Advertisement
ಸುದ್ದಿಗಳು

ಮತ್ತೆ ಚುರುಕಾದ ಮಳೆ | ಕೃಷ್ಣಾ ನದಿ ತೀರದಲ್ಲಿ ಪ್ರವಾಹ ಭೀತಿ | ಬಸವಸಾಗರ ಜಲಾಶಯದಿಂದ ಭಾರಿ ಪ್ರಮಾಣದ ನೀರು ಬಿಡುಗಡೆ

Share

ಭರ್ಜರಿಯಾಗಿ ಎಂಟ್ರಿ ಕೊಟ್ಟ ಮುಂಗಾರು ಮಳೆ(Monsoon rain) ಚೆನ್ನಾಗಿ ಸುರಿದು ಒಂದಷ್ಟು ಅನಾಹುತಗಳನ್ನು ಸೃಷ್ಟಿಸಿ ಮಾಯವಾಗಿತ್ತು. ಅಲ್ಲಲ್ಲಿ ಮಳೆ ವಾತಾವರಣ ಇದ್ದರು, ಕಳೆದ ಒಂದು ವಾರದಿಂದ ಅಂತ ಮಳೆ ಇರಲಿಲ್ಲ. ಆದರೆ ಉತ್ತರ ಕರ್ನಾಟಕ(North Karnataka) ಕಡೆ ಮತ್ತೆ ಮಳೆ ಆರಂಭವಾದ ಹಿನ್ನೆಲೆಯಲ್ಲಿ ಅಲ್ಲಲ್ಲಿ ಜನರ ಜೀವನ ಅಸ್ತವ್ಯಸ್ತ ಗೊಂಡಿದೆ. ಇದೀಗ ಯಾದಗಿರಿ(Yadagiri) ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರದ ಬಸವಸಾಗರ ಡ್ಯಾಂ (Basava Sagara Dam) ನಿಂದ ಭಾರಿ ಪ್ರಮಾಣದ ನೀರು ಬಿಡುಗಡೆಯಾಗಿದ್ದು, ಕೃಷ್ಣಾ ನದಿ (Krishna River) ತೀರದಲ್ಲಿ ಮತ್ತೆ ಪ್ರವಾಹ ಭೀತಿ ಉಂಟಾಗಿದೆ.

ಡ್ಯಾಂನ 25 ಗೇಟ್ ಓಪನ್ ಮಾಡಿ ಕೃಷ್ಣಾ ನದಿಗೆ 1,20,800 ಕ್ಯುಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಜಲಾಶಯಕ್ಕೆ 1,10,000 ಕ್ಯುಸೆಕ್ ನೀರು ಒಳಹರಿವಿದೆ. 33.33 ಟಿಎಂಸಿ ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಇಂದು 30.83 ಟಿಎಂಸಿ ನೀರು ಸಂಗ್ರಹವಿದೆ. ಜಲಾಶಯಕ್ಕೆ ನೀರಿನ ಒಳಹರಿವು ಹೆಚ್ಚಳ ಹಿನ್ನಲೆ ನೀರು ಬಿಡುಗಡೆ ಪ್ರಮಾಣ ಏರಿಕೆಯಾಗಿದೆ.
ನದಿ ತೀರಕ್ಕೆ ತೆರಳದಂತೆ ಎಚ್ಚರಿಕೆ ನೀಡಿದರೂ ಡ್ಯಾಂ ಮುಂಭಾಗದಲ್ಲಿಯೇ ಮೀನುಗಾರರು ಹುಚ್ಚಾಟ ನಡೆಸಿದ್ದಾರೆ. ಉಕ್ಕಿ ಹರಿಯುವ ನದಿಯಲ್ಲಿಯೇ ಮೀನು ಹಿಡಿಯುತ್ತಿದ್ದು, ಅಪಾಯವನ್ನು ಲೆಕ್ಕಿಸದೇ ಡೋಂಟ್ ಕೇರ್ ಎಂದು ಮೀನು ಹಿಡಿಯುವ ದುಸ್ಸಾಹಸಕ್ಕೆ ಕೈ ಹಾಕಿದ್ದಾರೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

2 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

2 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

2 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

3 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

3 days ago