MIRROR FOCUS

ಈಶಾನ್ಯ ರಾಜ್ಯಗಳಲ್ಲಿ ಭಾರಿ ಮಳೆಯಿಂದ ಪ್ರವಾಹ | ನೂರಾರು ಗ್ರಾಮಗಳು ಜಲಾವೃತ, ಬೆಳೆ ನಷ್ಟ | 5 ಲಕ್ಷಕ್ಕೂ ಅಧಿಕ ಜನರು ಸಂತ್ರಸ್ತರು |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಈಶಾನ್ಯ ರಾಜ್ಯಗಳ ಬಹುತೇಕ ಭಾಗಗಳಲ್ಲಿ ಮುಂದುವರಿದ ಭಾರಿ ಮಳೆಯಿಂದ ಪ್ರವಾಹ ಉಂಟಾಗಿದೆ. ಮಣಿಪುರ, ಸಿಕ್ಕಿಂ, ಅಸ್ಸಾಂ, ಮೇಘಾಲಯ ಸೇರಿದಂತೆ ಈಶಾನ್ಯ ರಾಜ್ಯಗಳಲ್ಲಿ ನೂರಾರು ಗ್ರಾಮಗಳು ಜಲಾವೃತಗೊಂಡಿವೆ. ಪ್ರವಾಹಗಳಿಂದ ಬೆಳೆಗಳಿಗೆ ನಷ್ಟವಾಗಿದ್ದು, ತಗ್ಗು ಪ್ರದೇಶಗಳಲ್ಲಿ ನೀರು ತುಂಬಿದೆ.  ಎನ್ ಡಿಆರ್ ಎಫ್, ಎಸ್ ಡಿ ಆರ್ ಎಫ್, ವಾಯುಪಡೆ, ಸೇರಿದಂತೆ ರಕ್ಷಣಾ ತಂಡಗಳು ರಕ್ಷಣಾ ಮತ್ತು ಪರಿಹಾರ ಕಾರ್ಯಗಳಲ್ಲಿ ತೊಡಗಿವೆ.

Advertisement
Advertisement

ಅಸ್ಸಾಂನಲ್ಲಿ ಕಳೆದ 24 ಗಂಟೆಗಳಲ್ಲಿ ಪ್ರವಾಹ ಪರಿಸ್ಥಿತಿ ತೀವ್ರವಾಗಿದ್ದು, ಹೆಚ್ಚುವರಿ 5 ಜಿಲ್ಲೆಗಳಿಗೆ ವ್ಯಾಪಿಸಿದೆ.  ರಾಜ್ಯದ 22 ಜಿಲ್ಲೆಗಳಲ್ಲಿ 5 ಲಕ್ಷಕ್ಕೂ ಅಧಿಕ ಜನರು ಸಂತ್ರಸ್ತರಾಗಿದ್ದಾರೆ. ಪ್ರವಾಹದಿಂದ 65 ಕಂದಾಯ ವಲಯಗಳ 1 ಸಾವಿರದ 150 ಗ್ರಾಮಗಳು ಬಾಧಿತವಾಗಿದ್ದು, 12 ಸಾವಿರದ 600 ಹೆಕ್ಟೇರ್ ನಲ್ಲಿ ಬೆಳೆ ನಷ್ಟವಾಗಿದೆ. ಈ ಮಧ್ಯೆ ಪ್ರಧಾನಿ ನರೇಂದ್ರ ಮೋದಿಯವರು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಮತ್ತು ಸಿಕ್ಕಿಂ ಮುಖ್ಯಮಂತ್ರಿ ಪ್ರೇಮ್ ಸಿಂಗ್ ತಮಾಂಗ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ, ಪ್ರವಾಹ ಪರಿಸ್ಥಿತಿ ಕುರಿತು ಮಾಹಿತಿ ಪಡೆದಿದ್ದಾರೆ.  ಪ್ರವಾಹಬಾಧಿತ ರಾಜ್ಯಗಳಲ್ಲಿ ಪರಿಹಾರ ಮತ್ತು ಪುನರ್ವಸತಿ ಕಾರ್ಯಗಳಿಗೆ ಕೇಂದ್ರದಿಂದ ಎಲ್ಲ ನೆರವು ಒದಗಿಸುವ ಭರವಸೆಯನ್ನು ನೀಡಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮರೆತುಹೋದ ಮನೆಮಾತು ಮರಳಿ ನೆನಪಿಸಲು ಸ್ವಭಾಷಾ ಚಾತುರ್ಮಾಸ್ಯ : ರಾಘವೇಶ್ವರ ಶ್ರೀ

ಮರೆತುಹೋದ ಮನೆಮಾತನ್ನು ಮರಳಿ ನೆನಪಿಸುವ ಉದ್ದೇಶದಿಂದ ಈ ಬಾರಿಯ ಚಾತುರ್ಮಾಸ್ಯವನ್ನು ಸ್ವಭಾಷಾ ಚಾತುರ್ಮಾಸ್ಯ…

4 minutes ago

ಗಜಲಕ್ಷ್ಮೀ ರಾಜಯೋಗ – ಕೆಲವು ರಾಶಿಯವರಿಗೆ ಅದೃಷ್ಟ- ಸಿಗುವುದು ಯಶಸ್ಸು

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

8 minutes ago

ರಬ್ಬರ್‌ ಆಮದು | ರಬ್ಬರ್‌ ಬೆಳೆಗಾರರಿಗೆ ತರಲಿದೆ ಧಾರಣೆ ಸಂಕಷ್ಟ

ದೇಶದಲ್ಲಿ ರಬ್ಬರ್‌ ಉತ್ಪಾದನೆ ಹೆಚ್ಚಳದ ನಡುವೆ ಇದೀಗ ರಬ್ಬರ್‌ ಆಮದು ನೀತಿಯು ರಬ್ಬರ್‌…

10 hours ago

ಅಕ್ರಮವಾಗಿ ಅಡಿಕೆ ಸಾಗಣೆ ಪ್ರಕರಣ | ಪಶ್ಚಿಮ ಬಂಗಾಳದಲ್ಲಿ ಅಡಿಕೆ ವ್ಯಾಪಾರಿಯ ಬಂಧನ

ಅಕ್ರಮವಾಗಿ ಅಡಿಕೆ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯ ನಕ್ಸಲ್ಬರಿ…

10 hours ago

ಸುಳ್ಯದಲ್ಲಿ ಏಕೆ ಇದೆಲ್ಲಾ ಬಗೆಹರಿಯದ ಸಮಸ್ಯೆ…? | ರಸ್ತೆ-ವಿದ್ಯುತ್‌-ಸೇತುವೆಗಳು ಮರೀಚಿಕೆಯೇ..? |

ಸುಳ್ಯದ ಬಹುತೇಕ ಪ್ರದೇಶ ಅರಣ್ಯದಿಂದ ಕೂಡಿದೆ. ಮಲೆನಾಡು ತಪ್ಪಲು ಪ್ರದೇಶವಾದ್ದರಿಂದ ಮಳೆಯೂ ಹೆಚ್ಚು,…

11 hours ago

ಹವಾಮಾನ ವರದಿ | 24-06-2025 | ಬದಲಾಯ್ತು ಹವಾಮಾನ ಲಕ್ಷಣಗಳು | ಜೂ.28 ವರೆಗೂ ಉತ್ತಮ ಮಳೆ ನಿರೀಕ್ಷೆ |

ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆಯ ಕಾರಣದಿಂದ ಮುಂಗಾರು ಸ್ವಲ್ಪ ಚುರುಕಾಗಿದ್ದು,…

19 hours ago