ರಾಜ್ಯದೆಲ್ಲೆಡೆ ಧಾರಾಕಾರ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತವಾಗಿದೆ. ಕೊಡಗು ಜಿಲ್ಲೆಯಾದ್ಯಂತ ನಿರಂತರವಾಗಿ ಧಾರಾಕಾರ ಮಳೆಯಾಗುತ್ತಿದ್ದು ಮಡಿಕೇರಿ ತಲಕಾವೇರಿ ಭಾಗಮಂಡಲ ಸೇರಿದಂತೆ ಜಿಲ್ಲೆಯ ಪ್ರಮುಖ ಪಟ್ಟಣಗಳಲ್ಲಿ ಸಾಮಾನ್ಯ ಜನಜೀವನ ವ್ಯತ್ಯಯವಾಗಿದೆ.ಕೊಡಗಿನಲ್ಲಿ ಕಾಲೇಜು, ಅಂಗನವಾಡಿಗೆ ರಜೆ ಘೋಷಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕಳಸ, ಮೂಡಿಗೆರೆ, ಶೃಂಗೇರಿ, ಕೂಪ್ಪ ಹಾಗು ಎನ್.ಆರ್ ಪುರ ತಾಲೂಕಿನ ಅಂಗನವಾಡಿಗಳೀಗೆ ಇಂದಿನಿಂದ 28 ರವರೆಗೆ ಜಿಲ್ಲಾಧಿಕಾರಿಗಳು ರಜೆ ಘೋಷಣೆ ಮಾಡಿದ್ದಾರೆ.
ಚಿಕ್ಕಮಗಳೂರು ನಗರ, ಮೂಡಿಗೆರೆ, ಕೊಟ್ಟಿಗೆಹಾರ, ಕಳಸ ಸೇರಿ ಹಲವೆಡೆ ರಸ್ತೆಗಳ ಮೇಲೆ ನೀರು ಹರಿಯುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಬಿರುಸುಗೊಂಡಿದೆ. ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಲಾಗಿದೆ. ದ ಕ ಜಿಲ್ಲೆಯಲ್ಲಿ ಇನ್ನೂ ನಾಲ್ಕು ದಿನ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಭಾರೀ ಗಾಳಿ ಮಳೆಯ ಪರಿಣಾಮ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿನ್ನೆಯಿಂದ ಇದುವರೆಗೆ 7 ಮನೆಗಳಿಗೆ ಭಾಗಶಃ ಹಾನಿ ಸಂಭವಿಸಿದೆ. ಒಟ್ಟು 237 ವಿದ್ಯುತ್ ಕಂಬಗಳು ಮುರಿದು ಬಿದ್ದಿದ್ದು, 2 ಟ್ರಾನ್ಸ್ಫಾರ್ಮರ್ಗಳಿಗೆ ಹಾನಿಯಾಗಿದೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.
ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ. ಸಮುದ್ರ ಹಾಗೂ ನದಿ ತಟದಲ್ಲಿ ವಾಸಿಸುತ್ತಿರುವ ಜನರನ್ನು ಅಗತ್ಯಬಿದ್ದರೆ ಮುನ್ನೆಚ್ಚರಿಕೆ ಕ್ರಮವಾಗಿ ಸ್ಥಳಾಂತರಿಸಬೇಕು. ಜನರ ಅನುಕೂಲಕ್ಕಾಗಿ ಕಾಳಜಿ ಕೇಂದ್ರಗಳನ್ನು ತೆಗೆಯಬೇಕು. ಸಾರ್ವಜನಿಕರು ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು ಎಂದು ಸಚಿವರು ಮನವಿ ಮಾಡಿದ್ದಾರೆ.
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…