ಈಶಾನ್ಯ ರಾಜ್ಯಗಳಲ್ಲಿ ಭಾರಿ ಮಳೆಯಿಂದ ಪ್ರವಾಹ | ನೂರಾರು ಗ್ರಾಮಗಳು ಜಲಾವೃತ, ಬೆಳೆ ನಷ್ಟ | 5 ಲಕ್ಷಕ್ಕೂ ಅಧಿಕ ಜನರು ಸಂತ್ರಸ್ತರು |

June 3, 2025
11:08 PM

ಈಶಾನ್ಯ ರಾಜ್ಯಗಳ ಬಹುತೇಕ ಭಾಗಗಳಲ್ಲಿ ಮುಂದುವರಿದ ಭಾರಿ ಮಳೆಯಿಂದ ಪ್ರವಾಹ ಉಂಟಾಗಿದೆ. ಮಣಿಪುರ, ಸಿಕ್ಕಿಂ, ಅಸ್ಸಾಂ, ಮೇಘಾಲಯ ಸೇರಿದಂತೆ ಈಶಾನ್ಯ ರಾಜ್ಯಗಳಲ್ಲಿ ನೂರಾರು ಗ್ರಾಮಗಳು ಜಲಾವೃತಗೊಂಡಿವೆ. ಪ್ರವಾಹಗಳಿಂದ ಬೆಳೆಗಳಿಗೆ ನಷ್ಟವಾಗಿದ್ದು, ತಗ್ಗು ಪ್ರದೇಶಗಳಲ್ಲಿ ನೀರು ತುಂಬಿದೆ.  ಎನ್ ಡಿಆರ್ ಎಫ್, ಎಸ್ ಡಿ ಆರ್ ಎಫ್, ವಾಯುಪಡೆ, ಸೇರಿದಂತೆ ರಕ್ಷಣಾ ತಂಡಗಳು ರಕ್ಷಣಾ ಮತ್ತು ಪರಿಹಾರ ಕಾರ್ಯಗಳಲ್ಲಿ ತೊಡಗಿವೆ.

ಅಸ್ಸಾಂನಲ್ಲಿ ಕಳೆದ 24 ಗಂಟೆಗಳಲ್ಲಿ ಪ್ರವಾಹ ಪರಿಸ್ಥಿತಿ ತೀವ್ರವಾಗಿದ್ದು, ಹೆಚ್ಚುವರಿ 5 ಜಿಲ್ಲೆಗಳಿಗೆ ವ್ಯಾಪಿಸಿದೆ.  ರಾಜ್ಯದ 22 ಜಿಲ್ಲೆಗಳಲ್ಲಿ 5 ಲಕ್ಷಕ್ಕೂ ಅಧಿಕ ಜನರು ಸಂತ್ರಸ್ತರಾಗಿದ್ದಾರೆ. ಪ್ರವಾಹದಿಂದ 65 ಕಂದಾಯ ವಲಯಗಳ 1 ಸಾವಿರದ 150 ಗ್ರಾಮಗಳು ಬಾಧಿತವಾಗಿದ್ದು, 12 ಸಾವಿರದ 600 ಹೆಕ್ಟೇರ್ ನಲ್ಲಿ ಬೆಳೆ ನಷ್ಟವಾಗಿದೆ. ಈ ಮಧ್ಯೆ ಪ್ರಧಾನಿ ನರೇಂದ್ರ ಮೋದಿಯವರು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಮತ್ತು ಸಿಕ್ಕಿಂ ಮುಖ್ಯಮಂತ್ರಿ ಪ್ರೇಮ್ ಸಿಂಗ್ ತಮಾಂಗ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ, ಪ್ರವಾಹ ಪರಿಸ್ಥಿತಿ ಕುರಿತು ಮಾಹಿತಿ ಪಡೆದಿದ್ದಾರೆ.  ಪ್ರವಾಹಬಾಧಿತ ರಾಜ್ಯಗಳಲ್ಲಿ ಪರಿಹಾರ ಮತ್ತು ಪುನರ್ವಸತಿ ಕಾರ್ಯಗಳಿಗೆ ಕೇಂದ್ರದಿಂದ ಎಲ್ಲ ನೆರವು ಒದಗಿಸುವ ಭರವಸೆಯನ್ನು ನೀಡಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ – ಆಲಿಕಲ್ಲು ಮಳೆಯಿಂದ ರೈತರ ಬೆಳೆ ನಷ್ಟ
April 6, 2026
6:59 AM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!
April 5, 2026
1:27 PM
by: ಸಾಯಿಶೇಖರ್ ಕರಿಕಳ
ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಮತ್ತು ನಾಗರಿಕ ಸಂಸ್ಕೃತಿ – ಸಮಾಜದ ನಿಜವಾದ ಅಳತೆ
April 5, 2026
9:00 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಗುಜ್ಜೆ-ಕಡಲೆ ಗಸಿ – ಸರಳ ಪದಾರ್ಥಗಳಿಂದ ಸೊಗಸಾದ ಸಾಂಪ್ರದಾಯಿಕ ಸವಿರುಚಿ!
April 4, 2026
8:44 AM
by: ದಿವ್ಯ ಮಹೇಶ್

You cannot copy content of this page - Copyright -The Rural Mirror