೂ ಸಾಕಷ್ಟು ಅವಾಂತರ ಸೃಷ್ಟಿಯಾಗಿದೆ. ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಯಮನೂರ ಗ್ರಾಮದಲ್ಲಿ ಸಾಕಷ್ಟು ಮನೆಗಳಿಗೆ ನೀರು  ನುಗ್ಗಿದೆ. ದಾವಣಗೆರೆ ಜಿಲ್ಲಾದ್ಯಂತ ವ್ಯಾಪಕ ಮಳೆಯಿಂದಾಗಿ ಕೃಷಿ ಚಟುವಟಿಕೆಗಳು ಸ್ಥಗಿತಗೊಂಡಿವೆ. ಈ ಮಧ್ಯೆ ಮಲೇಬೆನ್ನೂರು ಸಮೀಪದ ಕೊಮಾರನಹಳ್ಳಿಯಲ್ಲಿ ಸಿಡಿಲು ಬಡಿದ ಪರಿಣಾಮ ಕೊಟ್ಟಿಗೆಯಲ್ಲಿದ್ದ ನಾಲ್ಕು ಹಸುಗಳು ಸಾವನ್ನಪ್ಪಿವೆ. ಹಲವೆಡೆ ಸುರಿದ ಮಳೆಯಿಂದಾಗಿ ತರಕಾರಿ ಮತ್ತು ತೋಟಗಾರಿಕಾ ಬೆಳೆಗಳಿಗೆ ಹಾನಿಯಾಗಿದೆ.

ಗದಗ ಜಿಲ್ಲೆಯ ಲಕ್ಷ್ಮೇಶ್ವರ ಮತ್ತು ರೋಣ ತಾಲೂಕಿನಲ್ಲಿ ಮಳೆಯಾಗಿದೆ. ಬೆಣ್ಣೆಹಳ್ಳದ ನೀರು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಯಾವಗಲ್ ಗ್ರಾಮದ ರೈತರು ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಿದ ಈರುಳ್ಳಿ, ಶೇಂಗಾ, ಹೆಸರು ಮತ್ತು ಮೆಣಸಿನಕಾಯಿ ಬೆಳೆಗಳು ಜಲಾವೃತಗೊಂಡಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

16 hours ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

22 hours ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

22 hours ago

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

1 day ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

2 days ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

2 days ago