Advertisement
MIRROR FOCUS

ರಾಜ್ಯದ ವಿವಿಧೆಡೆ ಅಬ್ಬರದ ಮಳೆ | ದ ಕ ಜಿಲ್ಲೆಯಲ್ಲಿ 7 ಮನೆಗಳಿಗೆ ಹಾನಿ | ಮುರಿದು ಬಿದ್ದ 237 ವಿದ್ಯುತ್ ಕಂಬಗಳು |

Share

ರಾಜ್ಯದೆಲ್ಲೆಡೆ ಧಾರಾಕಾರ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತವಾಗಿದೆ.  ಕೊಡಗು ಜಿಲ್ಲೆಯಾದ್ಯಂತ ನಿರಂತರವಾಗಿ ಧಾರಾಕಾರ ಮಳೆಯಾಗುತ್ತಿದ್ದು ಮಡಿಕೇರಿ ತಲಕಾವೇರಿ ಭಾಗಮಂಡಲ ಸೇರಿದಂತೆ ಜಿಲ್ಲೆಯ ಪ್ರಮುಖ ಪಟ್ಟಣಗಳಲ್ಲಿ ಸಾಮಾನ್ಯ ಜನಜೀವನ ವ್ಯತ್ಯಯವಾಗಿದೆ.ಕೊಡಗಿನಲ್ಲಿ ಕಾಲೇಜು, ಅಂಗನವಾಡಿಗೆ ರಜೆ ಘೋಷಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕಳಸ, ಮೂಡಿಗೆರೆ, ಶೃಂಗೇರಿ, ಕೂಪ್ಪ ಹಾಗು ಎನ್.ಆರ್ ಪುರ ತಾಲೂಕಿನ ಅಂಗನವಾಡಿಗಳೀಗೆ ಇಂದಿನಿಂದ 28 ರವರೆಗೆ ಜಿಲ್ಲಾಧಿಕಾರಿಗಳು ರಜೆ ಘೋಷಣೆ ಮಾಡಿದ್ದಾರೆ.

ಚಿಕ್ಕಮಗಳೂರು ನಗರ, ಮೂಡಿಗೆರೆ, ಕೊಟ್ಟಿಗೆಹಾರ, ಕಳಸ ಸೇರಿ ಹಲವೆಡೆ  ರಸ್ತೆಗಳ ಮೇಲೆ ನೀರು ಹರಿಯುತ್ತಿದೆ.  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಬಿರುಸುಗೊಂಡಿದೆ.  ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಲಾಗಿದೆ.  ದ ಕ ಜಿಲ್ಲೆಯಲ್ಲಿ ಇನ್ನೂ ನಾಲ್ಕು ದಿನ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಭಾರೀ ಗಾಳಿ ಮಳೆಯ ಪರಿಣಾಮ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿನ್ನೆಯಿಂದ ಇದುವರೆಗೆ 7 ಮನೆಗಳಿಗೆ ಭಾಗಶಃ ಹಾನಿ ಸಂಭವಿಸಿದೆ. ಒಟ್ಟು 237 ವಿದ್ಯುತ್ ಕಂಬಗಳು ಮುರಿದು ಬಿದ್ದಿದ್ದು,  2 ಟ್ರಾನ್ಸ್‌ಫಾರ್ಮರ್‌ಗಳಿಗೆ ಹಾನಿಯಾಗಿದೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.

ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ.  ಸಮುದ್ರ ಹಾಗೂ ನದಿ ತಟದಲ್ಲಿ ವಾಸಿಸುತ್ತಿರುವ ಜನರನ್ನು ಅಗತ್ಯಬಿದ್ದರೆ ಮುನ್ನೆಚ್ಚರಿಕೆ ಕ್ರಮವಾಗಿ ಸ್ಥಳಾಂತರಿಸಬೇಕು. ಜನರ ಅನುಕೂಲಕ್ಕಾಗಿ ಕಾಳಜಿ ಕೇಂದ್ರಗಳನ್ನು ತೆಗೆಯಬೇಕು. ಸಾರ್ವಜನಿಕರು ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು ಎಂದು ಸಚಿವರು ಮನವಿ ಮಾಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು

ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…

10 hours ago

ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ | ದೆಹಲಿಯಲ್ಲಿ GCWAS-2026 ಆರಂಭ

ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…

10 hours ago

ಗೇರುಹಣ್ಣಿನ ಮೌಲ್ಯವರ್ಧನೆಗೆ ಕೈಗಾರಿಕಾ ಸಂಪರ್ಕ ಸಭೆ : ವ್ಯಾಪಾರೀಕರಣಕ್ಕೆ ಹೊಸ ವೇದಿಕೆ

ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…

20 hours ago

ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿರುವ ಕಡಲ್ಕೊರೆತ ಗಂಭೀರತೆ : ಲೋಕಸಭೆಯಲ್ಲಿ ಧ್ವನಿಯೆತ್ತಿದ ಸಂಸದ

ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…

20 hours ago

ಭಾರತೀಯ ಕೊಕ್ಕೋಗೆ ಜಾಗತಿಕ ಮಟ್ಟದ ಮಾನ್ಯತೆ | ಈಗ ಮೌಲ್ಯವರ್ಧನೆಯೇ ರೈತರಿಗೆ ಹೊಸ ದಾರಿ

ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…

21 hours ago