Advertisement
MIRROR FOCUS

ರಾಜ್ಯದ ಹಲವೆಡೆ ತಂಪೆರೆದ ಮಳೆರಾಯ | ಬಿಸಿಲಿನಿಂದ ಕಂಗೆಟ್ಟ ರೈತರು ಹಾಗೂ ಕಾಫಿ ಬೆಳೆಗಾರರಲ್ಲಿ ಸಂತಸ

Share

ಬಿಸಿಲಿನ ತಾಪ(Temperature) ದಿನದಿಂದ ದಿನಕ್ಕೆ ಏರುತ್ತಿದೆ. ಭೂಮಿ(Earth) ಕಾದ ಕಾವಲಿಯಂತಾಗಿದೆ. ಬಿರು ಬಿಸಿಲಿಗೆ ಜನ ಬಸವಳಿದಿದ್ದಾರೆ. ಪ್ರಾಣಿ ಪಕ್ಷಿಗಳು ನೀರು ಆಹಾರಕ್ಕಾಗಿ ಪರದಾಡುವಂತಾಗಿದೆ. ವರುಣನ ಕೃಪೆಗಾಗಿ ಜನ ಕಾಯುತ್ತಿದ್ದಾರೆ. ಈ ಮಧ್ಯೆ ತೀವ್ರ ಬೇಸಿಗೆಯ ನಡುವೆಯೂ, ಹಲವು ಜಿಲ್ಲೆಗಳಲ್ಲಿ ವರುಣ (Rain) ತಂಪೆರೆದಿದ್ದಾನೆ. ಶಿವಮೊಗ್ಗ (Shivamogga), ಮಡಿಕೇರಿ (Madikeri), ಚಿಕ್ಕಮಗಳೂರು (Chikkamagaluru), ವಿಜಯಪುರ ಸೇರಿದಂತೆ ಕಲಬುರಗಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮಳೆಯಾಗಿದೆ.

ಕೊಡಗಿನ ಹಲವೆಡೆ ಹಗುರ ಮಳೆಯಾಗಿದೆ. ಜಿಲ್ಲೆಯ ವಿರಾಜಪೇಟೆಯ ಹಲವಾರು ಗ್ರಾಮೀಣ ಭಾಗಗಳಲ್ಲಿ ಮಳೆಯಾಗಿದ್ದು, ಬಿಸಿಲಿನ ತಾಪಕ್ಕೆ ತತ್ತರಿಸಿದ ಜನಕ್ಕೆ ಮಳೆರಾಯ ತಂಪೆರೆದಿದ್ದಾನೆ. ಕಳೆದ ಒಂದುವಾರದಿಂದ ಕೊಡಗಿನ ಗ್ರಾಮೀಣ ಭಾಗಗಳಲ್ಲಿ ಸಂಜೆಯ ವೇಳೆ ಮಳೆಯಾಗುತ್ತಿದೆ. ಇನ್ನೂ ಶಿವಮೊಗ್ಗ ನಗರ ಸೇರಿದಂತೆ ಜಿಲ್ಲೆಯ ಹಲವೆಡೆ ಮಳೆ ಬಿದ್ದಿದ್ದು ಬಿಸಿಲಿನಿಂದ ಬಸವಳಿದ ಜನಕ್ಕೆ, ವರುಣ ಕೊಂಚ ರಿಲ್ಯಾಕ್ಸ್ ಕೊಟ್ಟಿದ್ದಾನೆ. ಚಿಕ್ಕಮಗಳೂರಿನ, ಬಾಳೆಹೊನ್ನೂರು, ಎನ್‍ಆರ್‍ಪುರ, ಆವುತಿ, ಹಂಗರವಳ್ಳಿ, ಕೆರೆಮಕ್ಕಿ, ಬೈಗೂರು ಸೇರಿದಂತೆ ಹಲವೆಡೆ ಭಾರೀ ಮಳೆಯಾಗಿದೆ. ಮಳೆಯಿಂದ ರೈತರು ಹಾಗೂ ಕಾಫಿ ಬೆಳೆಗಾರರಲ್ಲಿ ಸಂಭ್ರಮ ಮನೆಮಾಡಿದೆ.

