ರಾಜ್ಯದ ವಿವಿಧೆಡೆ ಮಳೆಯಾಗುತ್ತಿದೆ. ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಕೊಡಗಿನಲ್ಲಿ ವ್ಯಾಪಕ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆಯ ಕೆ.ಆರ್.ಎಸ್. ಅಣೆಕಟ್ಟೆಯ ಕಾವೇರಿ ನದಿ ಪಾತ್ರದಲ್ಲಿ ಪ್ರವಾಹದ ಭೀತಿ ಎದುರಾಗಿದೆ. ಮಳೆಯ ಕಾರಣದಿಂದ ಹಾಸನ-ಮಂಗಳೂರು ಮಾರ್ಗದ ರಾಷ್ಟ್ರೀಯ ಹೆದ್ದಾರಿ ೭೫ರಲ್ಲಿ ಗುಡ್ಡ ಕುಸಿದಿದ್ದು ಶಿರಾಡಿ ಘಾಟ್ ರಸ್ತೆ ಸಂಚಾರ ಈಗ ಸಂಕಷ್ಟವಾಗಿದೆ.
ವ್ಯಾಪಕ ಮಳೆಯಿಂದ ಕೆಆರ್ಎಸ್ ಅಣೆಕಟ್ಟು ಭರ್ತಿಯಾಗುತ್ತಲೇ ನದಿಗೆ ನೀರು ಬಿಡಲಾಗುತ್ತಿದ್ದು, 33 ಸಾವಿರ ಕ್ಯೂಸೆಕ್ ಒಳ ಹರಿವು ಇದೆ. ಅಷ್ಟೇ ಪ್ರಮಾಣದ ನೀರನ್ನು ನದಿಗೆ ಬಿಡಲಾಗುತ್ತಿದೆ. ಕೊಡಗಿನಿಂದ ಮಾತ್ರವಲ್ಲದೇ ಕಬಿನಿ, ಹಾರಂಗಿ ಹಾಗೂ ಹೇಮಾವತಿ ಜಲಾಶಯಗಳಿಂದಲೂ ಕೆ.ಆರ್.ಎಸ್.ಗೆ ನೀರು ಹರಿದು ಬರುತ್ತಿರುವುದರಿಂದ ಹೊರ ಹರಿವಿನ ಪ್ರಮಾಣ ಇನ್ನೂ ಹೆಚ್ಚಾಗಲಿದೆ ಎಂದು ನೀರಾವರಿ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಶ್ರೀರಂಗಪಟ್ಟಣದ ಹಲವು ನದಿ ಪಾತ್ರಗಳ ಗ್ರಾಮಗಳಿಗೆ ಮುಳುಗಡೆಯ ಭೀತಿ ಎದುರಾಗಿದೆ. ಯಾರೂ ಸಹ ನದಿಗೆ ಇಳಿಯದಂತೆ ಶ್ರೀರಂಗಪಟ್ಟಣ ತಾಲ್ಲೂಕು ಆಡಳಿತ ಸೂಚನೆ ನೀಡಿದೆ.
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…