ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳಲ್ಲಿ ಮತ್ತು ಬೆಳಗಾವಿ ಜಿಲ್ಲೆಯ ಘಟ್ಟ ಸೇರಿದಂತೆ ಹಲವು ತಾಲೂಕುಗಳಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯ ಕೃಷ್ಣಾ ನದಿ ತೀರದ ಗ್ರಾಮಗಳ ಜನರು ಎಚ್ಚರಿಕೆ ವಹಿಸಬೇಕಾಗಿ ಜಿಲ್ಲಾಡಳಿತ ಮನವಿ ಮಾಡಿದೆ. ಜಿಲ್ಲೆಯ ಬಹುತೇಕ ನದಿಗಳು ಉಕ್ಕಿಹರಿಯುತ್ತಿದ್ದು, ನದಿ ಪಾತ್ರದ ಜನರನ್ನು ಸುರಕ್ಷಿತ ಸ್ಥಳಕ್ಕೆ ಹೋಗುವಂತೆ ಮನವಿ ಮಾಡಲಾಗಿದೆ.
ಕೊಯ್ನಾ ಡ್ಯಾಮ್ ನಿಂದ ಇಂದು 42,100 ಕ್ಯೂಸೆಕ್, ರಾಜಾಪುರ್ ಬ್ಯಾರೇಜ್ ನಿಂದ ಎರಡು ಲಕ್ಷ 44,ಸಾವಿರದ 757, ಕ್ಯೂಸೆಕ್ – ದೂಧಗಂಗಾ ನದಿಯಿಂದ 45,050 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು ಒಟ್ಟು ಚಿಕ್ಕೋಡಿಯ ಕಲ್ಲೋಳ ಬ್ಯಾರೇಜ್ ಹತ್ತಿರ ಎರಡು ಲಕ್ಷ 89 ಸಾವಿರ 807 ಕ್ಯೂಸೆಕ್ ಹರಿವಿನ ಪ್ರಮಾಣ ದಾಖಲಾಗಿದೆ. ಹಿಪ್ಪರಗಿ ಬ್ಯಾರೇಜ್ ನಿಂದ ಎರಡು ಲಕ್ಷ 90 ಸಾವಿರದ 947 ಕ್ಯೂಸೆಕ್ ನೀರನ್ನು ಹೊರ ಹರಿಸಲಾಗುತ್ತಿದೆ. ಕೃಷ್ಣಾ ನದಿ ತೀರದಲ್ಲಿ ಇರುವ ತಾಲೂಕುಗಳಾದ ಚಿಕ್ಕೋಡಿ, ಕಾಗವಾಡ, ಅಥಣಿ, ರಾಯಭಾಗ ತಾಲೂಕಿನ ನದಿ ತೀರದ ಗ್ರಾಮಗಳಲ್ಲಿ ಪ್ರವಾಹ ಪರಿಸ್ಥಿತಿಯ ಆತಂಕ ಎದುರಾಗಿದೆ. ಹಲವು ಕುಟುಂಬಗಳನ್ನು ಸ್ಥಳಾಂತರ ಮಾಡಲಾಗಿದೆ. ಕೆಲವು ಕಡೆ ಕಾಳಜಿ ಕೇಂದ್ರಗಳನ್ನೂ ತೆರೆಯಲಾಗಿದೆ.
ರಾಯಬಾಗ ತಾಲೂಕಿನ ಮಾಂಜರಿ-ಸವದತ್ತಿ ಹಾಲಳ್ಳಿ-ಚಿಂಚಲಿ ಗ್ರಾಮಗಳ ಜನರು ಪರ್ಯಾಯ ಮಾರ್ಗಗಳಿಂದ ಸಂಚರಿಸುತ್ತಿದ್ದಾರೆ. ಸಾರ್ವಜನಿಕರು ಸುರಕ್ಷಿತ ಸ್ಥಳಗಳಿಗೆ ತೆರಳುವದಕ್ಕೆ ಹಿಂದೇಟು ಹಾಕಬೇಡಿ ಎಂದು ಮನವಿ ಮಾಡಲಾಗಿದೆ.
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…