ಬಿಸಿಲಿನ ತಾಪ(Temperature) ದಿನದಿಂದ ದಿನಕ್ಕೆ ಏರುತ್ತಿದೆ. ಭೂಮಿ(Earth) ಕಾದ ಕಾವಲಿಯಂತಾಗಿದೆ. ಬಿರು ಬಿಸಿಲಿಗೆ ಜನ ಬಸವಳಿದಿದ್ದಾರೆ. ಪ್ರಾಣಿ ಪಕ್ಷಿಗಳು ನೀರು ಆಹಾರಕ್ಕಾಗಿ ಪರದಾಡುವಂತಾಗಿದೆ. ವರುಣನ ಕೃಪೆಗಾಗಿ ಜನ ಕಾಯುತ್ತಿದ್ದಾರೆ. ಈ ಮಧ್ಯೆ ತೀವ್ರ ಬೇಸಿಗೆಯ ನಡುವೆಯೂ, ಹಲವು ಜಿಲ್ಲೆಗಳಲ್ಲಿ ವರುಣ (Rain) ತಂಪೆರೆದಿದ್ದಾನೆ. ಶಿವಮೊಗ್ಗ (Shivamogga), ಮಡಿಕೇರಿ (Madikeri), ಚಿಕ್ಕಮಗಳೂರು (Chikkamagaluru), ವಿಜಯಪುರ ಸೇರಿದಂತೆ ಕಲಬುರಗಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮಳೆಯಾಗಿದೆ.
ವಿಜಯಪುರ ಜಿಲ್ಲೆಯ ಹಲವೆಡೆ ಬಿರುಗಾಳಿ ಸಹಿತ ಮಳೆಯಾಗಿದ್ದು, ವಿಜಯಪುರ ನಗರ, ತಿಕೋಟ ತಾಲೂಕಿನ ಘೋಣಸಗಿ, ಬಾಬಾನಗರ, ಹುಬನೂರು, ಸೋಮದೇವರಹಟ್ಟಿ, ಬಿಜ್ಜರಗಿ, ಕಳ್ಳಕವಟಗಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ಗಾಳಿ ಸಹಿತ ಹಗುರ ಮಳೆಯಾಗಿದೆ. ಕಲಬುರಗಿ ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಹಲವಡೆ ಜೋರು ಮಳೆಯಾಗಿದೆ. ಕಲಬುರಗಿ ನಗರ ಸೇರಿ ಜಿಲ್ಲೆಯ ಹಲವಡೆ ಮೋಡ ಕವಿದ ವಾತಾವರಣವಿದ್ದು, ರಾತ್ರಿ ವೇಳೆ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಹಾರಾಷ್ಟ್ರದ ಹಿಂಗೋಲಿಯಲ್ಲಿ ₹2.34 ಕೋಟಿ ಮೌಲ್ಯದ 88,544 ಕೆ.ಜಿ. ಅಡಿಕೆಯನ್ನು ಆಹಾರ ಸುರಕ್ಷತಾ…
ಬೆಂಗಳೂರು ಹಣ್ಣು ಮೇಳಕ್ಕೆ ಭೇಟಿ ನೀಡಿದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು…
ಕಾಪುವಿನ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆದ ಆಹ್ವಾನಿತರ ಮುಕ್ತ ಚೆಸ್ ಸ್ಪರ್ಧೆಯಲ್ಲಿ…
ಯುರೋಪಿಯನ್ ಒಕ್ಕೂಟವು 365 ಭಾರತೀಯ ಆಹಾರ ಮತ್ತು ಕೃಷಿ ಉತ್ಪನ್ನಗಳಲ್ಲಿ ಕೀಟನಾಶಕ ಹಾಗೂ…
ಕೀಟನಾಶಕ ಅಂಶಗಳು ಪತ್ತೆಯಾದ ಹಿನ್ನೆಲೆಯಲ್ಲಿ ನೇಪಾಳ ಸರ್ಕಾರ ಭಾರತೀಯ ಮಾವಿನ ಹಣ್ಣಿನ ಆಮದಿಗೆ…
ಅಡಿಕೆಗೆ ವ್ಯಾಪಕವಾಗಿ ಹರಡಿರುವ ಹಳದಿ ಎಲೆ ಹಾಗೂ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ…