Advertisement
ಸುದ್ದಿಗಳು

ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ

Share

ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಚಿಕ್ಕಮಗಳೂರು, ಹಾಸನ, ದಾವಣಗೆರೆ ಜಿಲ್ಲೆಯ ಹಲವೆಡೆ ಧಾರಾಕಾರ ಮಳೆಯಾಗಿದೆ. ಮಹಾರಾಷ್ಟ್ರದ ಕೃಷ್ಣಾಕೊಳ್ಳದಲ್ಲಿ ಭಾರೀ ಮಳೆ ಆಗುತ್ತಿರುವುದರಿಂದ ಕೃಷ್ಣಾ ನದಿಯಿಂದ ಹಾಗೂ ಘಟಪ್ರಭಾ ನದಿಯಿಂದ ಅಪಾರ ಪ್ರಮಾಣದ ನೀರನ್ನು ಬಿಡಲಾಗುತ್ತದೆ, ಇದರಿಂದ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಅಣೆಕಟ್ಟಿನ ಒಳಹರಿವೂ ಹೆಚ್ಚಾಗಿದೆ. ಆಲಮಟ್ಟಿ ಅಣೆಕಟ್ಟೆಯ ಕೆಳಭಾಗದಲ್ಲಿರುವ ಜನರು ಎಚ್ಚರ ವಹಿಸಬೇಕೆಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.

ವಾಯುಭಾರ ಕುಸಿತದಿಂದಾಗಿ ಯಾದಗಿರಿ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆ ಇನ್ನೂ 3-4  ದಿನಗಳವರೆಗೆ ಸುರಿಯಲಿದೆ. ಧಾರವಾಡ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಕಳೆದ 24  ಗಂಟೆಯಲ್ಲಿ ಶೇಕಡ 519 ರಷ್ಟು ಮಳೆಯಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು  ಹೇಳಿದ್ದಾರೆ.  ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಕಲಘಟಗಿ, ಧಾರವಾಡ, ನವಲಗುಂದ, ಅಣ್ಣಿಗೇರಿ ಮತ್ತು ಕುಂದಗೋಳ ತಾಲೂಕುಗಳಲ್ಲಿ ಜಾಸ್ತಿ ಪ್ರಮಾಣದಲ್ಲಿ ಮಳೆಯಾಗಿದೆ. ಬೆಳೆ ಹಾನಿ ಉಂಟಾದರೆ ಸರ್ಕಾರದ ನಿಯಮಾನುಸಾರ ಪರಿಹಾರ ಒದಗಿಸಲು ಕ್ರಮ ವಹಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ  ನಮ್ಮ WhatsApp Channel   ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ನಿರ್ಬಂಧ – ಆಸ್ಟ್ರೇಲಿಯಾದ ಕ್ರಮಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿರ್ಬಂಧ ವಿಧಿಸಿರುವ ಆಸ್ಟ್ರೇಲಿಯಾದ ಕ್ರಮವನ್ನು ಪ್ರಧಾನಿ…

3 hours ago

ಎಲ್‌ ನಿನೊ ಎಫೆಕ್ಟ್‌ – ಮುಂದಿನ ವರ್ಷ ಮತ್ಸ್ಯೋದ್ಯಮಕ್ಕೆ ಸಂಕಷ್ಟ?

ಎಲ್‌ ನಿನೊ ಪರಿಣಾಮದಿಂದ 2027ರಲ್ಲಿ ಎಣ್ಣೆ ಸಾರ್ಡಿನ್ ಮೀನುಗಳ ಉತ್ಪಾದನೆ ಕುಸಿಯುವ ಸಾಧ್ಯತೆ…

4 hours ago

ಮುಂಗಾರು ಇದ್ದಕ್ಕಿದ್ದಂತೆ ದುರ್ಬಲವಾಗಿದ್ದೇಕೆ..? ಇಲ್ಲಿದೆ ವೈಜ್ಞಾನಿಕ ಕಾರಣ

ದೇಶದ ಬಹುತೇಕ ಭಾಗಗಳಿಂದ ಮಳೆ ಮೋಡಗಳು ಕಡಿಮೆಯಾಗಲು ಪಶ್ಚಿಮ ಪೆಸಿಫಿಕ್‌ನ ಪ್ರಬಲ ಚಂಡಮಾರುತ…

8 hours ago

ಮತ್ತೆ ಹೆಚ್ಚಿದ ದೇಶದ ಮಳೆ ಕೊರತೆ – ಜುಲೈ ಆರಂಭದ ಚೇತರಿಕೆ ಕುಂಠಿತ, ಮುಂಗಾರು ಮತ್ತೆ ದುರ್ಬಲ

ಜುಲೈ ಮೊದಲ ವಾರದ ಚೇತರಿಕೆಯ ಬಳಿಕ ದೇಶದ ಮುಂಗಾರು ಮತ್ತೆ ದುರ್ಬಲಗೊಂಡಿದ್ದು, ಮಳೆ…

9 hours ago

ಆರೋಪದ ಆಚೆ ನಿಂತು ಒಮ್ಮೆ ಯೋಚಿಸಿದ್ದೀರಾ..?

ಯಾರನ್ನಾದರೂ ಆರೋಪಿಸುವ ಮೊದಲು ಅವರ ಪರಿಸ್ಥಿತಿ ಅರ್ಥಮಾಡಿಕೊಳ್ಳುವ ಪ್ರಯತ್ನ ಮಾಡಿದರೆ ಅನೇಕ ಸಂಬಂಧಗಳು…

12 hours ago

ಮಳೆಗಾಲವೂ ಬೇಸಿಗೆಯಷ್ಟೇ ಅಪಾಯಕಾರಿ..? ಹವಾಮಾನ ಬದಲಾವಣೆಯಿಂದ ಹೆಚ್ಚುತ್ತಿದೆ ‘ಹೀಟ್‌ ಸ್ಟ್ರೆಸ್‌’ ಆತಂಕ

ಹವಾಮಾನ ಬದಲಾವಣೆಯಿಂದ ಮಳೆಗಾಲದಲ್ಲೂ ಅಪಾಯಕಾರಿ ಹೀಟ್‌ ಸ್ಟ್ರೆಸ್‌ ಹೆಚ್ಚುವ ಸಾಧ್ಯತೆ ಇದೆ ಎಂದು…

16 hours ago