ಬಿಸಿಲಿನ ತಾಪ(Temperature) ದಿನದಿಂದ ದಿನಕ್ಕೆ ಏರುತ್ತಿದೆ. ಭೂಮಿ(Earth) ಕಾದ ಕಾವಲಿಯಂತಾಗಿದೆ. ಬಿರು ಬಿಸಿಲಿಗೆ ಜನ ಬಸವಳಿದಿದ್ದಾರೆ. ಪ್ರಾಣಿ ಪಕ್ಷಿಗಳು ನೀರು ಆಹಾರಕ್ಕಾಗಿ ಪರದಾಡುವಂತಾಗಿದೆ. ವರುಣನ ಕೃಪೆಗಾಗಿ ಜನ ಕಾಯುತ್ತಿದ್ದಾರೆ. ಈ ಮಧ್ಯೆ ತೀವ್ರ ಬೇಸಿಗೆಯ ನಡುವೆಯೂ, ಹಲವು ಜಿಲ್ಲೆಗಳಲ್ಲಿ ವರುಣ (Rain) ತಂಪೆರೆದಿದ್ದಾನೆ. ಶಿವಮೊಗ್ಗ (Shivamogga), ಮಡಿಕೇರಿ (Madikeri), ಚಿಕ್ಕಮಗಳೂರು (Chikkamagaluru), ವಿಜಯಪುರ ಸೇರಿದಂತೆ ಕಲಬುರಗಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮಳೆಯಾಗಿದೆ.
ವಿಜಯಪುರ ಜಿಲ್ಲೆಯ ಹಲವೆಡೆ ಬಿರುಗಾಳಿ ಸಹಿತ ಮಳೆಯಾಗಿದ್ದು, ವಿಜಯಪುರ ನಗರ, ತಿಕೋಟ ತಾಲೂಕಿನ ಘೋಣಸಗಿ, ಬಾಬಾನಗರ, ಹುಬನೂರು, ಸೋಮದೇವರಹಟ್ಟಿ, ಬಿಜ್ಜರಗಿ, ಕಳ್ಳಕವಟಗಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ಗಾಳಿ ಸಹಿತ ಹಗುರ ಮಳೆಯಾಗಿದೆ. ಕಲಬುರಗಿ ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಹಲವಡೆ ಜೋರು ಮಳೆಯಾಗಿದೆ. ಕಲಬುರಗಿ ನಗರ ಸೇರಿ ಜಿಲ್ಲೆಯ ಹಲವಡೆ ಮೋಡ ಕವಿದ ವಾತಾವರಣವಿದ್ದು, ರಾತ್ರಿ ವೇಳೆ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…
ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…