Advertisement
MIRROR FOCUS

ರಾಜ್ಯದ ಹಲವೆಡೆ ತಂಪೆರೆದ ಮಳೆರಾಯ | ಬಿಸಿಲಿನಿಂದ ಕಂಗೆಟ್ಟ ರೈತರು ಹಾಗೂ ಕಾಫಿ ಬೆಳೆಗಾರರಲ್ಲಿ ಸಂತಸ

Share

ಬಿಸಿಲಿನ ತಾಪ(Temperature) ದಿನದಿಂದ ದಿನಕ್ಕೆ ಏರುತ್ತಿದೆ. ಭೂಮಿ(Earth) ಕಾದ ಕಾವಲಿಯಂತಾಗಿದೆ. ಬಿರು ಬಿಸಿಲಿಗೆ ಜನ ಬಸವಳಿದಿದ್ದಾರೆ. ಪ್ರಾಣಿ ಪಕ್ಷಿಗಳು ನೀರು ಆಹಾರಕ್ಕಾಗಿ ಪರದಾಡುವಂತಾಗಿದೆ. ವರುಣನ ಕೃಪೆಗಾಗಿ ಜನ ಕಾಯುತ್ತಿದ್ದಾರೆ. ಈ ಮಧ್ಯೆ ತೀವ್ರ ಬೇಸಿಗೆಯ ನಡುವೆಯೂ, ಹಲವು ಜಿಲ್ಲೆಗಳಲ್ಲಿ ವರುಣ (Rain) ತಂಪೆರೆದಿದ್ದಾನೆ. ಶಿವಮೊಗ್ಗ (Shivamogga), ಮಡಿಕೇರಿ (Madikeri), ಚಿಕ್ಕಮಗಳೂರು (Chikkamagaluru), ವಿಜಯಪುರ ಸೇರಿದಂತೆ ಕಲಬುರಗಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮಳೆಯಾಗಿದೆ.

Advertisement
Advertisement
ಕೊಡಗಿನ ಹಲವೆಡೆ ಹಗುರ ಮಳೆಯಾಗಿದೆ. ಜಿಲ್ಲೆಯ ವಿರಾಜಪೇಟೆಯ ಹಲವಾರು ಗ್ರಾಮೀಣ ಭಾಗಗಳಲ್ಲಿ ಮಳೆಯಾಗಿದ್ದು, ಬಿಸಿಲಿನ ತಾಪಕ್ಕೆ ತತ್ತರಿಸಿದ ಜನಕ್ಕೆ ಮಳೆರಾಯ ತಂಪೆರೆದಿದ್ದಾನೆ. ಕಳೆದ ಒಂದುವಾರದಿಂದ ಕೊಡಗಿನ ಗ್ರಾಮೀಣ ಭಾಗಗಳಲ್ಲಿ ಸಂಜೆಯ ವೇಳೆ ಮಳೆಯಾಗುತ್ತಿದೆ. ಇನ್ನೂ ಶಿವಮೊಗ್ಗ ನಗರ ಸೇರಿದಂತೆ ಜಿಲ್ಲೆಯ ಹಲವೆಡೆ ಮಳೆ ಬಿದ್ದಿದ್ದು ಬಿಸಿಲಿನಿಂದ ಬಸವಳಿದ ಜನಕ್ಕೆ, ವರುಣ ಕೊಂಚ ರಿಲ್ಯಾಕ್ಸ್ ಕೊಟ್ಟಿದ್ದಾನೆ. ಚಿಕ್ಕಮಗಳೂರಿನ, ಬಾಳೆಹೊನ್ನೂರು, ಎನ್‍ಆರ್‍ಪುರ, ಆವುತಿ, ಹಂಗರವಳ್ಳಿ, ಕೆರೆಮಕ್ಕಿ, ಬೈಗೂರು ಸೇರಿದಂತೆ ಹಲವೆಡೆ ಭಾರೀ ಮಳೆಯಾಗಿದೆ. ಮಳೆಯಿಂದ ರೈತರು ಹಾಗೂ ಕಾಫಿ ಬೆಳೆಗಾರರಲ್ಲಿ ಸಂಭ್ರಮ ಮನೆಮಾಡಿದೆ.

