ರಾಜ್ಯದ ಹಲವೆಡೆ ತಂಪೆರೆದ ಮಳೆರಾಯ | ಬಿಸಿಲಿನಿಂದ ಕಂಗೆಟ್ಟ ರೈತರು ಹಾಗೂ ಕಾಫಿ ಬೆಳೆಗಾರರಲ್ಲಿ ಸಂತಸ

April 11, 2024
8:54 PM
ರಾಜ್ಯದ ವಿವಿಧ ಕಡೆಗಳಲ್ಲಿ ಮಳೆಯಾಗಿದೆ.

ಬಿಸಿಲಿನ ತಾಪ(Temperature) ದಿನದಿಂದ ದಿನಕ್ಕೆ ಏರುತ್ತಿದೆ. ಭೂಮಿ(Earth) ಕಾದ ಕಾವಲಿಯಂತಾಗಿದೆ. ಬಿರು ಬಿಸಿಲಿಗೆ ಜನ ಬಸವಳಿದಿದ್ದಾರೆ. ಪ್ರಾಣಿ ಪಕ್ಷಿಗಳು ನೀರು ಆಹಾರಕ್ಕಾಗಿ ಪರದಾಡುವಂತಾಗಿದೆ. ವರುಣನ ಕೃಪೆಗಾಗಿ ಜನ ಕಾಯುತ್ತಿದ್ದಾರೆ. ಈ ಮಧ್ಯೆ ತೀವ್ರ ಬೇಸಿಗೆಯ ನಡುವೆಯೂ, ಹಲವು ಜಿಲ್ಲೆಗಳಲ್ಲಿ ವರುಣ (Rain) ತಂಪೆರೆದಿದ್ದಾನೆ. ಶಿವಮೊಗ್ಗ (Shivamogga), ಮಡಿಕೇರಿ (Madikeri), ಚಿಕ್ಕಮಗಳೂರು (Chikkamagaluru), ವಿಜಯಪುರ ಸೇರಿದಂತೆ ಕಲಬುರಗಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮಳೆಯಾಗಿದೆ.

Advertisement
Advertisement
ಕೊಡಗಿನ ಹಲವೆಡೆ ಹಗುರ ಮಳೆಯಾಗಿದೆ. ಜಿಲ್ಲೆಯ ವಿರಾಜಪೇಟೆಯ ಹಲವಾರು ಗ್ರಾಮೀಣ ಭಾಗಗಳಲ್ಲಿ ಮಳೆಯಾಗಿದ್ದು, ಬಿಸಿಲಿನ ತಾಪಕ್ಕೆ ತತ್ತರಿಸಿದ ಜನಕ್ಕೆ ಮಳೆರಾಯ ತಂಪೆರೆದಿದ್ದಾನೆ. ಕಳೆದ ಒಂದುವಾರದಿಂದ ಕೊಡಗಿನ ಗ್ರಾಮೀಣ ಭಾಗಗಳಲ್ಲಿ ಸಂಜೆಯ ವೇಳೆ ಮಳೆಯಾಗುತ್ತಿದೆ. ಇನ್ನೂ ಶಿವಮೊಗ್ಗ ನಗರ ಸೇರಿದಂತೆ ಜಿಲ್ಲೆಯ ಹಲವೆಡೆ ಮಳೆ ಬಿದ್ದಿದ್ದು ಬಿಸಿಲಿನಿಂದ ಬಸವಳಿದ ಜನಕ್ಕೆ, ವರುಣ ಕೊಂಚ ರಿಲ್ಯಾಕ್ಸ್ ಕೊಟ್ಟಿದ್ದಾನೆ.  ಚಿಕ್ಕಮಗಳೂರಿನ, ಬಾಳೆಹೊನ್ನೂರು, ಎನ್‍ಆರ್‍ಪುರ, ಆವುತಿ, ಹಂಗರವಳ್ಳಿ, ಕೆರೆಮಕ್ಕಿ, ಬೈಗೂರು ಸೇರಿದಂತೆ ಹಲವೆಡೆ ಭಾರೀ ಮಳೆಯಾಗಿದೆ. ಮಳೆಯಿಂದ ರೈತರು ಹಾಗೂ ಕಾಫಿ ಬೆಳೆಗಾರರಲ್ಲಿ ಸಂಭ್ರಮ ಮನೆಮಾಡಿದೆ.

ವಿಜಯಪುರ ಜಿಲ್ಲೆಯ ಹಲವೆಡೆ ಬಿರುಗಾಳಿ ಸಹಿತ ಮಳೆಯಾಗಿದ್ದು, ವಿಜಯಪುರ ನಗರ, ತಿಕೋಟ ತಾಲೂಕಿನ ಘೋಣಸಗಿ, ಬಾಬಾನಗರ, ಹುಬನೂರು, ಸೋಮದೇವರಹಟ್ಟಿ, ಬಿಜ್ಜರಗಿ, ಕಳ್ಳಕವಟಗಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ಗಾಳಿ ಸಹಿತ ಹಗುರ ಮಳೆಯಾಗಿದೆ. ಕಲಬುರಗಿ ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಹಲವಡೆ ಜೋರು ಮಳೆಯಾಗಿದೆ. ಕಲಬುರಗಿ ನಗರ ಸೇರಿ ಜಿಲ್ಲೆಯ ಹಲವಡೆ ಮೋಡ ಕವಿದ ವಾತಾವರಣವಿದ್ದು, ರಾತ್ರಿ ವೇಳೆ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

  • ಅಂತರ್ಜಾಲ ಮಾಹಿತಿ

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಆತ್ಮನಿರ್ಭರ ಯೋಜನೆಯಿಂದ ಸ್ವಾವಲಂಬಿ ಬದುಕು | ಸಾವಯವ ಕೃಷಿಯಲ್ಲಿ ಕಬ್ಬು ಬೆಳೆದು ಯಶಸ್ವಿ
June 16, 2025
11:03 AM
by: ದ ರೂರಲ್ ಮಿರರ್.ಕಾಂ
ಹೊಸರುಚಿ | ನೆಕ್ಕರೆ ಮಾವಿನ ಕಾಯಿ ಪಲ್ಯ
June 16, 2025
8:00 AM
by: ದಿವ್ಯ ಮಹೇಶ್
ಜೂನ್ ಮೂರನೇ ವಾರ ಗುರು ಆದಿತ್ಯ ರಾಜಯೋಗ, ಈ 5 ರಾಶಿಗೆ ಅದೃಷ್ಟವೋ ಅದೃಷ್ಟ.!
June 16, 2025
7:01 AM
by: ದ ರೂರಲ್ ಮಿರರ್.ಕಾಂ
ಮುಂದುವರಿದ ಮಳೆಯಬ್ಬರ | 4 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ |
June 15, 2025
10:27 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group