ವಿಜಯಪುರ ಜಿಲ್ಲೆಯ ಹಲವೆಡೆ ಬಿರುಗಾಳಿ ಸಹಿತ ಮಳೆಯಾಗಿದ್ದು, ವಿಜಯಪುರ ನಗರ, ತಿಕೋಟ ತಾಲೂಕಿನ ಘೋಣಸಗಿ, ಬಾಬಾನಗರ, ಹುಬನೂರು, ಸೋಮದೇವರಹಟ್ಟಿ, ಬಿಜ್ಜರಗಿ, ಕಳ್ಳಕವಟಗಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ಗಾಳಿ ಸಹಿತ ಹಗುರ ಮಳೆಯಾಗಿದೆ. ಕಲಬುರಗಿ ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಹಲವಡೆ ಜೋರು ಮಳೆಯಾಗಿದೆ. ಕಲಬುರಗಿ ನಗರ ಸೇರಿ ಜಿಲ್ಲೆಯ ಹಲವಡೆ ಮೋಡ ಕವಿದ ವಾತಾವರಣವಿದ್ದು, ರಾತ್ರಿ ವೇಳೆ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

₹2.34 ಕೋಟಿ ಮೌಲ್ಯದ ಅಡಿಕೆ ಜಪ್ತಿ – ಶಿವಮೊಗ್ಗದ 8 ಮಂದಿಯ ವಿರುದ್ಧ ಕೇಸ್..!

ಮಹಾರಾಷ್ಟ್ರದ ಹಿಂಗೋಲಿಯಲ್ಲಿ ₹2.34 ಕೋಟಿ ಮೌಲ್ಯದ 88,544 ಕೆ.ಜಿ. ಅಡಿಕೆಯನ್ನು ಆಹಾರ ಸುರಕ್ಷತಾ…

6 minutes ago

ಹಲಸು ಅಭಿವೃದ್ಧಿಗೆ ರಾಷ್ಟ್ರೀಯ ಮಂಡಳಿ ಸ್ಥಾಪಿಸಲು ಮಾಜಿ ಪ್ರಧಾನಿ ದೇವೇ ಗೌಡ ಒತ್ತಾಯ

ಬೆಂಗಳೂರು ಹಣ್ಣು ಮೇಳಕ್ಕೆ ಭೇಟಿ ನೀಡಿದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು…

12 minutes ago

ಕಾಪುವಿನಲ್ಲಿ ಆಹ್ವಾನಿತರ ಮುಕ್ತ ಚೆಸ್ ಸ್ಪರ್ಧೆ ಯಶಸ್ವಿ – ಶ್ರೀ ನಾರಾಯಣ ಗುರು ಸ್ಕೂಲ್ ಆಫ್ ಚೆಸ್ ಆಯೋಜನೆ

ಕಾಪುವಿನ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆದ ಆಹ್ವಾನಿತರ ಮುಕ್ತ ಚೆಸ್ ಸ್ಪರ್ಧೆಯಲ್ಲಿ…

7 hours ago

ಭಾರತದ 365 ಆಹಾರ ಉತ್ಪನ್ನಗಳಲ್ಲಿ ಕೀಟನಾಶಕ, ಭಾರೀ ಲೋಹಗಳ ಅವಶೇಷ ಪತ್ತೆ..!

ಯುರೋಪಿಯನ್ ಒಕ್ಕೂಟವು 365 ಭಾರತೀಯ ಆಹಾರ ಮತ್ತು ಕೃಷಿ ಉತ್ಪನ್ನಗಳಲ್ಲಿ ಕೀಟನಾಶಕ ಹಾಗೂ…

7 hours ago

ನೇಪಾಳದಿಂದ ಭಾರತೀಯ ಮಾವಿನ ಹಣ್ಣಿಗೆ ನಿರ್ಬಂಧ – ಕೀಟನಾಶಕ ಅಂಶಗಳು ಪತ್ತೆ ಹಿನ್ನೆಲೆ ಕ್ರಮ

ಕೀಟನಾಶಕ ಅಂಶಗಳು ಪತ್ತೆಯಾದ ಹಿನ್ನೆಲೆಯಲ್ಲಿ ನೇಪಾಳ ಸರ್ಕಾರ ಭಾರತೀಯ ಮಾವಿನ ಹಣ್ಣಿನ ಆಮದಿಗೆ…

7 hours ago

ಅಡಿಕೆ ಹಳದಿ ಎಲೆ, ಎಲೆ ಚುಕ್ಕಿ ರೋಗಕ್ಕೆ ತುರ್ತು ಪರಿಹಾರಕ್ಕೆ ಒತ್ತಾಯ – ಕೇಂದ್ರ ಕೃಷಿ ಸಚಿವರಿಗೆ ಸಂಸದ ಬ್ರಿಜೇಶ್ ಚೌಟ ಮನವಿ

ಅಡಿಕೆಗೆ ವ್ಯಾಪಕವಾಗಿ ಹರಡಿರುವ ಹಳದಿ ಎಲೆ ಹಾಗೂ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ…

8 hours ago