ಬಿಸಿಲಿನ ತಾಪ(Temperature) ದಿನದಿಂದ ದಿನಕ್ಕೆ ಏರುತ್ತಿದೆ. ಭೂಮಿ(Earth) ಕಾದ ಕಾವಲಿಯಂತಾಗಿದೆ. ಬಿರು ಬಿಸಿಲಿಗೆ ಜನ ಬಸವಳಿದಿದ್ದಾರೆ. ಪ್ರಾಣಿ ಪಕ್ಷಿಗಳು ನೀರು ಆಹಾರಕ್ಕಾಗಿ ಪರದಾಡುವಂತಾಗಿದೆ. ವರುಣನ ಕೃಪೆಗಾಗಿ ಜನ ಕಾಯುತ್ತಿದ್ದಾರೆ. ಈ ಮಧ್ಯೆ ತೀವ್ರ ಬೇಸಿಗೆಯ ನಡುವೆಯೂ, ಹಲವು ಜಿಲ್ಲೆಗಳಲ್ಲಿ ವರುಣ (Rain) ತಂಪೆರೆದಿದ್ದಾನೆ. ಶಿವಮೊಗ್ಗ (Shivamogga), ಮಡಿಕೇರಿ (Madikeri), ಚಿಕ್ಕಮಗಳೂರು (Chikkamagaluru), ವಿಜಯಪುರ ಸೇರಿದಂತೆ ಕಲಬುರಗಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮಳೆಯಾಗಿದೆ.
ವಿಜಯಪುರ ಜಿಲ್ಲೆಯ ಹಲವೆಡೆ ಬಿರುಗಾಳಿ ಸಹಿತ ಮಳೆಯಾಗಿದ್ದು, ವಿಜಯಪುರ ನಗರ, ತಿಕೋಟ ತಾಲೂಕಿನ ಘೋಣಸಗಿ, ಬಾಬಾನಗರ, ಹುಬನೂರು, ಸೋಮದೇವರಹಟ್ಟಿ, ಬಿಜ್ಜರಗಿ, ಕಳ್ಳಕವಟಗಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ಗಾಳಿ ಸಹಿತ ಹಗುರ ಮಳೆಯಾಗಿದೆ. ಕಲಬುರಗಿ ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಹಲವಡೆ ಜೋರು ಮಳೆಯಾಗಿದೆ. ಕಲಬುರಗಿ ನಗರ ಸೇರಿ ಜಿಲ್ಲೆಯ ಹಲವಡೆ ಮೋಡ ಕವಿದ ವಾತಾವರಣವಿದ್ದು, ರಾತ್ರಿ ವೇಳೆ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…