ವಿಜಯಪುರ ಜಿಲ್ಲೆಯ ಹಲವೆಡೆ ಬಿರುಗಾಳಿ ಸಹಿತ ಮಳೆಯಾಗಿದ್ದು, ವಿಜಯಪುರ ನಗರ, ತಿಕೋಟ ತಾಲೂಕಿನ ಘೋಣಸಗಿ, ಬಾಬಾನಗರ, ಹುಬನೂರು, ಸೋಮದೇವರಹಟ್ಟಿ, ಬಿಜ್ಜರಗಿ, ಕಳ್ಳಕವಟಗಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ಗಾಳಿ ಸಹಿತ ಹಗುರ ಮಳೆಯಾಗಿದೆ. ಕಲಬುರಗಿ ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಹಲವಡೆ ಜೋರು ಮಳೆಯಾಗಿದೆ. ಕಲಬುರಗಿ ನಗರ ಸೇರಿ ಜಿಲ್ಲೆಯ ಹಲವಡೆ ಮೋಡ ಕವಿದ ವಾತಾವರಣವಿದ್ದು, ರಾತ್ರಿ ವೇಳೆ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಣ್ಣಿಲ್ಲದೇ ಅವಕಾಡೊ ಬೆಳೆ..! ಜೇನು ಸೇರಿಸಿದ ಕೃಷಿ ಈಗ ಹೊಸ ಟ್ರೆಂಡ್

2026 ರಲ್ಲಿ ಹೈಡ್ರೋಪೋನಿಕ್ ಅವಕಾಡೊ ಕೃಷಿ ಮತ್ತು ಜೇನು ಪರಾಗಸ್ಪರ್ಶದ ಸಂಯೋಜನೆ ಹೊಸ…

8 hours ago

ರೇಷ್ಮೆ ಗೂಡಿಗೆ 800 ರೂ.ವರೆಗೆ ಬೆಲೆ | ಚಾಮರಾಜನಗರದಲ್ಲಿ ರೈತರಿಗೆ ಲಾಭದಾಯಕ ಹಾದಿ

ಚಾಮರಾಜನಗರ ಜಿಲ್ಲೆಯಲ್ಲಿ ರೇಷ್ಮೆ ಗೂಡಿಗೆ ಕೆಜಿಗೆ 750ರಿಂದ 800 ರೂಪಾಯಿವರೆಗೆ ಬೆಲೆ ಸಿಗುತ್ತಿದೆ.…

8 hours ago

ಸ್ಥಳೀಯ ಚುನಾವಣೆಗಳಲ್ಲಿ ಇವಿಎಂಗೆ ಬ್ರೇಕ್ | ಬ್ಯಾಲೆಟ್ ಪೇಪರ್ ಮೂಲಕ ಮತದಾನಕ್ಕೆ ಸಚಿವ ಸಂಪುಟ ಹಸಿರು ನಿಶಾನೆ

ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಮತದಾನ…

8 hours ago

ಕೇಂದ್ರವು ಕೇರಳದ ರಬ್ಬರ್ ಕ್ಷೇತ್ರವನ್ನು ದುರ್ಬಲಗೊಳಿಸುತ್ತಿದೆ – ಆರೋಪ

ಕೇಂದ್ರ ಸರ್ಕಾರವು ರಾಜ್ಯದ ರಬ್ಬರ್ ಕೃಷಿಯನ್ನು ಈಶಾನ್ಯಕ್ಕೆ ಸ್ಥಳಾಂತರಿಸುವ ಮೂಲಕ ರಬ್ಬರ್ ಕ್ಷೇತ್ರವನ್ನು…

8 hours ago

ಅಡಿಕೆ ಮಾರುಕಟ್ಟೆ ಸಮೀಕರಣ : ಬೆಲೆ ನಿರ್ಧಾರದ ಹಿಂದಿನ ಅರ್ಥಶಾಸ್ತ್ರ ಮತ್ತು ಮನೋವಿಜ್ಞಾನ

ಅಡಿಕೆ ಮಾರುಕಟ್ಟೆ ಎಂದರೆ ಕೇವಲ ಕೃಷಿ ಉತ್ಪನ್ನಗಳ ವಿನಿಮಯ ಕೇಂದ್ರವಲ್ಲ; ಅದೊಂದು ಸಂಕೀರ್ಣವಾದ…

17 hours ago

ಅಡಿಕೆ ಕಳ್ಳಸಾಗಣೆ ಜಾಲಕ್ಕೆ ಮಿಝೋರಂ ಸರ್ಕಾರದ ಬಿಗಿ ಹಿಡಿತ – ಅಡಿಕೆ ಮಾರುಕಟ್ಟೆ ಚೇತರಿಕೆ ಸಾಧ್ಯತೆ

ಮಿಝೋರಂ ಸರ್ಕಾರವು ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಯಾವುದೇ…

18 hours ago