Advertisement
MIRROR FOCUS

ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಧಾರಾಕಾರ ಮಳೆ | ಮಳೆಗೆ ಎಲ್ಲೆಲ್ಲಿ ಏನೇನಾಯ್ತು…? |

Share

ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಿದೆ. ದಕ್ಷಿಣಕನ್ನಡ ಜಿಲ್ಲೆಯ ಮುಲ್ಕಿಯಲ್ಲಿ 30 ಸೆಂಟಿಮೀಟರ್, ಭಾಗಮಂಡಲದಲ್ಲಿ11 ಸೆಂಟಿಮೀಟರ್ ಮಳೆಯಾಗಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ಇದೇ 23 ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಉತ್ತರ ಒಳನಾಡಿನಲ್ಲಿಯೂ ಮಳೆಯಾಗಲಿದೆ. ಉತ್ತರಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದ್ದು, ಇದೇ 21 ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿಯೂ 21 ರವರೆಗೆ ಹಗುರದಿಂದ ಮಳೆಯಾಗಲಿದೆ.

ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ನಿರಂತರ ಮಳೆ ಸುರಿಯುತ್ತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಹಾಗೂ ಭಟ್ಕಳ ತಾಲೂಕುಗಳ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಕೆ.ಲಕ್ಷ್ಮಿ ಪ್ರಿಯ ಆದೇಶಿಸಿದ್ದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಬಿರುಸುಗೊಂಡಿದೆ. ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು ಇಂದು ಕೂಡ ಮುಂದುವರಿದಿದೆ. ಧಾರಾಕಾರವಾಗಿ ಸುರಿಯುತ್ತಿರುವ ಮಳೆಯ ಕಾರಣ ಮುಂಜಾಗ್ರತಾ ಕ್ರಮವಾಗಿ  ಜಿಲ್ಲೆಯ ಎಲ್ಲಾ ಪ್ರಾಥಮಿಕ, ಪ್ರೌಢ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು.  ಜನತೆ ನದಿ ಮತ್ತು ಕಡಲ ತೀರದತ್ತ ತೆರಳದೆ ಎಚ್ಚರಿಕೆ ವಹಿಸಬೇಕು. ಮೀನುಗಾರರು ಯಾವುದೇ ಕಾರಣಕ್ಕೂ ಮೀನುಗಾರಿಕೆಗೆ ತೆರಳಬಾರದು ಎಂದು  ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಮುನ್ನೆಚ್ಚರಿಕೆ ನೀಡಿದ್ದಾರೆ. ಈ ನಡುವೆ ಮಳೆಯಿಂದ ಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ  ನೀಡಿ ಪರಿಶೀಲನೆ ನಡೆಸಿದರು.

ಉಡುಪಿ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆ ಆಗುತ್ತಿರುವುದರಿಂದ ಜಿಲ್ಲೆಯ ಎಲ್ಲಾ ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿತ್ತು.  ಉಡುಪಿ ಜಿಲ್ಲೆಯ ಗಂಗೊಳ್ಳಿಯಲ್ಲಿ ಮೀನುಗಾರಿಕೆಗೆ ತೆರಳಿ ದೋಣಿ ಮುಗುಚಿ ನಾಪತ್ತೆಯಾಗಿದ್ದ ಮೂವರು ಮೀನುಗಾರರ ನಿಧನಕ್ಕೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಂತಾಪ ಸೂಚಿಸಿದ್ದಾರೆ. ಸರ್ಕಾರದಿಂದ ನಿಯಮಾನುಸಾರ ಪರಿಹಾರ ಒದಗಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಕೊಪ್ಪಳ ಜಿಲ್ಲೆಯಲ್ಲೂ ಭಾರೀ ಮಳೆಯಾಗುತ್ತಿದ್ದು, ಕಳೆದ ರಾತ್ರಿ ಮನೆ ಗೋಡೆ ಕುಸಿದು 2 ವರ್ಷದ ಬಾಲಕಿ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ, ನೈಸರ್ಗಿಕ ವಿಕೋಪ ಪರಿಹಾರ ನಿಧಿಯಿಂದ 5 ಲಕ್ಷ ಪರಿಹಾರ ಘೋಷಿಸಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 14.06.2026 | ಜೂನ್ 20ರವರೆಗೆ ಕರಾವಳಿ-ಮಲೆನಾಡಿನಲ್ಲಿ ಇದೇ ವಾತಾವರಣ| ಎಲ್‌ನಿನೋ ಪ್ರಭಾವದ ನಡುವೆ ಮಳೆ ನೀರು ಸಂಗ್ರಹಕ್ಕೆ ರೈತರಿಗೆ ಸಲಹೆ

ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…

6 hours ago

ತುಮಕೂರಿನಲ್ಲಿ ಅಡಿಕೆ ಕ್ರಾಂತಿ -ತೆಂಗಿನ ತೋಟಗಳ ಜಾಗದಲ್ಲಿ ಅಡಿಕೆ ಬೆಳೆ..! 94 ಸಾವಿರ ಹೆಕ್ಟೇರ್‌ ದಾಟಿದ ವಿಸ್ತೀರ್ಣ

ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್‌ ದಾಟಿದ್ದು, ತೆಂಗಿನ…

9 hours ago

ಬ್ರಿಕ್ಸ್ ‘ಇಂದೋರ್ ಘೋಷಣೆ’ ಅಂಗೀಕಾರ – ಜಾಗತಿಕ ಕೃಷಿ ಸಹಕಾರಕ್ಕೆ ಹೊಸ ದಿಕ್ಕು

ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳು “ಇಂದೋರ್ ಘೋಷಣೆ” ಅಂಗೀಕರಿಸಿದ್ದು, ಆಹಾರ ಭದ್ರತೆ, ಡಿಜಿಟಲ್…

15 hours ago

2026ರಲ್ಲಿ ‘ಸೂಪರ್ ಎಲ್‌ನಿನೊ’ ಎಚ್ಚರಿಕೆ – ಭಾರತದ ಮುಂಗಾರು ಮತ್ತು ಕೃಷಿಗೆ ಹೊಸ ಸವಾಲು?

2026ರಲ್ಲಿ ಎಲ್‌ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್‌ನಿನೊ" ಆಗುವ…

1 day ago

ಉತ್ತರ ಪ್ರದೇಶ ಸರ್ಕಾರದಿಂದ ಭಾರತೀಯ ಸೇನೆಗೆ ದೇಶೀ ಹಸುವಿನ ಹಾಲಿನ ಉತ್ಪನ್ನಗಳು

ಉತ್ತರ ಪ್ರದೇಶ ಸರ್ಕಾರವು ಭಾರತೀಯ ಸೇನೆಗೆ ದೇಶೀ ಹಸುವಿನ ಹಾಲಿನ ಉತ್ಪನ್ನಗಳನ್ನು ಪೂರೈಸಲು…

1 day ago

ಎಳೆಅಡಿಕೆ ಮಾತ್ರವಲ್ಲ, ಬಲಿತ ಅಡಿಕೆಯೂ ಒಡೆದು ಬೀಳುತ್ತಿದೆ…! ಕಾರಣ ಏನು?

ಎಳೆಕಾಯಿ ಹಾಗೂ ಬಲಿತ ಅಡಿಕೆ ಒಡೆದು ಬೀಳುತ್ತಿರುವ ಸಮಸ್ಯೆ ಹಲವು ಭಾಗಗಳಲ್ಲಿ ಕಂಡುಬರುತ್ತಿದೆ.…

1 day ago