ಬಿಸಿಲಿನ ತಾಪ(Temperature) ದಿನದಿಂದ ದಿನಕ್ಕೆ ಏರುತ್ತಿದೆ. ಭೂಮಿ(Earth) ಕಾದ ಕಾವಲಿಯಂತಾಗಿದೆ. ಬಿರು ಬಿಸಿಲಿಗೆ ಜನ ಬಸವಳಿದಿದ್ದಾರೆ. ಪ್ರಾಣಿ ಪಕ್ಷಿಗಳು ನೀರು ಆಹಾರಕ್ಕಾಗಿ ಪರದಾಡುವಂತಾಗಿದೆ. ವರುಣನ ಕೃಪೆಗಾಗಿ ಜನ ಕಾಯುತ್ತಿದ್ದಾರೆ. ಈ ಮಧ್ಯೆ ತೀವ್ರ ಬೇಸಿಗೆಯ ನಡುವೆಯೂ, ಹಲವು ಜಿಲ್ಲೆಗಳಲ್ಲಿ ವರುಣ (Rain) ತಂಪೆರೆದಿದ್ದಾನೆ. ಶಿವಮೊಗ್ಗ (Shivamogga), ಮಡಿಕೇರಿ (Madikeri), ಚಿಕ್ಕಮಗಳೂರು (Chikkamagaluru), ವಿಜಯಪುರ ಸೇರಿದಂತೆ ಕಲಬುರಗಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮಳೆಯಾಗಿದೆ.
ವಿಜಯಪುರ ಜಿಲ್ಲೆಯ ಹಲವೆಡೆ ಬಿರುಗಾಳಿ ಸಹಿತ ಮಳೆಯಾಗಿದ್ದು, ವಿಜಯಪುರ ನಗರ, ತಿಕೋಟ ತಾಲೂಕಿನ ಘೋಣಸಗಿ, ಬಾಬಾನಗರ, ಹುಬನೂರು, ಸೋಮದೇವರಹಟ್ಟಿ, ಬಿಜ್ಜರಗಿ, ಕಳ್ಳಕವಟಗಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ಗಾಳಿ ಸಹಿತ ಹಗುರ ಮಳೆಯಾಗಿದೆ. ಕಲಬುರಗಿ ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಹಲವಡೆ ಜೋರು ಮಳೆಯಾಗಿದೆ. ಕಲಬುರಗಿ ನಗರ ಸೇರಿ ಜಿಲ್ಲೆಯ ಹಲವಡೆ ಮೋಡ ಕವಿದ ವಾತಾವರಣವಿದ್ದು, ರಾತ್ರಿ ವೇಳೆ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…
ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿಸಿಲು, ಮೋಡ ಮತ್ತು ಬಿಡುವಿನ ಸಾಮಾನ್ಯ ಮಳೆ ಮುಂದುವರಿಯುವ…
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…