ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳಲ್ಲಿ ಮತ್ತು ಬೆಳಗಾವಿ ಜಿಲ್ಲೆಯ ಘಟ್ಟ ಸೇರಿದಂತೆ ಹಲವು ತಾಲೂಕುಗಳಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯ ಕೃಷ್ಣಾ ನದಿ ತೀರದ ಗ್ರಾಮಗಳ ಜನರು ಎಚ್ಚರಿಕೆ ವಹಿಸಬೇಕಾಗಿ ಜಿಲ್ಲಾಡಳಿತ ಮನವಿ ಮಾಡಿದೆ. ಜಿಲ್ಲೆಯ ಬಹುತೇಕ ನದಿಗಳು ಉಕ್ಕಿಹರಿಯುತ್ತಿದ್ದು, ನದಿ ಪಾತ್ರದ ಜನರನ್ನು ಸುರಕ್ಷಿತ ಸ್ಥಳಕ್ಕೆ ಹೋಗುವಂತೆ ಮನವಿ ಮಾಡಲಾಗಿದೆ.
ಕೊಯ್ನಾ ಡ್ಯಾಮ್ ನಿಂದ ಇಂದು 42,100 ಕ್ಯೂಸೆಕ್, ರಾಜಾಪುರ್ ಬ್ಯಾರೇಜ್ ನಿಂದ ಎರಡು ಲಕ್ಷ 44,ಸಾವಿರದ 757, ಕ್ಯೂಸೆಕ್ – ದೂಧಗಂಗಾ ನದಿಯಿಂದ 45,050 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು ಒಟ್ಟು ಚಿಕ್ಕೋಡಿಯ ಕಲ್ಲೋಳ ಬ್ಯಾರೇಜ್ ಹತ್ತಿರ ಎರಡು ಲಕ್ಷ 89 ಸಾವಿರ 807 ಕ್ಯೂಸೆಕ್ ಹರಿವಿನ ಪ್ರಮಾಣ ದಾಖಲಾಗಿದೆ. ಹಿಪ್ಪರಗಿ ಬ್ಯಾರೇಜ್ ನಿಂದ ಎರಡು ಲಕ್ಷ 90 ಸಾವಿರದ 947 ಕ್ಯೂಸೆಕ್ ನೀರನ್ನು ಹೊರ ಹರಿಸಲಾಗುತ್ತಿದೆ. ಕೃಷ್ಣಾ ನದಿ ತೀರದಲ್ಲಿ ಇರುವ ತಾಲೂಕುಗಳಾದ ಚಿಕ್ಕೋಡಿ, ಕಾಗವಾಡ, ಅಥಣಿ, ರಾಯಭಾಗ ತಾಲೂಕಿನ ನದಿ ತೀರದ ಗ್ರಾಮಗಳಲ್ಲಿ ಪ್ರವಾಹ ಪರಿಸ್ಥಿತಿಯ ಆತಂಕ ಎದುರಾಗಿದೆ. ಹಲವು ಕುಟುಂಬಗಳನ್ನು ಸ್ಥಳಾಂತರ ಮಾಡಲಾಗಿದೆ. ಕೆಲವು ಕಡೆ ಕಾಳಜಿ ಕೇಂದ್ರಗಳನ್ನೂ ತೆರೆಯಲಾಗಿದೆ.
ರಾಯಬಾಗ ತಾಲೂಕಿನ ಮಾಂಜರಿ-ಸವದತ್ತಿ ಹಾಲಳ್ಳಿ-ಚಿಂಚಲಿ ಗ್ರಾಮಗಳ ಜನರು ಪರ್ಯಾಯ ಮಾರ್ಗಗಳಿಂದ ಸಂಚರಿಸುತ್ತಿದ್ದಾರೆ. ಸಾರ್ವಜನಿಕರು ಸುರಕ್ಷಿತ ಸ್ಥಳಗಳಿಗೆ ತೆರಳುವದಕ್ಕೆ ಹಿಂದೇಟು ಹಾಕಬೇಡಿ ಎಂದು ಮನವಿ ಮಾಡಲಾಗಿದೆ.
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…
ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…